ಯಶಸ್ವಿನಿ ಯೋಜನೆ ಕುರಿತು ಸಹಕಾರ ಸಂಘಗಳ ಉಪ ನಿಬಂಧಕ ಜಿ.ಆರ್.ವಿಜಯ್ ಕುಮಾರ್ ಅಭಿಮತ
ಬಿ ಎನ್. ಧನಂಜಯಗೌಡ
ಮೈಸೂರು: ಮುಖ್ಯಮಂತ್ರಿಗಳು ೨೦೨೨-೨೩ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ ಮರು ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನ.2ರಿಂದ ಸದಸ್ಯರ ನೋಂದಣಿ ಪ್ರಾರಂಭವಾಗಲಿದೆ ಈ ಕುರಿತು ‘ಆಂದೋಲನ’ ಜೊತೆ ಸಹಕಾರ ಸಂಘಗಳ ಉಪ ನಿಬಂಧಕ ಜಿ.ಆರ್.ವಿಜಯ್ ಕುಮಾರ್ ಮಾತನಾಡಿದ್ದಾರೆ.
ಆಂದೋಲನ: ಯಶಸ್ವಿ ಯೋಜನೆ ನೋಂದಣಿ ಮೈಸೂರಲ್ಲಿ ಯಾವಾಗಿನಿಂದ ಆರಂಭವಾಗಲಿದೆ?
ವಿಜಯಕುಮಾರ್: ಸರ್ಕಾರ ಆದೇಶ ಮಾಡಿದೆ. ಆದರೆ, ನೋಂದಣಿ ಸಂಬಂಧ ಮತ್ತು ಹಣವನ್ನು ಹೇಗೆ ಕಲೆಕ್ಟ್ ಮಾಡಬೇಕು ಎಂಬ ಬಗ್ಗೆ ಇನ್ನೂ ಮಾರ್ಗಸೂಚಿ ಬಂದಿಲ್ಲ. ನೋಂದಣಿ ನಮೂನೆಗಳು ಇನ್ನೂ ಬಂದಿಲ್ಲ. ಹಾಗಾಗಿ, ನ.೨ರ ನಂತರ ಪ್ರಕ್ರಿಯೆ ಆರಂಭಿಸಲು ಮಾರ್ಗಸೂಚಿ ಬರಬಹುದು.
ಆಂದೋಲನ: ಈ ಯೋಜನೆಗೆ ಯಾರೆಲ್ಲ ಅರ್ಹರು, ನೋಂದಣಿ ಎಲ್ಲಿ ಆಗಲಿದೆ?
ವಿಜಯಕುಮಾರ್: ಯಾವುದೇ ಸಹಕಾರ ಸಂಘದಲ್ಲಿ ಸದಸ್ಯರಾಗಿದ್ದವರು. ನೋಂದಣಿ ಮಾಡಿಕೊಳ್ಳಬಹುದು. ಮೈಸೂರು ಜಿಲ್ಲೆಯಲ್ಲಿ ಸುಮಾರು ೨ ಸಾವಿರ ಸಹಕಾರ ಸಂಘಗಳು ಇದ್ದು. ಎಲ್ಲ ಸಹಕಾರ ಸಂಘಗಳಲ್ಲೂ ನೋಂದಣಿ ಮಾಡಿಸಬಹುದು. ನಮ್ಮಲ್ಲಿ ೫ರಿಂದ ೬ ಲಕ್ಷ ಸಹಕಾರ ಸಂಘಗಳ ಸದಸ್ಯರಿದ್ದು ಅವರೆಲ್ಲರೂ ಒಳಪಡಬಹುದು.
ಆಂದೋಲನ: ಈ ಹಿಂದೆ ನೋಂದಣಿ ಮಾಡಿಕೊಡವರು ಮತ್ತು ಹೊಸ ನೋಂದಣಿ ಹೇಗೆ?
ವಿಜಯಕುಮಾರ್: ಇದು ಪ್ರತಿವರ್ಷ ನವೀಕರಣ ಇರಲಿದೆ. ಹೊಸ ಸದಸ್ಯರು ಸದಸ್ಯತ್ವ ಪಡೆದು ಮೂರು ತಿಂಗಳ ನಂತರ ಅವರೂ ನೋಂದಣಿ ಮಾಡಿಸಬಹುದು.
ಆಂದೋಲನ: ನೋಂದಣಿಯಾದ ಸದಸ್ಯರು ಪಾವತಿಸಬೇಕಾದ ಹಣವೆಷ್ಟು?
