ಜಿಲ್ಲೆಗಳು

6 ಲಕ್ಷ ರೂ. ನಗ, ನಾಣ್ಯ ದರೋಡೆ

ಮಲ್ಲಯ್ಯನದೊಡ್ಡಿ ಬೋರೆ ಬಳಿ ಶಿಕ್ಷಕರ ಕುಟುಂಬ ಮೇಲೆ ದಾಳಿ

ಮುಸುಕುಧಾರಿ ಯುವಕರಿಂದ ಮಧ್ಯರಾತ್ರಿಯಲ್ಲಿ ಕುಕೃತ್ಯ

ಮಂಡ್ಯ: ಬೆಂಗಳೂರಿನಿಂದ ಮೈಸೂರಿಗೆ ವಾಪಸಾಗುತ್ತಿದ್ದ ಶಿಕ್ಷಕರ ಕುಟುಂಬದ ಮೇಲೆ ದಾಳಿ ವಾಡಿದ ುಯುವಕರಿಬ್ಬರು ನಗದು ಹಾಗೂ ಚಿನ್ನಾಭರಣ ದರೋಡೆ ಮಾಡಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಮಲ್ಲಯ್ಯನದೊಡ್ಡಿ ಬೋರೆ ಬಳಿ ಭಾನುವಾರ ರಾತ್ರಿ ಮಧ್ಯರಾತ್ರಿ ನಡೆದಿದೆ.

ಮೈಸೂರಿನ ಅಶೋಕಪುರಂ ರೈಲ್ವೆ ವರ್ಕ್ ಶಾಪ್‌ನ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿರುವ ನಾಗರಾಜು ಹಾಗೂ ಅವರ ಪತ್ನಿ ಜಯಶ್ರೀ ದರೋಡೆಗೆ ಒಳಗಾದವರು.
ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಪುತ್ರನನ್ನು ಭೇಟಿ ಮಾಡಲು ನಾಗರಾಜು ದಂಪತಿ ಭಾನುವಾರ ಮಧ್ಯಾಹ್ನ ತೆರಳಿದ್ದು, ರಾತ್ರಿ 10.30ಕ್ಕೆ ಬೆಂಗಳೂರಿನಿಂದ ಮೈಸೂರಿನ ಕಡೆಗೆ ಹೊರಟಿದ್ದರು. ಮಧ್ಯರತ್ರಿ 1.10 ರ ಸಮಯದಲ್ಲಿ ನಾಗರಾಜು ಮೂತ್ರ ವಿಸರ್ಜನೆಗೆಂದು ಮಲ್ಲಯ್ಯನದೊಡ್ಡಿ ಬಳಿ ಇಳಿದಾಗ ಮುಖಗವಸು ಧರಿಸಿದ್ದ ಇಬ್ಬರು ಯುವಕರು ಏಕಾಏಕಿ ಇವರ ಮೇಲೆ ದಾಳಿ ಮಾಡಿದ್ದಾರೆ. ವರ ಬಳಿ ಇದ್ದ 25 ಸಾವಿರ ರೂ.ಗಳನ್ನೂ ಕಿತ್ತುಕೊಂಡಿದ್ದಾರೆ.
ನಂತರ ಚಿನ್ನದ ಸರ, ಉಂಗುರ ಕೊಡುವಂತೆ ತಾಕೀತು ಮಾಡಿದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದಾಗ ಕುತ್ತಿಗೆ ಭಾಗಕ್ಕೆ ಡ್ರಾಗರ್ ಹಿಡಿದು ಕೊಲೆ ಮಾಡುವ ಬೆದರಿಕೆಯನ್ನೂ ಹಾಕಿದ್ದಾರೆ. ಹೆದರಿದ ನಾಗರಾಜು ಉಂಗುರ, ಸರ ನೀಡಿದ್ದಾರೆ. ಬಳಿಕ ಕಾರಿನೊಳಗೆ ಕುಳಿತಿದ್ದ ಪತ್ನಿ ಜಯಶ್ರೀ ಅವರ ಕಡೆಗೂ ತೆರಳಿದ ದರೋಡೆಕೋರರು ಮಾಂಗಲ್ಯ ಸರ, ಗುಂಡುಗಳನ್ನು ಕಿತ್ತುಕೊಂಡಿದ್ದಾರೆ.

ಜೀವ ಉಳಿದರೆ ಸಾಕು ಎಂದು ನಗ, ನಗದು ನೀಡಿದ್ದು, 100 ಗ್ರಾಂ ಚಿನ್ನದ ಆಭರಣ,25.000 ನಗದು ಸೇರಿ ಸುಮಾರು 6 ಲಕ್ಷ ರೂ. ದರೋಡೆ ಮಾಡಲಾಗಿದೆ ಎಂದು ಅಂದಾಜಿಸಲಾಗಿದೆ.

