ಜಿಲ್ಲೆಗಳು

42ನೇ ಕರ್ನಾಟಕ ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್ ಗೆ ನಾಗೇಂದ್ರ ಚಾಲನೆ

ಮೈಸೂರು: ಮೈಸೂರು ಜಿಲ್ಲಾ ಮಟ್ಟದಲ್ಲಿ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್, ಕರ್ನಾಟಕ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್, ಮೈಸೂರು ಅಥ್ಲೆಟಿಕ್ಸ್ ಕ್ಲಬ್ ಸಹಯೋಗದಲ್ಲಿ ಆಯೋಜಿಸಿರುವ ೪೨ನೇ ಕರ್ನಾಟಕ ರಾಜ್ಯಮಟ್ಟದ ವಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್-೨೦೨೨ ಶನಿವಾರ ಚಾಲನೆ ದೊರೆಯಿತು.

ಮೈಸೂರು ವಿಶ್ವವಿದ್ಯಾನಿಲಯದ ಓವೆಲ್ ಮೈದಾನದಲ್ಲಿ ಆಯೋಜಿಸಿರುವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ಗೆ ಶಾಸಕ ಎಲ್.ನಾಗೇಂದ್ರ ಚಾಲನೆ ನೀಡಿದರು.

ಹವಾಮಾನ ವೈಫರೀತ್ಯದಿಂದಾಗಿ ಶೀತಗಾಳಿ, ಆಗಾಗ್ಗೆ ಮಳೆ ಸುರಿಯುತ್ತಿರುವುದನ್ನೂ ಲೆಕ್ಕಿಸದೇ ರಾಜ್ಯದ ಮೂಲೆ ಮೂಲೆಗಳಿಂದ ಬಂದಿರುವ ೫೦೦ಕ್ಕೂ ಹೆಚ್ಚು ಹಿರಿಯ ಕ್ರೀಡಾಪಟುಗಳು ಅತ್ಯಂತ ಉತ್ಸಾಹದಿಂದ ಕ್ರೀಡಾ ಕೂಟದಲ್ಲಿ ಪಾಲ್ಗೊಂಡಿದ್ದರು.

ಕರ್ನಾಟಕ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಡೇವಿಡ್ ಪ್ರೇಮನಾಥ್ ಮಾತನಾಡಿ, ಮುಂಬರುವ ಏಷ್ಯಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರತಿಯೊಬ್ಬರೂ ಸಕ್ರೀಯವಾಗಿ ಪಾಲ್ಗೊಳ್ಳಬೇಕು. ಅನಧಿಕೃತ ಕ್ಲಬ್‌ಗಳು ನಡೆಸುವ ಕ್ರೀಡಾಕೂಟಗಳಲ್ಲಿ ಯಾವುದೇ ಕಾರಣಕ್ಕೂ ಭಾಗವಹಿಸಬಾರದು ಎಂದು ಹೇಳಿದರು.

ಮಹಾಪೌರ ಶಿವಕುಮಾರ್, ಹಿರಿಯ ಪತ್ರಕರ್ತ ರವೀಂದ್ರ ಭಟ್ ಮಾತನಾಡಿದರು. ಮೈಸೂರು ಜಿಲ್ಲಾ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಸುಮನಾ ನರಸಿಂಹಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಮೈಸೂರು ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷರೂ ಆದ ಮಾಜಿ ಶಾಸಕ ವಾಸು, ಮೈವಿವಿ ದೈಹಿಕ ಶಿಕ್ಷಣ ಇಲಾಖೆ ನಿರ್ದೇಶಕ ಡಾ.ಪಿ.ಕೃಷ್ಣಯ್ಶ, ನಿವೃತ್ತ ನಿರ್ದೇಶಕ ಡಾ.ಸಿ.ಕೃಷ್ಣ, ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ವಾಣಿಜ್ಯ ತೆರಿಗೆ ಇಲಾಖೆ ಉಪ ಆಯುಕ್ತರಾದ ಶ್ರುತಿ, ಕರ್ನಾಟಕ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಕಾರ್ಯದರ್ಶಿ ಎಚ್.ಸಿ.ಷಣ್ಮುಗಂ, ಮೈಸೂರು ಜಿಲ್ಲಾ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಪದಾಧಿಕಾರಿಗಳಾದ ಎನ್.ಆರ್.ಶಂಕರರಾವ್, ಕೆ.ಎನ್.ಸೋಮಶೇಖರ್, ಎಂ.ಯೋಗೇಂದ್ರ, ಸಿ.ಎನ್.ಗಣೇಶ್, ಪಾರ್ವತಿ ಕಾಂತರಾಜ್, ಸಿ.ಆರ್.ಆನಂದ, ಎಂ.ಎಂ.ನಾಣಯ, ಬಿ.ಬಸವರಾಜು, ಮಹದೇವಯ್ಶ, ಬಿ.ಎಸ್.ಜಯಶ್ರೀ, ಎಸ್.ಮಹದೇವು, ಎಂ.ಎಲ್.ಅಶೋಕ್, ಸಿ.ಕೆ.ಮುರಳೀಧರನ್, ಬಿ.ಕೆ.ಸೋಮಶೇಖರ್, ಮಹದೇವರಾವ್, ಎಂ.ಶಶಿಧರನ್ ಕುಟ್ಟಿ, ಚನ್ನಯ್ಶ, ಎಂ.ಎಸ್.ಮಹೇಶ್, ರಾಣಿ ಬಿ.ರಾಜ್, ಅಂತಾರಾಷ್ಟ್ರೀಯ ಅಥ್ಲೀಟ್‌ಗಳು ಪಾಲ್ಗೊಂಡಿದ್ದರು.

andolana

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

8 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

10 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

1 day ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago