ಮೈಸೂರು: ಕೆ.ಎನ್.ಪುಟ್ಟಬುದ್ಧಿ ಫೌಂಡೇಷನ್, ಜಿಲ್ಲಾ ಸಂಚಾರಿ ನೇತ್ರ ಚಿಕಿತ್ಸಾ ಘಟಕ-ಕೆ.ಆರ್.ಆಸ್ಪತ್ರೆ, ಮೈಸೂರು, ಆರೋಗ್ಯಭಾರತಿ-ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಮೈಸೂರು ತಾಲ್ಲೂಕಿನ ಕೀಳನಪುರದಲ್ಲಿ ಡಿ.೪ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ ೯ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ಕೀಳನಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಆರೋಗ್ಯ ಶಿಬಿರ ನಡೆಯಲಿದ್ದು, ದೀರ್ಘ ತಲೆನೋವು, ರಕ್ತದೊತ್ತಡ, ಸಕ್ಕರೆ ಕಾಯಿಲೆ, ನಾಡಿಮಿಡಿತ, ಕಣ್ಣು-ಮೂಗು-ಕಿವಿ-ಗಂಟಲು, ಮಂಡಿನೋವು ಮುಂತಾದ ಕಾಯಿಲೆಗಳಿಗೆ ಉಚಿತ ತಪಾಸಣೆ, ಕಣ್ಣಿನ ಶಸ್ತ್ರ ಚಿಕಿತ್ಸೆ ಅಗತ್ಯ ಇರುವವರಿಗೆ ಚಿಕಿತ್ಸೆ ಮತ್ತು ಕಾರ್ಡ್ ವಿತರಣೆ, ಉಚಿತ ಔಷಧಿ ವಿತರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.
ನೇತ್ರ ತಜ್ಞರು, ಮಕ್ಕಳ ತಜ್ಞರು, ಹೃದಯ ಸಂಬಂಧಿ ತಜ್ಞರು, ಮಧುಮೇಹ ತಜ್ಞರು, ಪ್ರಸೂತಿ ತಜ್ಞರು, ಇಎನ್ಟಿ ತಜ್ಞರು, ಸಾಮಾನ್ಯ ತಪಾಸಣಾ ತಜ್ಞರು ತಪಾಸಣೆ ನಡೆಸಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕೆಂದು ವರುಣಾ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿ ಶರತ್ ಪುಟ್ಟಬುದ್ಧಿ ಮನವಿ ಮಾಡಿದ್ದಾರೆ.
ಮಂಡ್ಯ: ತಾಲ್ಲೂಕಿನ ಭೂತನಹೊಸೂರು ಗ್ರಾಮದ ಸಮೀಪದ ಕಬ್ಬಿನ ಗದ್ದಯೊಂದರಲ್ಲಿ ಪತ್ತೆಯಾಗಿದ್ದ ಮೂರು ಚಿರತೆ ಮರಿಗಳಿಂದ ದೂರವಾಗಿದ್ದ ತಾಯಿ ಚಿರತೆ ಬೋನಿನಲ್ಲಿ…
ಕೆ.ಆರ್.ಪೇಟೆ: ತಾಲ್ಲೂಕಿನ ಕಾಪನಹಳ್ಳಿ ಗವಿಮಠದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸೇರಿದ ಆಹಾರದ ದಾಸ್ತಾನು ರೈಸ್ಮಿಲ್ನಲ್ಲಿ ಪತ್ತೆಯಾಗಿದೆ. ಮಾರ್ಚ್.17ರಂದು ರೈತ…
ರಿಯಾದ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು, ಮಧ್ಯಪ್ರಾಚ್ಯದ ಪ್ರಮುಖ ತೈಲ ಉತ್ಪಾದನಾ ರಾಷ್ಟ್ರವಾದ ಸೌದಿ ಅರೇಬಿಯಾದ ತೈಲ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ನಾಗರಿಕ ವಿಮಾನಯಾನ ನಿರ್ದೇಶನಾಲಯ ಗಲ್ಪ್ ಪ್ರದೇಶದಲ್ಲಿನ 9 ವಾಯು ಪ್ರದೇಶಗಳಲ್ಲಿ ಹಾರಾಟ…
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2 ರ ಪರಿಷ್ಕೃತವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಏ.25…
ಬೆಂಗಳೂರು: ಶಿವಮೊಗ್ಗದ ತಾವರೆಕೊಪ್ಪ ಮೃಗಾಲಯದಲ್ಲಿ ವನ್ಯಜೀವಿಗೆ ಚಿಕಿತ್ಸೆ ನೀಡಲು ತೆರಳಿದ್ದ ಪಶುವೈದ್ಯೆ ನೀರಾನೆ ದಾಳಿಯಿಂದ ಮೃತಪಟ್ಟಿದ್ದು, ಅರಣ್ಯ, ಜೀವಿಶಾಸ್ತ್ರ ಮತ್ತು…