ಮೈಸೂರು: ಮೈಸೂರು ಜಿಲ್ಲಾ ಮಟ್ಟದಲ್ಲಿ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್, ಕರ್ನಾಟಕ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್, ಮೈಸೂರು ಅಥ್ಲೆಟಿಕ್ಸ್ ಕ್ಲಬ್ ಸಹಯೋಗದಲ್ಲಿ ಆಯೋಜಿಸಿರುವ ೪೨ನೇ ಕರ್ನಾಟಕ ರಾಜ್ಯಮಟ್ಟದ ವಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ಷಿಪ್-೨೦೨೨ ಶನಿವಾರ ಚಾಲನೆ ದೊರೆಯಿತು.
ಮೈಸೂರು ವಿಶ್ವವಿದ್ಯಾನಿಲಯದ ಓವೆಲ್ ಮೈದಾನದಲ್ಲಿ ಆಯೋಜಿಸಿರುವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ಷಿಪ್ಗೆ ಶಾಸಕ ಎಲ್.ನಾಗೇಂದ್ರ ಚಾಲನೆ ನೀಡಿದರು.
ಹವಾಮಾನ ವೈಫರೀತ್ಯದಿಂದಾಗಿ ಶೀತಗಾಳಿ, ಆಗಾಗ್ಗೆ ಮಳೆ ಸುರಿಯುತ್ತಿರುವುದನ್ನೂ ಲೆಕ್ಕಿಸದೇ ರಾಜ್ಯದ ಮೂಲೆ ಮೂಲೆಗಳಿಂದ ಬಂದಿರುವ ೫೦೦ಕ್ಕೂ ಹೆಚ್ಚು ಹಿರಿಯ ಕ್ರೀಡಾಪಟುಗಳು ಅತ್ಯಂತ ಉತ್ಸಾಹದಿಂದ ಕ್ರೀಡಾ ಕೂಟದಲ್ಲಿ ಪಾಲ್ಗೊಂಡಿದ್ದರು.
ಕರ್ನಾಟಕ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಡೇವಿಡ್ ಪ್ರೇಮನಾಥ್ ಮಾತನಾಡಿ, ಮುಂಬರುವ ಏಷ್ಯಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರತಿಯೊಬ್ಬರೂ ಸಕ್ರೀಯವಾಗಿ ಪಾಲ್ಗೊಳ್ಳಬೇಕು. ಅನಧಿಕೃತ ಕ್ಲಬ್ಗಳು ನಡೆಸುವ ಕ್ರೀಡಾಕೂಟಗಳಲ್ಲಿ ಯಾವುದೇ ಕಾರಣಕ್ಕೂ ಭಾಗವಹಿಸಬಾರದು ಎಂದು ಹೇಳಿದರು.
ಮಹಾಪೌರ ಶಿವಕುಮಾರ್, ಹಿರಿಯ ಪತ್ರಕರ್ತ ರವೀಂದ್ರ ಭಟ್ ಮಾತನಾಡಿದರು. ಮೈಸೂರು ಜಿಲ್ಲಾ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಸುಮನಾ ನರಸಿಂಹಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಮೈಸೂರು ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷರೂ ಆದ ಮಾಜಿ ಶಾಸಕ ವಾಸು, ಮೈವಿವಿ ದೈಹಿಕ ಶಿಕ್ಷಣ ಇಲಾಖೆ ನಿರ್ದೇಶಕ ಡಾ.ಪಿ.ಕೃಷ್ಣಯ್ಶ, ನಿವೃತ್ತ ನಿರ್ದೇಶಕ ಡಾ.ಸಿ.ಕೃಷ್ಣ, ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ವಾಣಿಜ್ಯ ತೆರಿಗೆ ಇಲಾಖೆ ಉಪ ಆಯುಕ್ತರಾದ ಶ್ರುತಿ, ಕರ್ನಾಟಕ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಕಾರ್ಯದರ್ಶಿ ಎಚ್.ಸಿ.ಷಣ್ಮುಗಂ, ಮೈಸೂರು ಜಿಲ್ಲಾ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಪದಾಧಿಕಾರಿಗಳಾದ ಎನ್.ಆರ್.ಶಂಕರರಾವ್, ಕೆ.ಎನ್.ಸೋಮಶೇಖರ್, ಎಂ.ಯೋಗೇಂದ್ರ, ಸಿ.ಎನ್.ಗಣೇಶ್, ಪಾರ್ವತಿ ಕಾಂತರಾಜ್, ಸಿ.ಆರ್.ಆನಂದ, ಎಂ.ಎಂ.ನಾಣಯ, ಬಿ.ಬಸವರಾಜು, ಮಹದೇವಯ್ಶ, ಬಿ.ಎಸ್.ಜಯಶ್ರೀ, ಎಸ್.ಮಹದೇವು, ಎಂ.ಎಲ್.ಅಶೋಕ್, ಸಿ.ಕೆ.ಮುರಳೀಧರನ್, ಬಿ.ಕೆ.ಸೋಮಶೇಖರ್, ಮಹದೇವರಾವ್, ಎಂ.ಶಶಿಧರನ್ ಕುಟ್ಟಿ, ಚನ್ನಯ್ಶ, ಎಂ.ಎಸ್.ಮಹೇಶ್, ರಾಣಿ ಬಿ.ರಾಜ್, ಅಂತಾರಾಷ್ಟ್ರೀಯ ಅಥ್ಲೀಟ್ಗಳು ಪಾಲ್ಗೊಂಡಿದ್ದರು.
ಕೆ.ಎಂ.ಅನುಚೇತನ್ ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆಗೆ ಕನ್ನಡಿ ನಿರ್ಬಂಧ ಮೈಸೂರು: ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡಿ ನಗರದ ಸ್ವಚ್ಛತೆಗೆ ಸವಾಲಾಗಿದ್ದವರಿಗೆ…
ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ನಗರದ ಶೈಕ್ಷಣಿಕ ಪರಂಪರೆಯ ಭಾಗವಾಗಿರುವ ಮಹಾರಾಜ ಕಾಲೇಜು ವಿದ್ಯಾರ್ಥಿನಿಲಯ ಕಟ್ಟಡ ಈಗ ಆತಂಕದ ಕೇಂದ್ರವಾಗಿದೆ.…
ಶ್ರೀರಂಗಪಟ್ಟಣ : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…
ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…
ಅಮೃತ್ಸರ : ಪಂಜಾಬ್ನ ಅಮೃತ್ಸರ್ ಮತ್ತು ಜಲಂಧರ್ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…