ಮೈಸೂರು : 75 ನೇ ಅಮೃತ ಮಹೋತ್ಸವ ವರ್ಷದ ಗಣರಾಜ್ಯೋತ್ಸವ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು.
ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ಸಿ ಮಹದೇವಪ್ಪ ಅವರು ದ್ವಜರೋಹಣ ನೆರವೇರಿಸಿ,ನಾಡಿಗೆ ಸಂದೇಶ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮೈಸೂರು ಮಹಾನಗರ ಪಾಲಿಕೆಯ ಸಂಯುಕ್ತಾಶ್ರದಲ್ಲಿ ಪಂಜಿನ ಕವಾಯತು ಮೈದಾನದಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ಸಚಿವರು ದ್ವಜ ವಂದನೆ ಸ್ವೀಕರಿಸಿದರು.
ಡಾ. ಬಿ ಆರ್ ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ನಂತರ ತೆರೆದ ವಾಹನದಲ್ಲಿ ತೆರಳಿ ಪಥ ಸಂಚಲನ ತುಕಡಿಗಳಿಂದ ಗೌರವ ಸ್ವೀಕರಿಸಿದರು.
ಪೊಲೀಸ್ ತುಕಡಿಗಳು, ಮಹಿಳಾ ಪೊಲೀಸ್ ತುಕಡಿಗಳು, ಮೀಸಲು ಪೊಲೀಸ್ ತುಕಡಿಗಳು, ಗೃಹ ರಕ್ಷಕ ದಳ, ಅರಣ್ಯ ರಕ್ಷಕ ದಳ, ಎನ್ ಎಸ್ ಎಸ್ , ಎನ್ ಸಿ ಸಿ ತಂಡಗಳು, ಸ್ಕೌಟ್ ಮತ್ತು ಗೈಡ್ಸ್ ತಂಡಗಳು, ಪೊಲೀಸ್ ಬ್ಯಾಂಡ್ ತಂಡ ಹಾಗೂ ವಿವಿಧ ಶಾಲೆಗಳ ತಂಡಗಳು ಪೆರೇಡ್ ನಲ್ಲಿ ಭಾಗವಹಿಸಿ ಆಕರ್ಷಕ ಪಥ ಸಂಚಲನ ನಡೆಸಿದವು.
ಇದೇ ಸಂದರ್ಭದಲ್ಲಿ ಮಾನ್ಯ ಸಚಿವರು ಹಾಗೂ ಅತಿಥಿಗಳು ಸಂವಿಧಾನ ಜಾಗೃತಿ ಸಾರುವ ಜಾಥಾದ ಸ್ಥಬ್ದ ಚಿತ್ರವಾಹನಗಳಿಗೆ ಹಸಿರು ನಿಶಾನೆ ಮೂಲಕ ಚಾಲನೆ ನೀಡಿದರು.
ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜಯ ವಿಠಲ ಶಾಲೆ ಮಕ್ಕಳು ಭಾರತಾಂಬೆಯ ಮಕ್ಕಳು ನಾವು ಎಂಬ ದೇಶಭಕ್ತಿ ಗೀತೆಗೆ ನೃತ್ಯ ಪ್ರದರ್ಶನ ನೀಡಿದರು.ಜಿ ಎಸ್ ಎಸ್ ಎಸ್ ಶಾಲೆಯ ಮಕ್ಕಳಿಂದ ಚಕ್ ದೇ ಇಂಡಿಯಾ ಹಾಡಿಗೆ ನೃತ್ಯ ಪ್ರದರ್ಶನ ಹಾಗೂ ನಳಂದ ಇಂಗ್ಲಿಷ್ ಶಾಲೆಯ ಮಕ್ಕಳಿಂದ ಜೈ ಹೋ ಹಾಡಿಗೆ ನೃತ್ಯ ಪ್ರದರ್ಶನ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ತನ್ವೀರ್ ಸೇಠ್ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಪ್ರಾದೇಶಿಕ ಆಯುಕ್ತರಾದ ಬಿ ಜಿ ಪ್ರಕಾಶ್, ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ ಎಂ ಗಾಯತ್ರಿ ಅವರು ಸೇರಿದಂತೆ ಮತ್ತಿತರು ಉಪಸ್ಥಿರಿದ್ದರು.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…