ಜಿಲ್ಲೆಗಳು

10 ಮುದ್ದೆ ತಿಂದು 14ನೇ ಬಾರಿ ಪ್ರಶಸ್ತಿ ಪಡೆದ 62ರ ವೃದ್ಧ

ಮಂಡ್ಯ: ನಗರದ ಅಂಬೇಡ್ಕರ್ ಭವನದ ಆವರಣದಲ್ಲಿ ಜಿಲ್ಲಾಡಳಿತ ಮತ್ತು ಕೃಷಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಸಾವಯವ ಸಿರಿಧಾನ್ಯ ಹಬ್ಬ, ಆಹಾರ ಮೇಳ ಮತ್ತು ವಸ್ತು ಪ್ರದರ್ಶನದಲ್ಲಿ 62 ವರ್ಷದ ವೃದ್ಧರೋರ್ವರು ಬರೋಬ್ಬರಿ 10 ಮುದ್ದೆ ಸೇವಿಸುವ ಮೂಲಕ ಪ್ರಥಮ ಸ್ಥಾನ ಪಡೆದು ಸತತ 14ನೇ ಬಾರಿ ಪ್ರಶಸ್ತಿ ಪಡೆದಿದ್ದಾರೆ.

ಶ್ರೀರಂಗಪಟ್ಟಣ ತಾಲ್ಲೂಕಿನ ಅರಕೆರೆ ಗ್ರಾಮದ ಈರೇಗೌಡ ಅವರೇ 10 ಮುದ್ದೆ (2 ಕೆ.ಜಿ. 717 ಗ್ರಾಂ) ನುಂಗಿ ಸತತ 14ನೇ ಬಾರಿ ಪ್ರಶಸ್ತಿ ಪಡೆದರು. ಇದೇ ಗ್ರಾಮದ ದಿಲೀಪ್ 6 ಮುದ್ದೆ ಸೇವಿಸಿ ದ್ವಿತೀಯ ಸ್ಥಾನ ಪಡೆದರೆ, ಟಿ.ಎಂ. ಹೊಸೂರಿನ ರವೀಂದ್ರ ಎಂಬವರು 6 ಮುದ್ದೆ ಸೇವಿಸಿ ತೃತೀಯ ಸ್ಥಾನ ಪಡೆದರು.

ಸ್ಪರ್ಧೆಯಲ್ಲಿ ಜಂಟಿ ಕೃಷಿ ನಿರ್ದೇಶಕ ಅಶೋಕ್, ಮಂಡ್ಯ ಸಾವಯವ ಬೆಲ್ಲ ಸಂಸ್ಥೆಯ ಅಧ್ಯಕ್ಷ ಕಾರಸವಾಡಿ ಮಹದೇವು ಸೇರಿದಂತೆ ಒಟ್ಟು 9 ಮಂದಿ ಭಾಗವಹಿಸಿದ್ದರು.

16 ಮುದ್ದೆ ನುಂಗಿದ್ದ ಭೂಪ:
ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದಿದ್ದ ಸ್ಪರ್ಧೆಯಲ್ಲಿ ಇದೇ ಅರಕೆರೆ ಈರೇಗೌಡ ಅವರು 16 ಮುದ್ದೆ (5 ಕೆ.ಜಿ) ಸೇವಿಸಿ ಮೊದಲ ಸ್ಥಾನ ಪಡೆದುಕೊಂಡಿದ್ದರು. ಮೊದಲ ಬಹುಮಾನವಾಗಿ 15 ಕೆ.ಜಿ ಕುರಿಯನ್ನು ನೀಡಲಾಗಿತ್ತು.

20 ನಿಮಿಷಗಳ ಸ್ಪರ್ಧೆ:
ರಾಗಿ ಮುದ್ದೆ ನಾಟಿಕೋಳಿ ಸಾರು ಊಟದ ಸ್ಪರ್ಧೆಗೆ 20 ನಿಮಿಷ ಕಾಲಾವಕಾಶ ನೀಡಲಾಗಿತ್ತು. ಈ ಸಮಯದಲ್ಲಿ ಯಾರು ಅತಿ ಹೆಚ್ಚು ಮುದ್ದೆ ತಿನ್ನುತ್ತಾರೋ ಅವರು ವಿಜಯಶಾಲಿಗಳು ಎಂದು ಘೋಷಿಸಲಾಗಿತ್ತು. ಮೊದಲು ಎಲ್ಲರ ತಟ್ಟೆಗೂ ಎರಡು ಮುದ್ದೆ, ನಾಟಿ ಕೋಳಿ ಮಾಂಸ, ಒಂದು ಮೊಟ್ಟೆ, ನಾಟಿ ಕೋಳಿ ಸಾರು ಹಾಕಿ ಆನಂತರ ಒಮ್ಮೆಗೆ ತೀರ್ಪುಗಾರರು ಊಟಕ್ಕೆ ಚಾಲನೆ ಕೊಟ್ಟರು. ಮುದ್ದೆ ಖಾಲಿಯಾಗುತ್ತಿದ್ದಂತೆ ತಟ್ಟೆಗೆ ಬಿಸಿ ಬಿಸಿ ಮುದ್ದೆ ಬಂದು ಬೀಳುತ್ತಿದ್ದವು. ಮೊದಲನೇ ಬಹುಮಾನವಾಗಿ 3 ಸಾವಿರ ನಗದು, ಪ್ರಶಸ್ತಿ ಪತ್ರ, ದ್ವಿತೀಯ ಬಹುಮಾನವಾಗಿ 2 ಸಾವಿರ ರೂ, ತೃತೀಯ ಬಹುಮಾನವಾಗಿ ಒಂದು ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರ ನೀಡಲಾಯಿತು.

andolana

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

5 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

5 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

6 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

6 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

6 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

6 hours ago