ವಿಜಯಕುಮಾರ್: ಗ್ರಾಮೀಣ ಪ್ರದೇಶದ ಸಹಕಾರ ಸಂಘಗಳ ಸದಸ್ಯರಿಗೆ ನಾಲ್ಕು ಮಂದಿಯುಳ್ಳ ಕುಟುಂಬಕ್ಕೆ ತಲಾ ೫೦೦ ರೂ. ಹಾಗೂ ನಗರ ಪ್ರದೇಶದವರಿಗೆ ೧೦೦೦ ರೂ. ವಂತಿಗೆ ನಿಗದಿ ಪಡಿಸಲಾಗಿದೆ. ನಾಲ್ಕು ಮಂದಿಗಿಂತ ಹೆಚ್ಚಿನ ಸದಸ್ಯರು ಇರುವ ಕುಟುಂಬಗಳಿಗೆ ಹೆಚ್ಚುವರಿ ಸದಸ್ಯರಿಗೆ ತಲಾ ೨೦೦ ರೂ. ವಂತಿಗೆ ಪಾವತಿಸಿ, ನೋಂದಾಯಿಸಬಹುದು.
ಆಂದೋಲನ: ಯೋಜನೆಯಲ್ಲಿ ನೋಂದಣಿಯಾದ ಕುಟುಂಬ ನಗದು ರಹಿತವಾಗಿ ಎಷ್ಟು ಮೊತ್ತದವರೆಗೆ ಚಿಕಿತ್ಸೆ ಪಡೆಯಬಹುದು?
ವಿಜಯಕುಮಾರ್: ಈ ಯೋಜನೆಯಡಿ ಯಶಸ್ವಿನಿ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಒಂದು ಕುಟುಂಬಕ್ಕೆ ೫ ಲಕ್ಷ ರೂ. ವರೆಗಿನ ವೆಚ್ಚದಲ್ಲಿ ನಗದು ರಹಿತ ಚಿಕಿತ್ಸೆ ಪಡೆಯಬಹುದು. ರಾಜ್ಯ ಸರ್ಕಾರವು ಇದಕ್ಕಾಗಿ ಪ್ರಸಕ್ತ ಆಯವ್ಯಯದಲ್ಲಿ ೩೦೦ ಕೋಟಿ ರೂ. ಅನುದಾನ ನಿಗದಿಪಡಿಸಿದೆ. ಹೆಚ್ಚುವರಿ ಹಣವನ್ನು ಅವರೇ ಪಾವತಿಸಬೇಕು.
ಆಂದೋಲನ : ಯೋಜನೆಯ ನೆಟ್ವರ್ಕ್ ಹೊಂದಿರುವ ಆಸ್ಪತ್ರೆಗಳು ಯಾವುವು?
ವಿಜಯಕುಮಾರ್: ಈ ಬಗ್ಗೆ ಸರ್ಕಾರ ಇನ್ನೂ ಪಟ್ಟಿಯನ್ನು ನೀಡಿಲ್ಲ. ಈ ಕಾರಣದಿಂದಲೇ ನೋಂದಣಿ ಪ್ರಕ್ರಿಯೆ ವಿಧಾನದ ಮಾರ್ಗಸೂಚಿ ನಮಗೆ ಬಂದಿಲ್ಲ.
ಯಶಸ್ವಿನಿ ಯೋಜನೆ ಹಿನ್ನೆಲೆ
ಮೈಸೂರು: ಸಹಕಾರ ಸಂಘಗಳ ಸದಸ್ಯರಿಗೆ ಆರೋಗ್ಯ ಸೇವೆ ನೀಡಲು ೨೦೦೩ರಲ್ಲಿ ಯಶಸ್ವಿನಿ ಯೋಜನೆಯನ್ನು ರಾಜ್ಯ ಸರ್ಕಾರ ಆರಂಭಿಸಿತ್ತು. ಆದರೆ ೨೦೧೮ರಲ್ಲಿ ರಾಜ್ಯದ ಎಲ್ಲರಿಗೂ ಸಾರ್ವತ್ರಿಕ ಆರೋಗ್ಯ ರಕ್ಷಣೆ ನೀಡಲು ಆರೋಗ್ಯ ಕರ್ನಾಟಕ ಯೋಜನೆ ಅನುಷ್ಠಾನಗೊಳಿಸಿದ ಸರ್ಕಾರ ೨೦೧೮ರ ಮೇ ೩೧ರಂದು ಯಶಸ್ವಿನಿ ಆರೋಗ್ಯ ಯೋಜನೆಯನ್ನು ರದ್ದುಗೊಳಿಸಿತ್ತು. ಇದೇ ಯೋಜನೆಗೆ ಈಗ ಮರು ಚಾಲನೆ ನೀಡಲಾಗುತ್ತಿದೆ.
ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…
ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…
ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…
ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…
ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…
ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…