ಅಲ್ಲಿಂದ ಮಂಡ್ಯಕ್ಕೆ ಆಗಮಿಸಿದ ನಾಗರಾಜು ಅವರು ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಸಂಬಂಧ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಗ್ರಾಮಾಂತರ ಇನ್‌ಸ್ಪೆಕ್ಟರ್ ಹಾಗೂ ಪೊಲೀಸರ ತಂಡ ಘಟನೆ ನಡೆದ ಸ್ಥಳಕ್ಕೆ ತೆರಳಿದಾಗ ಅಲ್ಲಿ ಯಾರೂ ಇರಲಿಲ್ಲ. ಈ ಕುರಿತು ಸೋಮವಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮುನ್ನೆಚ್ಚರಿಕೆ ಇರಲಿ:

ಹೆದ್ದಾರಿಯಲ್ಲಿ ಜನರಹಿತ ಪ್ರದೇಶದಲ್ಲಿ ಯಾರೂ ಮೂತ್ರ ವಿಸರ್ಜನೆಗೆಂದು ಇಳಿಯುವುದು ಬೇಡ. ಆದಷ್ಟು ಸುರಕ್ಷಿತ ಸ್ಥಳಗಳನ್ನು ನೋಡಿ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ.

 

andolanait

Recent Posts

ಇಂದು ಮುನಿರತ್ನ ಜಾಮೀನು ಅರ್ಜಿ ಆದೇಶ

ಬೆಂಗಳೂರು: ಪರಿಶಿಷ್ಟ ಜಾತಿ ನಿಂದನೆ ಹಾಗೂ ಮಹಿಳೆಯರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದಡಿ ನ್ಯಾಯಾಂಗ ಬಂಧನಲ್ಲಿರುವ ಬಿಜೆಪಿ ಶಾಸಕ ಮುನಿರತ್ನ…

3 mins ago

ಒಂದು ದೇಶ, ಒಂದು ಚುನಾವಣೆ ವ್ಯವಸ್ಥೆಗೆ ಸ್ವಾಗತ, ಮೋದಿಯವರ ಭಯದಿಂದ ಈ ಕ್ರಮ ವಿರೋಧಿಸುತ್ತಿರುವ ಕಾಂಗ್ರೆಸ್‌: ಆರ್‌.ಅಶೋಕ

ರಾಹುಲ್‌ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ…

7 hours ago

ರೀಲ್ಸ್‌ ಪ್ರಿಯರಿಗೆ ಭರ್ಜರಿ ಆಫರ್:‌ ರೀಲ್ಸ್ ಟ್ಯಾಗ್ ಮಾಡಿ ಬಹುಮಾನ ಗೆಲ್ಲಿ

ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್‌ ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು…

7 hours ago

ʻಕಾಟೇರʼನಿಗೆ ಕೋಳ ಬಿದ್ದು 100 ದಿನ: ಇಲ್ಲಿಯವರೆಗೆ ಏನೆಲ್ಲ ಆಯ್ತು? ಇಲ್ಲಿದೆ ಕಂಪ್ಲಿಟ್‌ ಡೀಟೆಲ್ಸ್…‌

ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಜೈಲು ಸೇರಿ ಇಂದಿಗೆ ಬರೊಬ್ಬರಿ 100 ದಿನ…

8 hours ago

ಕೃಷಿ ತಂತ್ರಜ್ಞಾನ ವರ್ಗಾವಣೆ ರಾಜ್ಯ ಸರ್ಕಾರದ ಆದ್ಯತೆ: ಎನ್ ಚಲುವರಾಯಸ್ವಾಮಿ

ಬೆಂಗಳೂರು: ಭೂಸಾರ ಹಾಗೂ ಇ ಸ್ಯಾಪ್ ಆ್ಯಪ್ ಗಳು ಕೃಷಿ ಉತ್ಪಾದನೆ ಹೆಚ್ಚಿಸುವಲ್ಲಿ ಪರಿಣಕಾರಿಯಾಗಿ ನೆರವಾಗಲಿವೆ .ಇದೇ ರೀತಿ ರೈತರಿಗೆ…

8 hours ago

ದಸರಾ ಚಲನಚಿತ್ರೋತ್ಸವ: ಕಿರುಚಿತ್ರ ಪ್ರದರ್ಶನ

ಮೈಸೂರು: ದಸರಾ ಚಲನಚಿತ್ರೋತ್ಸವ 2024 ರ ಅಂಗವಾಗಿ ಅಂತಿಮವಾಗಿ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳಲು ಕಿರುಚಿತ್ರ ಸ್ಪರ್ಧೆಯಲ್ಲಿ ಆಯ್ಕೆಯಾಗಿರುತ್ತವೆ. ಅಭಿಜಿತ್ ಪುರೋಹಿತ್ ನಿರ್ದೇಶನದ…

8 hours ago