ಜಿಲ್ಲೆಗಳು

ಮಂಡ್ಯ ಜಿಲ್ಲೆಯಿಂದ `ಕೈ’ ಟಿಕೆಟ್ ಬಯಸಿ 43 ಮಂದಿ ಅರ್ಜಿ ಸಲ್ಲಿಕೆ

ಮಂಡ್ಯ ಕ್ಷೇತ್ರವೊಂದರಿಂದಲೇ 17 ಮಂದಿ; ನಾಗಮಂಗಲದಿಂದ ಸಿಆರ್‌ಎಸ್ ಮಾತ್ರ

ಮಂಡ್ಯ: ಮಂಡ್ಯ ಜಿಲ್ಲೆಯ ಒಟ್ಟು ೭ ವಿಧಾನಸಭಾ ಕ್ಷೇತ್ರಗಳಿಂದ ಕಾಂಗ್ರೆಸ್ ಟಿಕೆಟ್ ಬಯಸಿ ೪೩ ಮಂದಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದು, ಮಂಡ್ಯ ವಿಧಾನಸಭಾ ಕ್ಷೇತ್ರವೊಂದರಿಂದಲೇ `ಕೈ’ ಟಿಕೆಟ್ ಪಡೆಯಲು ೧೬ ಮಂದಿ ಅರ್ಜಿ ಸಲ್ಲಿಸಿರುವುದು ವಿಶೇಷವಾಗಿದೆ.

ಮಂಡ್ಯ ಕ್ಷೇತ್ರ:

ಕಾಂಗ್ರೆಸ್ ಟಿಕೆಟ್‌ಗಾಗಿ ಮಾಜಿ ಸಚಿವ ಎಂ.ಎಸ್. ಆತ್ಮಾನಂದ, ಮಾಜಿ ಶಾಸಕ ಎಚ್.ಬಿ. ರಾಮು, ಮನ್‌ಮುಲ್ ನಿರ್ದೇಶಕ ಉಮ್ಮಡಹಳ್ಳಿ ಶಿವಕುಮಾರ್ (ಶಿವಪ್ಪ), ಕಾಂಗ್ರೆಸ್ ಮುಖಂಡರಾದ ಕೆ.ಕೆ.ರಾಧಾಕೃಷ್ಣ, ಗಣಿಗ ರವಿಕುಮಾರ್, ಕಾವೇರಿ ನರ್ಸಿಂಗ್ ಹೋಂನ ಡಾ.ಕೃಷ್ಣ, ಸಿದ್ದಾರೂಢ ಸತೀಶ್‌ಗೌಡ, ಎಂ.ಎಸ್ ಚಿದಂಬರ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಅಂಜನಾ ಶ್ರೀಕಾಂತ್, ಮೈಶುಗರ್ ಮಾಜಿ ಅಧ್ಯಕ್ಷ ಹಾಲಹಳ್ಳಿ ರಾಮಲಿಂಗಯ್ಯ, ಅಮರಾವತಿ ಚಂದ್ರಶೇಖರ್, ಜಿ.ಪಂ. ಮಾಜಿ ಸದಸ್ಯ ಬಿ.ಸಿ. ಶಿವಾನಂದ, ಬೆಂಗಳೂರು ಬಾರ್ ಕೌನ್ಸಿಲ್ ಮಾಜಿ ಅಧ್ಯಕ್ಷ ಹನಕೆರೆ ಶಿವರಾಮ್, ಹಾಲಹಳ್ಳಿ ಅಶೋಕ್, ಅಸಾದುಲ್ಲಾಖಾನ್, ಹೊಸಹಳ್ಳಿ ಶಿವಲಿಂಗೇಗೌಡ ಕಾಂಗ್ರೆಸ್ ಟಿಕೆಟ್ ಬಯಸಿ ೨ ಲಕ್ಷ ರೂ.ಗಳ ಡಿಡಿಯೊಂದಿಗೆ ಅರ್ಜಿ ಸಲ್ಲಿಸಿದ್ದಾರೆ.

