ಮೈಸೂರು: ವೃದ್ಧೆಯೊಬ್ಬರ ಖಾತೆಯಿಂದ 54.62ಲಕ್ಷ ರೂ.ಗಳನ್ನು ಅಕ್ರಮವಾಗಿ, ಮೋಸದಿಂದ ವರ್ಗಾವಣೆ ಮಾಡಿಕೊಂಡ ಆರು ಮಂದಿಯ ವಿರುದ್ಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅರುಣ್, ಲೀಲಾವತಿ, ಮರಿಚಿಕ್ಕಸಿದ್ದು, ಶಿವು, ಇಮ್ತಿಯಾಜ್ ಮತ್ತು ನವನಗರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ದೂರು ದಾಖಲಾಗಿದೆ. ಮೈಸೂರು ತಾಲ್ಲೂಕಿನ ಕೆ.ಎಂ.ಹುಂಡಿಯ ಮಾಲಮ್ಮ (೬೫) ಎಂಬವರೇ ದೂರು ದಾಖಲಿಸಿರುವುದು.
ಅರುಣ್ ಮತ್ತು ಇವರ ಪತ್ನಿ ಲೀಲಾವತಿ, ಕೆಂಪಸಿದ್ದನಹುಂಡಿ ಗ್ರಾಮದ ಮರಿಚಿಕ್ಕಸಿದ್ದು, ಇವರ ಮಗ ಶಿವು, ಇಮ್ತಿಯಾಜ್, ಹೂಟಗಳ್ಳಿಯ ನವನಗರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಮ್ಯಾನೇಜರ್ ಒಟ್ಟಿಗೆ ಸೇರಿಕೊಂಡು ಕೆಐಎಡಿಬಿಯಿಂದ ಪರಿಹಾರ ಹಣವಾಗಿ ನನ್ನ ತಾಯಿ ಸಿದ್ದಮ್ಮ ಅವರ ಖಾತೆಗೆ ಬಂದಂತಹ ೫೪.೬೨ ಲಕ್ಷ ರೂ. ಹಣವನ್ನು ನನ್ನ ಖಾತೆಗೆ ವರ್ಗಾಯಿಸಿ ನಂತರ ನನಗೆ ತಿಳಿಯದ ಹಾಗೆ ತಮ್ಮ ತಮ್ಮ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್ ಜೋನ್ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…
ಮೂರು ವಾರಗಳ ಹಿಂದೆ ಈ ಅಂಕಣದಲ್ಲಿ ಪೈರಸಿ ಎನ್ನುವ ಪೆಡಂಭೂತದ ಬಗ್ಗೆ ಹೇಳಲಾಗಿತ್ತು. ನೀಟ್ ಪರೀಕ್ಷೆಯ ಅವಧಿಯ ಕೆಲವು ದಿನ…
ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್ ಪಬ್ಲಿಕ್ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…
ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…
ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್ ಖಾಲಿದ್ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…