ಜಿಲ್ಲೆಗಳು

42ನೇ ಕರ್ನಾಟಕ ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್ ಗೆ ನಾಗೇಂದ್ರ ಚಾಲನೆ

ಮೈಸೂರು: ಮೈಸೂರು ಜಿಲ್ಲಾ ಮಟ್ಟದಲ್ಲಿ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್, ಕರ್ನಾಟಕ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್, ಮೈಸೂರು ಅಥ್ಲೆಟಿಕ್ಸ್ ಕ್ಲಬ್ ಸಹಯೋಗದಲ್ಲಿ ಆಯೋಜಿಸಿರುವ ೪೨ನೇ ಕರ್ನಾಟಕ ರಾಜ್ಯಮಟ್ಟದ ವಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್-೨೦೨೨ ಶನಿವಾರ ಚಾಲನೆ ದೊರೆಯಿತು.

ಮೈಸೂರು ವಿಶ್ವವಿದ್ಯಾನಿಲಯದ ಓವೆಲ್ ಮೈದಾನದಲ್ಲಿ ಆಯೋಜಿಸಿರುವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ಗೆ ಶಾಸಕ ಎಲ್.ನಾಗೇಂದ್ರ ಚಾಲನೆ ನೀಡಿದರು.

ಹವಾಮಾನ ವೈಫರೀತ್ಯದಿಂದಾಗಿ ಶೀತಗಾಳಿ, ಆಗಾಗ್ಗೆ ಮಳೆ ಸುರಿಯುತ್ತಿರುವುದನ್ನೂ ಲೆಕ್ಕಿಸದೇ ರಾಜ್ಯದ ಮೂಲೆ ಮೂಲೆಗಳಿಂದ ಬಂದಿರುವ ೫೦೦ಕ್ಕೂ ಹೆಚ್ಚು ಹಿರಿಯ ಕ್ರೀಡಾಪಟುಗಳು ಅತ್ಯಂತ ಉತ್ಸಾಹದಿಂದ ಕ್ರೀಡಾ ಕೂಟದಲ್ಲಿ ಪಾಲ್ಗೊಂಡಿದ್ದರು.

ಕರ್ನಾಟಕ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಡೇವಿಡ್ ಪ್ರೇಮನಾಥ್ ಮಾತನಾಡಿ, ಮುಂಬರುವ ಏಷ್ಯಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರತಿಯೊಬ್ಬರೂ ಸಕ್ರೀಯವಾಗಿ ಪಾಲ್ಗೊಳ್ಳಬೇಕು. ಅನಧಿಕೃತ ಕ್ಲಬ್‌ಗಳು ನಡೆಸುವ ಕ್ರೀಡಾಕೂಟಗಳಲ್ಲಿ ಯಾವುದೇ ಕಾರಣಕ್ಕೂ ಭಾಗವಹಿಸಬಾರದು ಎಂದು ಹೇಳಿದರು.

ಮಹಾಪೌರ ಶಿವಕುಮಾರ್, ಹಿರಿಯ ಪತ್ರಕರ್ತ ರವೀಂದ್ರ ಭಟ್ ಮಾತನಾಡಿದರು. ಮೈಸೂರು ಜಿಲ್ಲಾ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಸುಮನಾ ನರಸಿಂಹಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಮೈಸೂರು ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷರೂ ಆದ ಮಾಜಿ ಶಾಸಕ ವಾಸು, ಮೈವಿವಿ ದೈಹಿಕ ಶಿಕ್ಷಣ ಇಲಾಖೆ ನಿರ್ದೇಶಕ ಡಾ.ಪಿ.ಕೃಷ್ಣಯ್ಶ, ನಿವೃತ್ತ ನಿರ್ದೇಶಕ ಡಾ.ಸಿ.ಕೃಷ್ಣ, ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ವಾಣಿಜ್ಯ ತೆರಿಗೆ ಇಲಾಖೆ ಉಪ ಆಯುಕ್ತರಾದ ಶ್ರುತಿ, ಕರ್ನಾಟಕ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಕಾರ್ಯದರ್ಶಿ ಎಚ್.ಸಿ.ಷಣ್ಮುಗಂ, ಮೈಸೂರು ಜಿಲ್ಲಾ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಪದಾಧಿಕಾರಿಗಳಾದ ಎನ್.ಆರ್.ಶಂಕರರಾವ್, ಕೆ.ಎನ್.ಸೋಮಶೇಖರ್, ಎಂ.ಯೋಗೇಂದ್ರ, ಸಿ.ಎನ್.ಗಣೇಶ್, ಪಾರ್ವತಿ ಕಾಂತರಾಜ್, ಸಿ.ಆರ್.ಆನಂದ, ಎಂ.ಎಂ.ನಾಣಯ, ಬಿ.ಬಸವರಾಜು, ಮಹದೇವಯ್ಶ, ಬಿ.ಎಸ್.ಜಯಶ್ರೀ, ಎಸ್.ಮಹದೇವು, ಎಂ.ಎಲ್.ಅಶೋಕ್, ಸಿ.ಕೆ.ಮುರಳೀಧರನ್, ಬಿ.ಕೆ.ಸೋಮಶೇಖರ್, ಮಹದೇವರಾವ್, ಎಂ.ಶಶಿಧರನ್ ಕುಟ್ಟಿ, ಚನ್ನಯ್ಶ, ಎಂ.ಎಸ್.ಮಹೇಶ್, ರಾಣಿ ಬಿ.ರಾಜ್, ಅಂತಾರಾಷ್ಟ್ರೀಯ ಅಥ್ಲೀಟ್‌ಗಳು ಪಾಲ್ಗೊಂಡಿದ್ದರು.

andolana

Recent Posts

‘ಕೊಲೆ ಬಗ್ಗೆ ನಮಗೆ ಗೊತ್ತೇ ಇರಲಿಲ್ಲ’

ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…

23 mins ago

ಕೊಡಗು ಜಿಲ್ಲೆಯಾದ್ಯಂತ ಚುರುಕುಗೊಂಡ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…

4 hours ago

ಮನುಷ್ಯ ಕುಲದ ಪ್ರಜ್ಞಾವಂತಿಕೆ ವಿಕಾಸಕ್ಕೆ ಗಾಂಧೀಜಿ ಕೈಮರ

ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…

4 hours ago

ಗಾಂಧಿ ಮೈಮೇಲೆ ಬಂದಂತೆ ಬದುಕಿದ್ದ ಹುಚ್ಚೇಗೌಡರು

ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…

4 hours ago

ವಿಲಾಯತಿಗೆ ಹೊರಟವನು ಜಾತಿ ಬಾಹಿರನಾದೆ

ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…

4 hours ago