ಜಿಲ್ಲೆಗಳು

ಆಂದೋಲನ ಸಂದರ್ಶನ : 5 ಲಕ್ಷಕ್ಕೂ ಹೆಚ್ಚು ಮಂದಿಗೆ ಯಶಸ್ವಿನಿ ಉಪಯೋಗ

ಯಶಸ್ವಿನಿ ಯೋಜನೆ ಕುರಿತು ಸಹಕಾರ ಸಂಘಗಳ ಉಪ ನಿಬಂಧಕ ಜಿ.ಆರ್.ವಿಜಯ್‌ ಕುಮಾರ್ ಅಭಿಮತ

ಬಿ ಎನ್‌. ಧನಂಜಯಗೌಡ
ಮೈಸೂರು:
ಮುಖ್ಯಮಂತ್ರಿಗಳು ೨೦೨೨-೨೩ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ ಮರು ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನ.2ರಿಂದ ಸದಸ್ಯರ ನೋಂದಣಿ ಪ್ರಾರಂಭವಾಗಲಿದೆ ಈ ಕುರಿತು ‘ಆಂದೋಲನ’ ಜೊತೆ ಸಹಕಾರ ಸಂಘಗಳ ಉಪ ನಿಬಂಧಕ ಜಿ.ಆರ್.ವಿಜಯ್‌ ಕುಮಾರ್ ಮಾತನಾಡಿದ್ದಾರೆ.

ಆಂದೋಲನ: ಯಶಸ್ವಿ ಯೋಜನೆ ನೋಂದಣಿ ಮೈಸೂರಲ್ಲಿ ಯಾವಾಗಿನಿಂದ ಆರಂಭವಾಗಲಿದೆ?
ವಿಜಯಕುಮಾರ್: ಸರ್ಕಾರ ಆದೇಶ ಮಾಡಿದೆ. ಆದರೆ, ನೋಂದಣಿ ಸಂಬಂಧ ಮತ್ತು ಹಣವನ್ನು ಹೇಗೆ ಕಲೆಕ್ಟ್ ಮಾಡಬೇಕು ಎಂಬ ಬಗ್ಗೆ ಇನ್ನೂ ಮಾರ್ಗಸೂಚಿ ಬಂದಿಲ್ಲ. ನೋಂದಣಿ ನಮೂನೆಗಳು ಇನ್ನೂ ಬಂದಿಲ್ಲ. ಹಾಗಾಗಿ, ನ.೨ರ ನಂತರ ಪ್ರಕ್ರಿಯೆ ಆರಂಭಿಸಲು ಮಾರ್ಗಸೂಚಿ ಬರಬಹುದು.

ಆಂದೋಲನ: ಈ ಯೋಜನೆಗೆ ಯಾರೆಲ್ಲ ಅರ್ಹರು, ನೋಂದಣಿ ಎಲ್ಲಿ ಆಗಲಿದೆ?
ವಿಜಯಕುಮಾರ್: ಯಾವುದೇ ಸಹಕಾರ ಸಂಘದಲ್ಲಿ ಸದಸ್ಯರಾಗಿದ್ದವರು. ನೋಂದಣಿ ಮಾಡಿಕೊಳ್ಳಬಹುದು. ಮೈಸೂರು ಜಿಲ್ಲೆಯಲ್ಲಿ ಸುಮಾರು ೨ ಸಾವಿರ ಸಹಕಾರ ಸಂಘಗಳು ಇದ್ದು. ಎಲ್ಲ ಸಹಕಾರ ಸಂಘಗಳಲ್ಲೂ ನೋಂದಣಿ ಮಾಡಿಸಬಹುದು. ನಮ್ಮಲ್ಲಿ ೫ರಿಂದ ೬ ಲಕ್ಷ ಸಹಕಾರ ಸಂಘಗಳ ಸದಸ್ಯರಿದ್ದು ಅವರೆಲ್ಲರೂ ಒಳಪಡಬಹುದು.

ಆಂದೋಲನ: ಈ ಹಿಂದೆ ನೋಂದಣಿ ಮಾಡಿಕೊಡವರು ಮತ್ತು ಹೊಸ ನೋಂದಣಿ ಹೇಗೆ?
ವಿಜಯಕುಮಾರ್: ಇದು ಪ್ರತಿವರ್ಷ ನವೀಕರಣ ಇರಲಿದೆ. ಹೊಸ ಸದಸ್ಯರು ಸದಸ್ಯತ್ವ ಪಡೆದು ಮೂರು ತಿಂಗಳ ನಂತರ ಅವರೂ ನೋಂದಣಿ ಮಾಡಿಸಬಹುದು.

