ಮೈಸೂರು : 75 ನೇ ಅಮೃತ ಮಹೋತ್ಸವ ವರ್ಷದ ಗಣರಾಜ್ಯೋತ್ಸವ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು.
ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ಸಿ ಮಹದೇವಪ್ಪ ಅವರು ದ್ವಜರೋಹಣ ನೆರವೇರಿಸಿ,ನಾಡಿಗೆ ಸಂದೇಶ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮೈಸೂರು ಮಹಾನಗರ ಪಾಲಿಕೆಯ ಸಂಯುಕ್ತಾಶ್ರದಲ್ಲಿ ಪಂಜಿನ ಕವಾಯತು ಮೈದಾನದಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ಸಚಿವರು ದ್ವಜ ವಂದನೆ ಸ್ವೀಕರಿಸಿದರು.
ಡಾ. ಬಿ ಆರ್ ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ನಂತರ ತೆರೆದ ವಾಹನದಲ್ಲಿ ತೆರಳಿ ಪಥ ಸಂಚಲನ ತುಕಡಿಗಳಿಂದ ಗೌರವ ಸ್ವೀಕರಿಸಿದರು.
ಪೊಲೀಸ್ ತುಕಡಿಗಳು, ಮಹಿಳಾ ಪೊಲೀಸ್ ತುಕಡಿಗಳು, ಮೀಸಲು ಪೊಲೀಸ್ ತುಕಡಿಗಳು, ಗೃಹ ರಕ್ಷಕ ದಳ, ಅರಣ್ಯ ರಕ್ಷಕ ದಳ, ಎನ್ ಎಸ್ ಎಸ್ , ಎನ್ ಸಿ ಸಿ ತಂಡಗಳು, ಸ್ಕೌಟ್ ಮತ್ತು ಗೈಡ್ಸ್ ತಂಡಗಳು, ಪೊಲೀಸ್ ಬ್ಯಾಂಡ್ ತಂಡ ಹಾಗೂ ವಿವಿಧ ಶಾಲೆಗಳ ತಂಡಗಳು ಪೆರೇಡ್ ನಲ್ಲಿ ಭಾಗವಹಿಸಿ ಆಕರ್ಷಕ ಪಥ ಸಂಚಲನ ನಡೆಸಿದವು.
ಇದೇ ಸಂದರ್ಭದಲ್ಲಿ ಮಾನ್ಯ ಸಚಿವರು ಹಾಗೂ ಅತಿಥಿಗಳು ಸಂವಿಧಾನ ಜಾಗೃತಿ ಸಾರುವ ಜಾಥಾದ ಸ್ಥಬ್ದ ಚಿತ್ರವಾಹನಗಳಿಗೆ ಹಸಿರು ನಿಶಾನೆ ಮೂಲಕ ಚಾಲನೆ ನೀಡಿದರು.
ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜಯ ವಿಠಲ ಶಾಲೆ ಮಕ್ಕಳು ಭಾರತಾಂಬೆಯ ಮಕ್ಕಳು ನಾವು ಎಂಬ ದೇಶಭಕ್ತಿ ಗೀತೆಗೆ ನೃತ್ಯ ಪ್ರದರ್ಶನ ನೀಡಿದರು.ಜಿ ಎಸ್ ಎಸ್ ಎಸ್ ಶಾಲೆಯ ಮಕ್ಕಳಿಂದ ಚಕ್ ದೇ ಇಂಡಿಯಾ ಹಾಡಿಗೆ ನೃತ್ಯ ಪ್ರದರ್ಶನ ಹಾಗೂ ನಳಂದ ಇಂಗ್ಲಿಷ್ ಶಾಲೆಯ ಮಕ್ಕಳಿಂದ ಜೈ ಹೋ ಹಾಡಿಗೆ ನೃತ್ಯ ಪ್ರದರ್ಶನ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ತನ್ವೀರ್ ಸೇಠ್ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಪ್ರಾದೇಶಿಕ ಆಯುಕ್ತರಾದ ಬಿ ಜಿ ಪ್ರಕಾಶ್, ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ ಎಂ ಗಾಯತ್ರಿ ಅವರು ಸೇರಿದಂತೆ ಮತ್ತಿತರು ಉಪಸ್ಥಿರಿದ್ದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…