ಜಿಲ್ಲೆಗಳು

ಸೆ. 26ರಿಂದ 90ದಿನಗಳ ಕಾಲ ದಸರಾ ವಸ್ತು ಪ್ರದರ್ಶನ : ಮಿರ್ಲೆ ಶ್ರೀನಿವಾಸ್‌ಗೌಡ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದ ಈ ಬಾರಿಯ ವಸ್ತು ಪ್ರದರ್ಶನವು ಸೆ.26ರಿಂದ ಪ್ರಾರಂಭವಾಗಲಿದೆ ಎಂದು ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ ಅವರು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಬಾರಿ ವಿಶೇಷ ಕಾರ್ಯಕ್ರಮಗಳೊಂದಿಗೆ 90 ದಿನಗಳ ಕಾಲ ವಸ್ತುಪ್ರದರ್ಶನ ಆಯೋಜನೆಗೊಳಿಸಲಾಗಿದೆ. ವಸ್ತುಪ್ರದರ್ಶನದಲ್ಲಿ ಪುನೀತ್ ರಾಜ್ ಕುಮಾರ್ ನೆನಪಿಗಾಗಿ 7 ಸ್ಯಾಂಡ್ ಮ್ಯೂಸಿಯಂ,
ಯೋಗ 3ಡಿ ವಿಡಿಯೋ ಮ್ಯಾಪಿಂಗ್ ಸೇರಿದಂತೆ ಕಾವೇರಿ ಬಹುಮಾಧ್ಯಮ ಕಲಾ ಗ್ಯಾಲರಿ ಉದ್ಘಾಟನೆ ಮಾಡಲಾಗುವುದು ಎಂದರು.

ಪ್ರತ್ಯೇಕ ಆವರಣಗಳಲ್ಲಿ ವೆಜ್ ಅಂಡ್ ನಾನ್ ವೆಜ್  ಸ್ಟಾಲ್ ಗಳಿಗೆ ವ್ಯವಸ್ಥೆ ಮಾಡಲಾಗಿದೆ ಎಂದರು. ಇದರ ಜೊತೆಗೆ 6 ಮಂದಿ ಸ್ವಾತಂತ್ರ್ಯ ಹೋರಾಟಗಾರರ ಮರಳು ಕೃತಿಯನ್ನು ರಚಿಸಲಾಗುವುದು. ಆ 6ಮಂದಿ ಸ್ವಾತಂತ್ರ್ಯ ಹೋರಾಟಗಾರರು ಯಾರು ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದರು.

ವಸ್ತುಪ್ರದರ್ಶನದ ಅವರಣವನ್ನ ಪ್ಲಾಸ್ಟಿಕ್ ಮುಕ್ತ ವಲಯ ಎಂದು ಘೋಷಣೆ ಹಿನ್ನೆಲೆ ಪ್ಲಾಸ್ಟಿಕ್ ಬಳಸುವಂತಿಲ್ಲ,
ಪ್ಲಾಸ್ಟಿಕ್ ಬಳಕೆ ತಡೆಗಟ್ಟಲು ಪ್ರಾಧಿಕಾರದ ವತಿಯಿಂದಲೇ ಆರ್ ಓ ಪ್ಲಾಂಟ್ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತದೆ.  ಎರಡು ವರ್ಷಗಳ ಕೋವಿಡ್ ಬಳಿಕ ನಡೆಯುತ್ತಿರುವ ಅದ್ದೂರಿ ವಸ್ತು ಪ್ರದರ್ಶನ ಇದಾಗಿದೆ, ಹೀಗಾಗಿ
ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು, ನಗರದ ಜನತೆ ಆಗಮಿಸುವಂತೆ ಮಿರ್ಲೆ ಶ್ರೀನಿವಾಸ್ ಗೌಡ ಮನವಿ ಮಾಡಿದರು.

andolanait

Recent Posts

ತಮಿಳುನಾಡು ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ

ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…

24 mins ago

ಮೈಸೂರು: ವಿನೂತನ ರೀತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್‌ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…

1 hour ago

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

2 hours ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

3 hours ago

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

3 hours ago

ಇಂದು ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಜಯಂತಿ: ಗಣ್ಯಾತಿಗಣ್ಯರಿಂದ ಶುಭಾಶಯ

ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…

4 hours ago