ಜಿಲ್ಲೆಗಳು

6 ಲಕ್ಷ ರೂ. ನಗ, ನಾಣ್ಯ ದರೋಡೆ

ಮಲ್ಲಯ್ಯನದೊಡ್ಡಿ ಬೋರೆ ಬಳಿ ಶಿಕ್ಷಕರ ಕುಟುಂಬ ಮೇಲೆ ದಾಳಿ

ಮುಸುಕುಧಾರಿ ಯುವಕರಿಂದ ಮಧ್ಯರಾತ್ರಿಯಲ್ಲಿ ಕುಕೃತ್ಯ

ಮಂಡ್ಯ: ಬೆಂಗಳೂರಿನಿಂದ ಮೈಸೂರಿಗೆ ವಾಪಸಾಗುತ್ತಿದ್ದ ಶಿಕ್ಷಕರ ಕುಟುಂಬದ ಮೇಲೆ ದಾಳಿ ವಾಡಿದ ುಯುವಕರಿಬ್ಬರು ನಗದು ಹಾಗೂ ಚಿನ್ನಾಭರಣ ದರೋಡೆ ಮಾಡಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಮಲ್ಲಯ್ಯನದೊಡ್ಡಿ ಬೋರೆ ಬಳಿ ಭಾನುವಾರ ರಾತ್ರಿ ಮಧ್ಯರಾತ್ರಿ ನಡೆದಿದೆ.

ಮೈಸೂರಿನ ಅಶೋಕಪುರಂ ರೈಲ್ವೆ ವರ್ಕ್ ಶಾಪ್‌ನ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿರುವ ನಾಗರಾಜು ಹಾಗೂ ಅವರ ಪತ್ನಿ ಜಯಶ್ರೀ ದರೋಡೆಗೆ ಒಳಗಾದವರು.
ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಪುತ್ರನನ್ನು ಭೇಟಿ ಮಾಡಲು ನಾಗರಾಜು ದಂಪತಿ ಭಾನುವಾರ ಮಧ್ಯಾಹ್ನ ತೆರಳಿದ್ದು, ರಾತ್ರಿ 10.30ಕ್ಕೆ ಬೆಂಗಳೂರಿನಿಂದ ಮೈಸೂರಿನ ಕಡೆಗೆ ಹೊರಟಿದ್ದರು. ಮಧ್ಯರತ್ರಿ 1.10 ರ ಸಮಯದಲ್ಲಿ ನಾಗರಾಜು ಮೂತ್ರ ವಿಸರ್ಜನೆಗೆಂದು ಮಲ್ಲಯ್ಯನದೊಡ್ಡಿ ಬಳಿ ಇಳಿದಾಗ ಮುಖಗವಸು ಧರಿಸಿದ್ದ ಇಬ್ಬರು ಯುವಕರು ಏಕಾಏಕಿ ಇವರ ಮೇಲೆ ದಾಳಿ ಮಾಡಿದ್ದಾರೆ. ವರ ಬಳಿ ಇದ್ದ 25 ಸಾವಿರ ರೂ.ಗಳನ್ನೂ ಕಿತ್ತುಕೊಂಡಿದ್ದಾರೆ.
ನಂತರ ಚಿನ್ನದ ಸರ, ಉಂಗುರ ಕೊಡುವಂತೆ ತಾಕೀತು ಮಾಡಿದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದಾಗ ಕುತ್ತಿಗೆ ಭಾಗಕ್ಕೆ ಡ್ರಾಗರ್ ಹಿಡಿದು ಕೊಲೆ ಮಾಡುವ ಬೆದರಿಕೆಯನ್ನೂ ಹಾಕಿದ್ದಾರೆ. ಹೆದರಿದ ನಾಗರಾಜು ಉಂಗುರ, ಸರ ನೀಡಿದ್ದಾರೆ. ಬಳಿಕ ಕಾರಿನೊಳಗೆ ಕುಳಿತಿದ್ದ ಪತ್ನಿ ಜಯಶ್ರೀ ಅವರ ಕಡೆಗೂ ತೆರಳಿದ ದರೋಡೆಕೋರರು ಮಾಂಗಲ್ಯ ಸರ, ಗುಂಡುಗಳನ್ನು ಕಿತ್ತುಕೊಂಡಿದ್ದಾರೆ.

