ಹುಣಸೂರಲ್ಲಿ ಶುಕ್ರವಾರ ಬೆಳಗ್ಗೆ 6.30ಕ್ಕೆ ಗುಡ್ಡಗಾಡು ಓಟ.
ಹುಣಸೂರು: ಹುಣಸೂರಿನಲ್ಲಿ ಡಿ.2ರ ಶುಕ್ರವಾರ ನಡೆಯಲಿರುವ ಮೈಸೂರು ವಿ.ವಿ.ಯ ಮಹಿಳಾ ಮತ್ತು ಪುರುಷರ ಕ್ರಾಸ್ ಕಂಟ್ರಿ(ಗುಡ್ಡಗಾಡು ಓಟ)ಸ್ಪರ್ಧೆಯಲ್ಲಿ 72 ಕಾಲೇಜುಗಳಲ್ಲಿ 191 ಮಹಿಳೆಯರು, 290 ಪುರುಷ ಓಟಗಾರರು ಸೇರಿ ಒಟ್ಟು 481ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ.
ಇಲ್ಲಿನ ಮಹಿಳಾ ಸರಕಾರಿ ಪದವಿ ಕಾಲೇಜಿನಿಂದ ನಡೆಯುತ್ತಿರುವ ಈ ಸ್ಪರ್ಧೆ ಶುಕ್ರವಾರ ಬೆಳಗ್ಗೆ 6.30ಕ್ಕೆ ಎಚ್.ಡಿ.ಕೋಟೆ ವೃತ್ತದಲ್ಲಿ ಶಾಸಕ ಎಚ್.ಪಿ.ಮಂಜುನಾಥ್ ಸ್ಪರ್ಧೆಗೆ ಚಾಲನೆ ನೀಡಿದರು, ವಿಧಾನಪರಿಷತ್ ಸದಸ್ಯರಾದ ಎಚ್.ವಿಶ್ವನಾಥ್, ಡಾ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಉಪ ವಿಭಾಗಾಧಿಕಾರಿ ರುಚಿಬಿಂದಾಲ್, ಡಿವೈಎಸ್ ರವಿಪ್ರಸಾದ್ ರವಿಪ್ರಸಾದ್ , ಡಾ.ಸರ್ವೇಶ್ರಾಜೇಅರಸ್ ಎಟ್ ಹಾಜರಿದ್ದಾರೆ. ನಗರದ ಹೊರವಲಯ ಸೇರಿದಂತೆ ವಿವಿಧ ವೃತ್ತಗಳ ಮೂಲಕ 10ಕಿ.ಮೀಟವನ್ನು ಪೂರೈಸಬೇಕಿದ್ದು, ಮಹಿಳಾ ಕಾಲೇಜಿನ ಸ್ಪರ್ಧೆ ಅಂತ್ಯಗೊಳ್ಳಲಿದೆ. ಮೈಸೂರು ವಿವಿಯ ದೈಹಿಕಶಿಕ್ಷಣ ವಿಭಾಗದ ಮುಖ್ಯಸ್ಥ ಡಾ.ಪಿ.ಕೃಷ್ಣಯ್ಯರ ನೇತೃತ್ವದಲ್ಲಿ ವಿವಿಧ ಕಾಲೇಜುಗಳ ನೂರು ಮಂದಿ ಅಧಿಕಾರಿಗಳ ತಂಡ ಹಾಗೂ ನೂರಕ್ಕೂ ಹೆಚ್ಚು ಸ್ಪಯಂಸೇವಕರು ಸ್ಪರ್ಧೆ ನಡೆಸಲಿದ್ದಾರೆ.
ಬೆಳಗ್ಗೆ 10ಕ್ಕೆ ಕಾಲೇಜು ಪ್ರಶಸ್ತಿ ವಿತರಣಾ ಸಮಾರಂಭ ನಡೆಯಲಿದೆ, ಸಿಡಿಸಿ ಅಧ್ಯಕ್ಷರೂ ಆದ ಶಾಸಕ ಮಂಜುನಾಥ್ ಬಹುಮಾನ ವಿತರಿಸಿದರು. ಅಂತರಾಷ್ಟ್ರೀಯ ಟ್ರಯಥ್ಲಾನ್ ಆಟಗಾರ್ತಿ ಡಾ.ಉಷಾಹೆಗ್ಗಡೆ ಸಮಾರೋಪ ಭಾಷಣ ಮಾಡುತ್ತಾರೆ. ನಗರಸಭೆ ಅಧ್ಯಕ್ಷೆ ಗೀತಾನಿಂಗರಾಜು, ಸದಸ್ಯ ಶ್ರೀನಾಥ್, ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕ ಡಾ.ಎಸ್.ಬಿ.ಅಪ್ಪಾಜಿಗೌಡ, ಪ್ರಾಚಾರ್ಯ ಜ್ಞಾನಪ್ರಕಾಶ್, ಸಿಡಿಸಿ ಸದಸ್ಯರು ಸೇರಿದಂತೆ ಪ್ರಮುಖರು ಭಾಗವಹಿಸಲಿದ್ದಾರೆಂದು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಬಾಸ್ಕರ್.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…