ಮಂಡ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಇಬ್ಬರು, ಮೂವರು, ಹೆಚ್ಚೆಂದರೆ ಐದಾರು ಮಂದಿ ಆಕಾಂಕ್ಷಿಗಳಿದ್ದರು. ಆದರೆ ಮಂಡ್ಯ ಕ್ಷೇತ್ರದಲ್ಲಿ ಈ ಬಾರಿ ಬರೋಬ್ಬರಿ ೧೬ ಮಂದಿ ಟಿಕೆಟ್ ಬೇಕೆಂದು ಅರ್ಜಿ ಸಲ್ಲಿಸಿರುವುದು ಜನರ ಕುತೂಹಲ ಕೆರಳಿಸಿದೆ. ಇಷ್ಟು ಜನರಲ್ಲಿ ಅಂತಿಮ ಅಭ್ಯರ್ಥಿ ಯಾರಾಗಬಹುದೆಂಬುದು ಯಕ್ಷ ಪ್ರಶ್ನೆಯಾಗಿದೆ.

ಮದ್ದೂರು ಕ್ಷೇತ್ರ:

ಮದ್ದೂರು ಕ್ಷೇತ್ರದಿಂದ ಮೂರು ಮಂದಿ ಅರ್ಜಿ ಸಲ್ಲಿಸಿದ್ದು, ಕೆಪಿಸಿಸಿ ಸದಸ್ಯ ಎಸ್.ಗುರುಚರಣ್ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗಿಳಿಯಲು ಬಯಸಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದು, ಅಂತೆಯೇ ಮಾಜಿ ಶಾಸಕ ಬಿ.ರಾಮಕೃಷ್ಣ, ಶಂಕರೇಗೌಡ ಅರ್ಜಿ ಸಲ್ಲಿಸಿದ್ದಾರೆ.

ಮಳವಳ್ಳಿ ಕ್ಷೇತ್ರ:

ಮಳವಳ್ಳಿ ಕ್ಷೇತ್ರದಿಂದ ಮಾಜಿ ಸಚಿವ ಪಿ.ಎಂ.ನರೇAದ್ರಸ್ವಾಮಿ, ಮಾಜಿ ಶಾಸಕಿ ಮಲ್ಲಾಜಮ್ಮ, ಡಾ. ಮೂರ್ತಿ ಅರ್ಜಿ ಸಲ್ಲಿಸಿರುವ ಪ್ರಮುಖರು.

ನಾಗಮಂಗಲ ಕ್ಷೇತ್ರ:

ನಾಗಮಂಗಲ ಕ್ಷೇತ್ರದ `ಕೈ’ನಲ್ಲಿ ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ಹೊರತುಪಡಿಸಿ ಬೇರಾರು ಸ್ಪರ್ಧಾಕಾಂಕ್ಷಿಗಳಿಲ್ಲವಾಗಿದ್ದು, ಕ್ಷೇತ್ರದಿಂದ ಇವರೊಬ್ಬರೇ ಅರ್ಜಿ ಹಾಕಿದ್ದಾರೆ.

ಪಾಂಡವಪುರ: ಡಾ. ಎಚ್.ಎನ್. ರವೀಂದ್ರ, ಜಿಪಂ ಮಾಜಿ ಸದಸ್ಯ ಎನ್.ತ್ಯಾಗರಾಜು, ಕಾಗೇಪುರ ಆನಂದ, ನಾಗಭೂಷಣ್, ಸಚಿನ್ ಮಿಗ.

ಕೆ.ಆರ್.ಪೇಟೆ: ಮಾಜಿ ಶಾಸಕರಾದ ಕೆ.ಬಿ. ಚಂದ್ರಶೇಖರ್, ಬಿ. ಪ್ರಕಾಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಿಕ್ಕೇರಿ ಸುರೇಶ್, ನಾಗೇಂದ್ರ ಕುಮಾರ್, ಜಿಪಂ ಮಾಜಿ ಸದಸ್ಯ ಎಂ.ಡಿ.ಕೃಷ್ಣಮೂರ್ತಿ, ಮುಖಂಡ ವಿಜಯ್ ರಾಮೇಗೌಡ.

ಶ್ರೀರಂಗಪಟ್ಟಣ: ಮಾಜಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ವಕೀಲ ಪುಟ್ಟೇಗೌಡ, ಪಾಲಹಳ್ಳಿ ಚಂದ್ರಶೇಖರ್.

andolana

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

59 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

1 hour ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

3 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

18 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

21 hours ago