ಜೀವ ಉಳಿದರೆ ಸಾಕು ಎಂದು ನಗ, ನಗದು ನೀಡಿದ್ದು, 100 ಗ್ರಾಂ ಚಿನ್ನದ ಆಭರಣ,25.000 ನಗದು ಸೇರಿ ಸುಮಾರು 6 ಲಕ್ಷ ರೂ. ದರೋಡೆ ಮಾಡಲಾಗಿದೆ ಎಂದು ಅಂದಾಜಿಸಲಾಗಿದೆ.

ಅಲ್ಲಿಂದ ಮಂಡ್ಯಕ್ಕೆ ಆಗಮಿಸಿದ ನಾಗರಾಜು ಅವರು ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಸಂಬಂಧ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಗ್ರಾಮಾಂತರ ಇನ್‌ಸ್ಪೆಕ್ಟರ್ ಹಾಗೂ ಪೊಲೀಸರ ತಂಡ ಘಟನೆ ನಡೆದ ಸ್ಥಳಕ್ಕೆ ತೆರಳಿದಾಗ ಅಲ್ಲಿ ಯಾರೂ ಇರಲಿಲ್ಲ. ಈ ಕುರಿತು ಸೋಮವಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮುನ್ನೆಚ್ಚರಿಕೆ ಇರಲಿ:

ಹೆದ್ದಾರಿಯಲ್ಲಿ ಜನರಹಿತ ಪ್ರದೇಶದಲ್ಲಿ ಯಾರೂ ಮೂತ್ರ ವಿಸರ್ಜನೆಗೆಂದು ಇಳಿಯುವುದು ಬೇಡ. ಆದಷ್ಟು ಸುರಕ್ಷಿತ ಸ್ಥಳಗಳನ್ನು ನೋಡಿ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ.

 

andolanait

Recent Posts

ಸಿಎಂ ಆಯ್ಕೆ ವೇಳೆ ಯಾವುದೇ ಗಡುವು ಕೊಟ್ಟಿಲ್ಲ: ಸಚಿವ ಕೆ.ಜೆ.ಜಾರ್ಜ್‌

ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದಾರೆ. ಸಿಎಂ ಬದಲಾವಣೆ…

42 mins ago

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ KERS ನಿರ್ದೇಶಕ ನೇತೃತ್ವದಲ್ಲಿ ತಂಡ ರಚನೆ

ಬೆಂಗಳೂರು: ಸುಪ್ರೀಂಕೋರ್ಟ್‌ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್‌ ಸಂಶೋಧನಾ ಕೇಂದ್ರ ನಿರ್ದೇಶಕರ…

1 hour ago

ಪಾರಂಪರಿಕ ನಗರ ಅಭಿವೃದ್ಧಿಗೆ ಕಾನೂನು ರೂಪಿಸಿ: ಸಂಸತ್‌ನಲ್ಲಿ ಸಂಸದ ಯದುವೀರ್‌ ಒಡೆಯರ್‌ ಆಗ್ರಹ

ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…

1 hour ago

ನನ್ನನ್ನು ಸಿಎಂ ಮಾಡುವುದಾದರೆ ಬಿಜೆಪಿಗೆ ವಾಪಸ್‌ ಹೋಗುತ್ತೇನೆ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್‌ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌…

2 hours ago

ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನಿಂದ ಹಿಟ್‌ ಅಂಡ್‌ ರನ್:‌ ಸವಾರ ಸಾವು

ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿರುವ…

3 hours ago

ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ

ಮೈಸೂರು: ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…

3 hours ago