ಮೈಸೂರು: ಕೆ.ಎನ್.ಪುಟ್ಟಬುದ್ಧಿ ಫೌಂಡೇಷನ್, ಜಿಲ್ಲಾ ಸಂಚಾರಿ ನೇತ್ರ ಚಿಕಿತ್ಸಾ ಘಟಕ-ಕೆ.ಆರ್.ಆಸ್ಪತ್ರೆ, ಮೈಸೂರು, ಆರೋಗ್ಯಭಾರತಿ-ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಮೈಸೂರು ತಾಲ್ಲೂಕಿನ ಕೀಳನಪುರದಲ್ಲಿ ಡಿ.೪ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ ೯ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ಕೀಳನಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಆರೋಗ್ಯ ಶಿಬಿರ ನಡೆಯಲಿದ್ದು, ದೀರ್ಘ ತಲೆನೋವು, ರಕ್ತದೊತ್ತಡ, ಸಕ್ಕರೆ ಕಾಯಿಲೆ, ನಾಡಿಮಿಡಿತ, ಕಣ್ಣು-ಮೂಗು-ಕಿವಿ-ಗಂಟಲು, ಮಂಡಿನೋವು ಮುಂತಾದ ಕಾಯಿಲೆಗಳಿಗೆ ಉಚಿತ ತಪಾಸಣೆ, ಕಣ್ಣಿನ ಶಸ್ತ್ರ ಚಿಕಿತ್ಸೆ ಅಗತ್ಯ ಇರುವವರಿಗೆ ಚಿಕಿತ್ಸೆ ಮತ್ತು ಕಾರ್ಡ್ ವಿತರಣೆ, ಉಚಿತ ಔಷಧಿ ವಿತರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.
ನೇತ್ರ ತಜ್ಞರು, ಮಕ್ಕಳ ತಜ್ಞರು, ಹೃದಯ ಸಂಬಂಧಿ ತಜ್ಞರು, ಮಧುಮೇಹ ತಜ್ಞರು, ಪ್ರಸೂತಿ ತಜ್ಞರು, ಇಎನ್ಟಿ ತಜ್ಞರು, ಸಾಮಾನ್ಯ ತಪಾಸಣಾ ತಜ್ಞರು ತಪಾಸಣೆ ನಡೆಸಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕೆಂದು ವರುಣಾ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿ ಶರತ್ ಪುಟ್ಟಬುದ್ಧಿ ಮನವಿ ಮಾಡಿದ್ದಾರೆ.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…