ಜಿಲ್ಲೆಗಳು

ಡಿ. 4ರಂದು ಬಿವಿಎಫ್‌ನಿಂದ ವಿಚಾರ ಸಂಕಿರಣ

ಚಾಮರಾಜನಗರ: ಬಹುಜನ ವಾಲೆಂಟಿಯರ್ ಫೋರ್ಸ್ (ಬಿವಿಎಫ್) ವತಿಯಿಂದ ಡಾ. ಬಿ.ಆರ್.ಅಂಬೇಡ್ಕರ್ ಅವರ 66 ನೇ ಪರಿನಿಬ್ಬಾಣ ದಿನಾಚರಣೆಯ ಅಂಗವಾಗಿ ‘ಮೀಸಲಾತಿ ಪ್ರಾತಿನಿಧ್ಯವೋ-ಆರ್ಥಿಕ ಸಬಲೀಕರಣವೋ’ ಎಂಬ ವಿಷಯ ಕುರಿತು ವಿಚಾರ ಸಂಕಿರಣವನ್ನು ಡಿ.೪ ರಂದು ಆಯೋಜಿಸಲಾಗಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಚಂದ್ರಕಾಂತ್ ತಿಳಿಸಿದರು.

ಅಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ನಳಂದ ಬುದ್ಧ ವಿಹಾರದ ಬೋಧಿರತ್ನ ಬಂತೇಜಿ ಉಪಸ್ಥಿತರಿದ್ದು, ಜ್ಞಾನಪ್ರಕಾಶ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಚಿತ್ರನಟ ಚೇತನ್ ಅಹಿಂಸಾ ಪುಷ್ಪಾರ್ಚನೆ ಮಾಡಲಿದ್ದು, ವಿಚಾರವಾದಿ ಹ.ರಾ.ಮಹೇಶ್ ಮೀಸಲಾತಿ ಕುರಿತು ವಿಚಾರ ಮಂಡಿಸುವರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಅತಿಥಿಗಳಾಗಿ ಕೇಂದ್ರ ಬರ ಪರಿಹಾರ ಸಮಿತಿಯ ಮಾಜಿ ಅಧ್ಯಕ್ಷ ಎಂ. ರಾಮಚಂದ್ರ, ಬಿಎಸ್ಪಿ ಜಿಲ್ಲಾಧ್ಯಕ್ಷ ನಾಗಯ್ಯ, ಆರ್.ಉಮೇಶ್, ಮಹೇಶ್‌ಕುದರ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಕೇಂದ್ರ ಸರ್ಕಾರ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿವೇತನವನ್ನು ರದ್ದುಗೊಳಿಸಿರುವುದು ಖಂಡನೀಯ. ಈ ಮೂಲಕ ಕೇಂದ್ರ ಸರ್ಕಾರ ಬಡ ಮಕ್ಕಳು ಶಾಲೆಯಿಂದ ದೂರ ಉಳಿಯುವಂತೆ ಮಾಡಿದೆ ಎಂದು ದೂರಿದರು.
ಬಿವಿಎಫ್‌ನ ಜಿಲ್ಲಾ ಸಂಯೋಜಕರಾದ ಎಂ.ರವಿಮೌರ್ಯ, ಆಶ್ರಿತ್, ತಾಲ್ಲೂಕು ಸಂಯೋಜಕ ಮಹೇಶ್, ರಾಜು ಹಾಜರಿದ್ದರು.

andolanait

Recent Posts

ಪ್ರಧಾನಿ ಮೋದಿಗೆಂದೇ ಮೈಸೂರು ಮಹಾರಾಜರು ಧರಿಸುತ್ತಿದ್ದ ಮಾದರಿಯ ಪೇಟ ತಯಾರು

ಮೈಸೂರು: ಇದೇ ಏಪ್ರಿಲ್.15ರಂದು ನಾಗಮಂಗಲದ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಅಂದು ಪ್ರಧಾನಿ ನರೇಂದ್ರ…

32 mins ago

ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಸ್‌ಗೆ ಬಿಗ್‌ ಟ್ವಿಸ್ಟ್‌

ಬೆಂಗಳೂರು: ಬಾಗಲಕೋಟೆ ಜಿಲ್ಲೆ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಬ್ಲಾಕ್‌ಮೇಲ್‌ ಆರೋಪ…

36 mins ago

ಹೈಕಮಾಂಡ್‌ ಹೇಳಿದರೆ ಸಚಿವ ಸ್ಥಾನ ಬಿಡಲು ಸಿದ್ಧ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಹೈಕಮಾಂಡ್‌ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಹಿರಿಯ ಶಾಸಕರು…

1 hour ago

ರಾಜ್ಯದಲ್ಲಿ ಮುಂದಿನ 5 ದಿನ ತಾಪಮಾನ ಭಾರೀ ಏರಿಕೆ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ತಾಪಮಾನ ಗಣನೀಯವಾಗಿ ಏರಿಕೆಯಾಗಲಿದೆ…

3 hours ago

ಇಂದು, ನಾಳೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಹಾಗೂ ನಾಳೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

3 hours ago

ನೆತನ್ಯಾಹು 1 ಫೋನ್‌ ಕಾಲ್‌ ಎಲ್ಲವನ್ನೂ ಹಾಳು ಮಾಡಿತು: ಇರಾನ್‌ ಹೊಸ ಬಾಂಬ್‌

ಟೆಹರಾನ್:‌ ಇಸ್ಲಾಮಾಬಾದ್‌ನಲ್ಲಿ ನಡೆದ 21 ಗಂಟೆಗಳ ಮಾತುಕತೆ ವಿಫಲವಾದ ಬೆನ್ನಲ್ಲೇ ಇರಾನ್‌ ಮೊದಲ ಪ್ರತಿಕ್ರಿಯೆ ನೀಡಿದ್ದು, ಮಾತುಕತೆ ವಿಫಲವಾಗಲು ಇಸ್ರೇಲ್‌…

3 hours ago