ಆಂದೋಲನ: ನೋಂದಣಿಯಾದ ಸದಸ್ಯರು ಪಾವತಿಸಬೇಕಾದ ಹಣವೆಷ್ಟು?
ವಿಜಯಕುಮಾರ್: ಗ್ರಾಮೀಣ ಪ್ರದೇಶದ ಸಹಕಾರ ಸಂಘಗಳ ಸದಸ್ಯರಿಗೆ ನಾಲ್ಕು ಮಂದಿಯುಳ್ಳ ಕುಟುಂಬಕ್ಕೆ ತಲಾ ೫೦೦ ರೂ. ಹಾಗೂ ನಗರ ಪ್ರದೇಶದವರಿಗೆ ೧೦೦೦ ರೂ. ವಂತಿಗೆ ನಿಗದಿ ಪಡಿಸಲಾಗಿದೆ. ನಾಲ್ಕು ಮಂದಿಗಿಂತ ಹೆಚ್ಚಿನ ಸದಸ್ಯರು ಇರುವ ಕುಟುಂಬಗಳಿಗೆ ಹೆಚ್ಚುವರಿ ಸದಸ್ಯರಿಗೆ ತಲಾ ೨೦೦ ರೂ. ವಂತಿಗೆ ಪಾವತಿಸಿ, ನೋಂದಾಯಿಸಬಹುದು.

ಆಂದೋಲನ: ಯೋಜನೆಯಲ್ಲಿ ನೋಂದಣಿಯಾದ ಕುಟುಂಬ ನಗದು ರಹಿತವಾಗಿ ಎಷ್ಟು ಮೊತ್ತದವರೆಗೆ ಚಿಕಿತ್ಸೆ ಪಡೆಯಬಹುದು?
ವಿಜಯಕುಮಾರ್: ಈ ಯೋಜನೆಯಡಿ ಯಶಸ್ವಿನಿ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಒಂದು ಕುಟುಂಬಕ್ಕೆ ೫ ಲಕ್ಷ ರೂ. ವರೆಗಿನ ವೆಚ್ಚದಲ್ಲಿ ನಗದು ರಹಿತ ಚಿಕಿತ್ಸೆ ಪಡೆಯಬಹುದು. ರಾಜ್ಯ ಸರ್ಕಾರವು ಇದಕ್ಕಾಗಿ ಪ್ರಸಕ್ತ ಆಯವ್ಯಯದಲ್ಲಿ ೩೦೦ ಕೋಟಿ ರೂ. ಅನುದಾನ ನಿಗದಿಪಡಿಸಿದೆ. ಹೆಚ್ಚುವರಿ ಹಣವನ್ನು ಅವರೇ ಪಾವತಿಸಬೇಕು.

ಆಂದೋಲನ : ಯೋಜನೆಯ ನೆಟ್‌ವರ್ಕ್ ಹೊಂದಿರುವ ಆಸ್ಪತ್ರೆಗಳು ಯಾವುವು?
ವಿಜಯಕುಮಾರ್: ಈ ಬಗ್ಗೆ ಸರ್ಕಾರ ಇನ್ನೂ ಪಟ್ಟಿಯನ್ನು ನೀಡಿಲ್ಲ. ಈ ಕಾರಣದಿಂದಲೇ ನೋಂದಣಿ ಪ್ರಕ್ರಿಯೆ ವಿಧಾನದ ಮಾರ್ಗಸೂಚಿ ನಮಗೆ ಬಂದಿಲ್ಲ.

ಯಶಸ್ವಿನಿ ಯೋಜನೆ ಹಿನ್ನೆಲೆ
ಮೈಸೂರು: ಸಹಕಾರ ಸಂಘಗಳ ಸದಸ್ಯರಿಗೆ ಆರೋಗ್ಯ ಸೇವೆ ನೀಡಲು ೨೦೦೩ರಲ್ಲಿ ಯಶಸ್ವಿನಿ ಯೋಜನೆಯನ್ನು ರಾಜ್ಯ ಸರ್ಕಾರ ಆರಂಭಿಸಿತ್ತು. ಆದರೆ ೨೦೧೮ರಲ್ಲಿ ರಾಜ್ಯದ ಎಲ್ಲರಿಗೂ ಸಾರ್ವತ್ರಿಕ ಆರೋಗ್ಯ ರಕ್ಷಣೆ ನೀಡಲು ಆರೋಗ್ಯ ಕರ್ನಾಟಕ ಯೋಜನೆ ಅನುಷ್ಠಾನಗೊಳಿಸಿದ ಸರ್ಕಾರ ೨೦೧೮ರ ಮೇ ೩೧ರಂದು ಯಶಸ್ವಿನಿ ಆರೋಗ್ಯ ಯೋಜನೆಯನ್ನು ರದ್ದುಗೊಳಿಸಿತ್ತು. ಇದೇ ಯೋಜನೆಗೆ ಈಗ ಮರು ಚಾಲನೆ ನೀಡಲಾಗುತ್ತಿದೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago