ಚಾಮರಾಜನಗರ: ಬಹುಜನ ವಾಲೆಂಟಿಯರ್ ಫೋರ್ಸ್ (ಬಿವಿಎಫ್) ವತಿಯಿಂದ ಡಾ. ಬಿ.ಆರ್.ಅಂಬೇಡ್ಕರ್ ಅವರ 66 ನೇ ಪರಿನಿಬ್ಬಾಣ ದಿನಾಚರಣೆಯ ಅಂಗವಾಗಿ ‘ಮೀಸಲಾತಿ ಪ್ರಾತಿನಿಧ್ಯವೋ-ಆರ್ಥಿಕ ಸಬಲೀಕರಣವೋ’ ಎಂಬ ವಿಷಯ ಕುರಿತು ವಿಚಾರ ಸಂಕಿರಣವನ್ನು ಡಿ.೪ ರಂದು ಆಯೋಜಿಸಲಾಗಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಚಂದ್ರಕಾಂತ್ ತಿಳಿಸಿದರು.
ಅಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ನಳಂದ ಬುದ್ಧ ವಿಹಾರದ ಬೋಧಿರತ್ನ ಬಂತೇಜಿ ಉಪಸ್ಥಿತರಿದ್ದು, ಜ್ಞಾನಪ್ರಕಾಶ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಚಿತ್ರನಟ ಚೇತನ್ ಅಹಿಂಸಾ ಪುಷ್ಪಾರ್ಚನೆ ಮಾಡಲಿದ್ದು, ವಿಚಾರವಾದಿ ಹ.ರಾ.ಮಹೇಶ್ ಮೀಸಲಾತಿ ಕುರಿತು ವಿಚಾರ ಮಂಡಿಸುವರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಅತಿಥಿಗಳಾಗಿ ಕೇಂದ್ರ ಬರ ಪರಿಹಾರ ಸಮಿತಿಯ ಮಾಜಿ ಅಧ್ಯಕ್ಷ ಎಂ. ರಾಮಚಂದ್ರ, ಬಿಎಸ್ಪಿ ಜಿಲ್ಲಾಧ್ಯಕ್ಷ ನಾಗಯ್ಯ, ಆರ್.ಉಮೇಶ್, ಮಹೇಶ್ಕುದರ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಕೇಂದ್ರ ಸರ್ಕಾರ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿವೇತನವನ್ನು ರದ್ದುಗೊಳಿಸಿರುವುದು ಖಂಡನೀಯ. ಈ ಮೂಲಕ ಕೇಂದ್ರ ಸರ್ಕಾರ ಬಡ ಮಕ್ಕಳು ಶಾಲೆಯಿಂದ ದೂರ ಉಳಿಯುವಂತೆ ಮಾಡಿದೆ ಎಂದು ದೂರಿದರು.
ಬಿವಿಎಫ್ನ ಜಿಲ್ಲಾ ಸಂಯೋಜಕರಾದ ಎಂ.ರವಿಮೌರ್ಯ, ಆಶ್ರಿತ್, ತಾಲ್ಲೂಕು ಸಂಯೋಜಕ ಮಹೇಶ್, ರಾಜು ಹಾಜರಿದ್ದರು.
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…