ಜಿಲ್ಲೆಗಳು

ಕ್ರಾಸ್‌ಕಂಟ್ರಿಗೆ 72ಕಾಲೇಜಿನ 481 ಕ್ರೀಡಾಪಟುಗಳ ನೊಂದಣಿ

ಹುಣಸೂರಲ್ಲಿ ಶುಕ್ರವಾರ ಬೆಳಗ್ಗೆ 6.30ಕ್ಕೆ ಗುಡ್ಡಗಾಡು ಓಟ.

ಹುಣಸೂರು: ಹುಣಸೂರಿನಲ್ಲಿ ಡಿ.2ರ ಶುಕ್ರವಾರ ನಡೆಯಲಿರುವ ಮೈಸೂರು ವಿ.ವಿ.ಯ ಮಹಿಳಾ ಮತ್ತು ಪುರುಷರ ಕ್ರಾಸ್ ಕಂಟ್ರಿ(ಗುಡ್ಡಗಾಡು ಓಟ)ಸ್ಪರ್ಧೆಯಲ್ಲಿ 72 ಕಾಲೇಜುಗಳಲ್ಲಿ 191 ಮಹಿಳೆಯರು, 290 ಪುರುಷ ಓಟಗಾರರು ಸೇರಿ ಒಟ್ಟು 481ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ.

ಇಲ್ಲಿನ ಮಹಿಳಾ ಸರಕಾರಿ ಪದವಿ ಕಾಲೇಜಿನಿಂದ ನಡೆಯುತ್ತಿರುವ ಈ ಸ್ಪರ್ಧೆ ಶುಕ್ರವಾರ ಬೆಳಗ್ಗೆ 6.30ಕ್ಕೆ ಎಚ್.ಡಿ.ಕೋಟೆ ವೃತ್ತದಲ್ಲಿ ಶಾಸಕ ಎಚ್.ಪಿ.ಮಂಜುನಾಥ್ ಸ್ಪರ್ಧೆಗೆ ಚಾಲನೆ ನೀಡಿದರು, ವಿಧಾನಪರಿಷತ್ ಸದಸ್ಯರಾದ ಎಚ್.ವಿಶ್ವನಾಥ್, ಡಾ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಉಪ ವಿಭಾಗಾಧಿಕಾರಿ ರುಚಿಬಿಂದಾಲ್, ಡಿವೈಎಸ್ ರವಿಪ್ರಸಾದ್ ರವಿಪ್ರಸಾದ್ , ಡಾ.ಸರ್ವೇಶ್‌ರಾಜೇಅರಸ್ ಎಟ್ ಹಾಜರಿದ್ದಾರೆ. ನಗರದ ಹೊರವಲಯ ಸೇರಿದಂತೆ ವಿವಿಧ ವೃತ್ತಗಳ ಮೂಲಕ 10ಕಿ.ಮೀಟವನ್ನು ಪೂರೈಸಬೇಕಿದ್ದು, ಮಹಿಳಾ ಕಾಲೇಜಿನ ಸ್ಪರ್ಧೆ ಅಂತ್ಯಗೊಳ್ಳಲಿದೆ. ಮೈಸೂರು ವಿವಿಯ ದೈಹಿಕಶಿಕ್ಷಣ ವಿಭಾಗದ ಮುಖ್ಯಸ್ಥ ಡಾ.ಪಿ.ಕೃಷ್ಣಯ್ಯರ ನೇತೃತ್ವದಲ್ಲಿ ವಿವಿಧ ಕಾಲೇಜುಗಳ ನೂರು ಮಂದಿ ಅಧಿಕಾರಿಗಳ ತಂಡ ಹಾಗೂ ನೂರಕ್ಕೂ ಹೆಚ್ಚು ಸ್ಪಯಂಸೇವಕರು ಸ್ಪರ್ಧೆ ನಡೆಸಲಿದ್ದಾರೆ.  

ಬೆಳಗ್ಗೆ 10ಕ್ಕೆ ಕಾಲೇಜು ಪ್ರಶಸ್ತಿ ವಿತರಣಾ ಸಮಾರಂಭ ನಡೆಯಲಿದೆ, ಸಿಡಿಸಿ ಅಧ್ಯಕ್ಷರೂ ಆದ ಶಾಸಕ ಮಂಜುನಾಥ್ ಬಹುಮಾನ ವಿತರಿಸಿದರು. ಅಂತರಾಷ್ಟ್ರೀಯ ಟ್ರಯಥ್ಲಾನ್ ಆಟಗಾರ್ತಿ ಡಾ.ಉಷಾಹೆಗ್ಗಡೆ ಸಮಾರೋಪ ಭಾಷಣ ಮಾಡುತ್ತಾರೆ. ನಗರಸಭೆ ಅಧ್ಯಕ್ಷೆ ಗೀತಾನಿಂಗರಾಜು, ಸದಸ್ಯ ಶ್ರೀನಾಥ್, ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕ ಡಾ.ಎಸ್.ಬಿ.ಅಪ್ಪಾಜಿಗೌಡ, ಪ್ರಾಚಾರ್ಯ ಜ್ಞಾನಪ್ರಕಾಶ್, ಸಿಡಿಸಿ ಸದಸ್ಯರು ಸೇರಿದಂತೆ ಪ್ರಮುಖರು ಭಾಗವಹಿಸಲಿದ್ದಾರೆಂದು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಬಾಸ್ಕರ್.

andolana

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

7 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

7 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

7 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

8 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

9 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

17 hours ago