ವಿಜಯನಗರದಲ್ಲಿ ೬೦ ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಜಿ.ಟಿ.ದೇವೇಗೌಡ
ಮೈಸೂರು: ವಿಜಯನಗರ ಮೂರನೇ ಹಂತದ ವ್ಯಾಪ್ತಿಯಲ್ಲಿ ಬರುವ ಎಲ್ಲ ರಸ್ತೆಗಳ ಡಾಂಬರೀಕರಣ ಮಾಡಲು ೬೦ ಕೋಟಿ ರೂ. ಮಂಜೂರು ಮಾಡಲಾಗಿದೆ. ಅದೇ ರೀತಿ ವಿಜಯನಗರ ನಾಲ್ಕನೇ ಹಂತಕ್ಕೆ ೬೦ ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.
ವಿಜಯನಗರ ಮೂರನೇ ಹಂತದಲ್ಲಿ ಕೈಗೊಂಡಿರುವ ೬೦ ಕೋಟಿ ರೂ. ವೆಚ್ಚದ ರಸ್ತೆಗಳ ಡಾಂಬರೀಕರಣ ಕಾಮಗಾರಿಗಳಿಗೆ ಶಾಸಕ ಜಿ.ಟಿ.ದೇವೇಗೌಡ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು ಮುಡಾದಲ್ಲಿ ನಿಧಿ ಒಂದು, ನಿಧಿ ಎರಡು ಹಂತ ಎಂದು ವರ್ಗೀಕರಣ ಮಾಡಿದ್ದಲ್ಲದೆ, ಕಾಮಗಾರಿಯನ್ನು ಕೈಗೆತ್ತಿಕೊಳ್ಳದಂತೆ ಸರ್ಕಾರ ಸೂಚನೆ ನೀಡಿದ್ದರಿಂದ ಮೂರು ವರ್ಷಗಳ ಕಾಲ ಯಾವುದೇ ಕಾಮಗಾರಿಯನ್ನೂ ಕೈಗೊಳ್ಳಲು ಸಾಧ್ಯವಾಗಿರಲಿಲ್ಲ. ನಂತರ ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವರಿಕೆ ಮಾಡಿಕೊಟ್ಟ ಮೇಲೆ ಅನುದಾನ ಬಿಡುಗಡೆಯಾಗಿದ್ದರಿಂದ ಮುಡಾ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಕೆಲಸ ಆರಂಭಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್ಗೌಡ, ಮುಡಾ ಅಧೀಕ್ಷಕ ಅಭಿಯಂತರ ಚನ್ನಕೇಶವಯ್ಯ, ಮುಖಂಡರಾದ ಮಂಜುನಾಥ್, ರವಿಕುಮಾರ್ ಇನ್ನಿತರರು ಹಾಜರಿದ್ದರು.
ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…
ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…
ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…
ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…
ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…