ಜಿಲ್ಲೆಗಳು

ಅದ್ದೂರಿಯಾಗಿ 75 ನೇ ಗಣ ರಾಜ್ಯೋತ್ಸವ ಆಚರಣೆ : ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

ಮೈಸೂರು : 75 ನೇ ಅಮೃತ ಮಹೋತ್ಸವ ವರ್ಷದ ಗಣರಾಜ್ಯೋತ್ಸವ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು.

ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ಸಿ ಮಹದೇವಪ್ಪ ಅವರು ದ್ವಜರೋಹಣ ನೆರವೇರಿಸಿ,ನಾಡಿಗೆ ಸಂದೇಶ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮೈಸೂರು ಮಹಾನಗರ ಪಾಲಿಕೆಯ ಸಂಯುಕ್ತಾಶ್ರದಲ್ಲಿ ಪಂಜಿನ ಕವಾಯತು ಮೈದಾನದಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ಸಚಿವರು ದ್ವಜ ವಂದನೆ ಸ್ವೀಕರಿಸಿದರು.

ಡಾ. ಬಿ ಆರ್ ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ  ಗಣ್ಯರು ಪುಷ್ಪಾರ್ಚನೆ ನಂತರ ತೆರೆದ ವಾಹನದಲ್ಲಿ ತೆರಳಿ ಪಥ ಸಂಚಲನ ತುಕಡಿಗಳಿಂದ ಗೌರವ ಸ್ವೀಕರಿಸಿದರು.

 

ಪೊಲೀಸ್ ತುಕಡಿಗಳು, ಮಹಿಳಾ ಪೊಲೀಸ್ ತುಕಡಿಗಳು, ಮೀಸಲು ಪೊಲೀಸ್ ತುಕಡಿಗಳು, ಗೃಹ ರಕ್ಷಕ ದಳ, ಅರಣ್ಯ ರಕ್ಷಕ ದಳ, ಎನ್ ಎಸ್ ಎಸ್ , ಎನ್ ಸಿ ಸಿ ತಂಡಗಳು, ಸ್ಕೌಟ್ ಮತ್ತು ಗೈಡ್ಸ್ ತಂಡಗಳು, ಪೊಲೀಸ್ ಬ್ಯಾಂಡ್ ತಂಡ ಹಾಗೂ ವಿವಿಧ ಶಾಲೆಗಳ ತಂಡಗಳು ಪೆರೇಡ್ ನಲ್ಲಿ ಭಾಗವಹಿಸಿ ಆಕರ್ಷಕ ಪಥ ಸಂಚಲನ ನಡೆಸಿದವು.

ಇದೇ ಸಂದರ್ಭದಲ್ಲಿ ಮಾನ್ಯ ಸಚಿವರು ಹಾಗೂ ಅತಿಥಿಗಳು ಸಂವಿಧಾನ ಜಾಗೃತಿ ಸಾರುವ ಜಾಥಾದ ಸ್ಥಬ್ದ ಚಿತ್ರವಾಹನಗಳಿಗೆ ಹಸಿರು ನಿಶಾನೆ ಮೂಲಕ ಚಾಲನೆ ನೀಡಿದರು.

 

ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜಯ ವಿಠಲ ಶಾಲೆ ಮಕ್ಕಳು ಭಾರತಾಂಬೆಯ ಮಕ್ಕಳು ನಾವು ಎಂಬ ದೇಶಭಕ್ತಿ ಗೀತೆಗೆ ನೃತ್ಯ ಪ್ರದರ್ಶನ ನೀಡಿದರು.ಜಿ ಎಸ್ ಎಸ್ ಎಸ್ ಶಾಲೆಯ ಮಕ್ಕಳಿಂದ ಚಕ್ ದೇ ಇಂಡಿಯಾ ಹಾಡಿಗೆ ನೃತ್ಯ ಪ್ರದರ್ಶನ ಹಾಗೂ ನಳಂದ ಇಂಗ್ಲಿಷ್ ಶಾಲೆಯ ಮಕ್ಕಳಿಂದ ಜೈ ಹೋ ಹಾಡಿಗೆ ನೃತ್ಯ ಪ್ರದರ್ಶನ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ತನ್ವೀರ್ ಸೇಠ್ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಪ್ರಾದೇಶಿಕ ಆಯುಕ್ತರಾದ ಬಿ ಜಿ ಪ್ರಕಾಶ್, ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ ಎಂ ಗಾಯತ್ರಿ ಅವರು ಸೇರಿದಂತೆ ಮತ್ತಿತರು ಉಪಸ್ಥಿರಿದ್ದರು.

andolanait

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

7 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

8 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

8 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

8 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

9 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

9 hours ago