ವಿಜಯನಗರದಲ್ಲಿ ೬೦ ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಜಿ.ಟಿ.ದೇವೇಗೌಡ
ಮೈಸೂರು: ವಿಜಯನಗರ ಮೂರನೇ ಹಂತದ ವ್ಯಾಪ್ತಿಯಲ್ಲಿ ಬರುವ ಎಲ್ಲ ರಸ್ತೆಗಳ ಡಾಂಬರೀಕರಣ ಮಾಡಲು ೬೦ ಕೋಟಿ ರೂ. ಮಂಜೂರು ಮಾಡಲಾಗಿದೆ. ಅದೇ ರೀತಿ ವಿಜಯನಗರ ನಾಲ್ಕನೇ ಹಂತಕ್ಕೆ ೬೦ ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.
ವಿಜಯನಗರ ಮೂರನೇ ಹಂತದಲ್ಲಿ ಕೈಗೊಂಡಿರುವ ೬೦ ಕೋಟಿ ರೂ. ವೆಚ್ಚದ ರಸ್ತೆಗಳ ಡಾಂಬರೀಕರಣ ಕಾಮಗಾರಿಗಳಿಗೆ ಶಾಸಕ ಜಿ.ಟಿ.ದೇವೇಗೌಡ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು ಮುಡಾದಲ್ಲಿ ನಿಧಿ ಒಂದು, ನಿಧಿ ಎರಡು ಹಂತ ಎಂದು ವರ್ಗೀಕರಣ ಮಾಡಿದ್ದಲ್ಲದೆ, ಕಾಮಗಾರಿಯನ್ನು ಕೈಗೆತ್ತಿಕೊಳ್ಳದಂತೆ ಸರ್ಕಾರ ಸೂಚನೆ ನೀಡಿದ್ದರಿಂದ ಮೂರು ವರ್ಷಗಳ ಕಾಲ ಯಾವುದೇ ಕಾಮಗಾರಿಯನ್ನೂ ಕೈಗೊಳ್ಳಲು ಸಾಧ್ಯವಾಗಿರಲಿಲ್ಲ. ನಂತರ ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವರಿಕೆ ಮಾಡಿಕೊಟ್ಟ ಮೇಲೆ ಅನುದಾನ ಬಿಡುಗಡೆಯಾಗಿದ್ದರಿಂದ ಮುಡಾ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಕೆಲಸ ಆರಂಭಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್ಗೌಡ, ಮುಡಾ ಅಧೀಕ್ಷಕ ಅಭಿಯಂತರ ಚನ್ನಕೇಶವಯ್ಯ, ಮುಖಂಡರಾದ ಮಂಜುನಾಥ್, ರವಿಕುಮಾರ್ ಇನ್ನಿತರರು ಹಾಜರಿದ್ದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…