ಹುಣಸೂರಲ್ಲಿ ಶುಕ್ರವಾರ ಬೆಳಗ್ಗೆ 6.30ಕ್ಕೆ ಗುಡ್ಡಗಾಡು ಓಟ.
ಹುಣಸೂರು: ಹುಣಸೂರಿನಲ್ಲಿ ಡಿ.2ರ ಶುಕ್ರವಾರ ನಡೆಯಲಿರುವ ಮೈಸೂರು ವಿ.ವಿ.ಯ ಮಹಿಳಾ ಮತ್ತು ಪುರುಷರ ಕ್ರಾಸ್ ಕಂಟ್ರಿ(ಗುಡ್ಡಗಾಡು ಓಟ)ಸ್ಪರ್ಧೆಯಲ್ಲಿ 72 ಕಾಲೇಜುಗಳಲ್ಲಿ 191 ಮಹಿಳೆಯರು, 290 ಪುರುಷ ಓಟಗಾರರು ಸೇರಿ ಒಟ್ಟು 481ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ.
ಇಲ್ಲಿನ ಮಹಿಳಾ ಸರಕಾರಿ ಪದವಿ ಕಾಲೇಜಿನಿಂದ ನಡೆಯುತ್ತಿರುವ ಈ ಸ್ಪರ್ಧೆ ಶುಕ್ರವಾರ ಬೆಳಗ್ಗೆ 6.30ಕ್ಕೆ ಎಚ್.ಡಿ.ಕೋಟೆ ವೃತ್ತದಲ್ಲಿ ಶಾಸಕ ಎಚ್.ಪಿ.ಮಂಜುನಾಥ್ ಸ್ಪರ್ಧೆಗೆ ಚಾಲನೆ ನೀಡಿದರು, ವಿಧಾನಪರಿಷತ್ ಸದಸ್ಯರಾದ ಎಚ್.ವಿಶ್ವನಾಥ್, ಡಾ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಉಪ ವಿಭಾಗಾಧಿಕಾರಿ ರುಚಿಬಿಂದಾಲ್, ಡಿವೈಎಸ್ ರವಿಪ್ರಸಾದ್ ರವಿಪ್ರಸಾದ್ , ಡಾ.ಸರ್ವೇಶ್ರಾಜೇಅರಸ್ ಎಟ್ ಹಾಜರಿದ್ದಾರೆ. ನಗರದ ಹೊರವಲಯ ಸೇರಿದಂತೆ ವಿವಿಧ ವೃತ್ತಗಳ ಮೂಲಕ 10ಕಿ.ಮೀಟವನ್ನು ಪೂರೈಸಬೇಕಿದ್ದು, ಮಹಿಳಾ ಕಾಲೇಜಿನ ಸ್ಪರ್ಧೆ ಅಂತ್ಯಗೊಳ್ಳಲಿದೆ. ಮೈಸೂರು ವಿವಿಯ ದೈಹಿಕಶಿಕ್ಷಣ ವಿಭಾಗದ ಮುಖ್ಯಸ್ಥ ಡಾ.ಪಿ.ಕೃಷ್ಣಯ್ಯರ ನೇತೃತ್ವದಲ್ಲಿ ವಿವಿಧ ಕಾಲೇಜುಗಳ ನೂರು ಮಂದಿ ಅಧಿಕಾರಿಗಳ ತಂಡ ಹಾಗೂ ನೂರಕ್ಕೂ ಹೆಚ್ಚು ಸ್ಪಯಂಸೇವಕರು ಸ್ಪರ್ಧೆ ನಡೆಸಲಿದ್ದಾರೆ.
ಬೆಳಗ್ಗೆ 10ಕ್ಕೆ ಕಾಲೇಜು ಪ್ರಶಸ್ತಿ ವಿತರಣಾ ಸಮಾರಂಭ ನಡೆಯಲಿದೆ, ಸಿಡಿಸಿ ಅಧ್ಯಕ್ಷರೂ ಆದ ಶಾಸಕ ಮಂಜುನಾಥ್ ಬಹುಮಾನ ವಿತರಿಸಿದರು. ಅಂತರಾಷ್ಟ್ರೀಯ ಟ್ರಯಥ್ಲಾನ್ ಆಟಗಾರ್ತಿ ಡಾ.ಉಷಾಹೆಗ್ಗಡೆ ಸಮಾರೋಪ ಭಾಷಣ ಮಾಡುತ್ತಾರೆ. ನಗರಸಭೆ ಅಧ್ಯಕ್ಷೆ ಗೀತಾನಿಂಗರಾಜು, ಸದಸ್ಯ ಶ್ರೀನಾಥ್, ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕ ಡಾ.ಎಸ್.ಬಿ.ಅಪ್ಪಾಜಿಗೌಡ, ಪ್ರಾಚಾರ್ಯ ಜ್ಞಾನಪ್ರಕಾಶ್, ಸಿಡಿಸಿ ಸದಸ್ಯರು ಸೇರಿದಂತೆ ಪ್ರಮುಖರು ಭಾಗವಹಿಸಲಿದ್ದಾರೆಂದು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಬಾಸ್ಕರ್.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…