ಜಿಲ್ಲೆಗಳು

ಸೆ. 26ರಿಂದ 90ದಿನಗಳ ಕಾಲ ದಸರಾ ವಸ್ತು ಪ್ರದರ್ಶನ : ಮಿರ್ಲೆ ಶ್ರೀನಿವಾಸ್‌ಗೌಡ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದ ಈ ಬಾರಿಯ ವಸ್ತು ಪ್ರದರ್ಶನವು ಸೆ.26ರಿಂದ ಪ್ರಾರಂಭವಾಗಲಿದೆ ಎಂದು ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ ಅವರು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಬಾರಿ ವಿಶೇಷ ಕಾರ್ಯಕ್ರಮಗಳೊಂದಿಗೆ 90 ದಿನಗಳ ಕಾಲ ವಸ್ತುಪ್ರದರ್ಶನ ಆಯೋಜನೆಗೊಳಿಸಲಾಗಿದೆ. ವಸ್ತುಪ್ರದರ್ಶನದಲ್ಲಿ ಪುನೀತ್ ರಾಜ್ ಕುಮಾರ್ ನೆನಪಿಗಾಗಿ 7 ಸ್ಯಾಂಡ್ ಮ್ಯೂಸಿಯಂ,
ಯೋಗ 3ಡಿ ವಿಡಿಯೋ ಮ್ಯಾಪಿಂಗ್ ಸೇರಿದಂತೆ ಕಾವೇರಿ ಬಹುಮಾಧ್ಯಮ ಕಲಾ ಗ್ಯಾಲರಿ ಉದ್ಘಾಟನೆ ಮಾಡಲಾಗುವುದು ಎಂದರು.

ಪ್ರತ್ಯೇಕ ಆವರಣಗಳಲ್ಲಿ ವೆಜ್ ಅಂಡ್ ನಾನ್ ವೆಜ್  ಸ್ಟಾಲ್ ಗಳಿಗೆ ವ್ಯವಸ್ಥೆ ಮಾಡಲಾಗಿದೆ ಎಂದರು. ಇದರ ಜೊತೆಗೆ 6 ಮಂದಿ ಸ್ವಾತಂತ್ರ್ಯ ಹೋರಾಟಗಾರರ ಮರಳು ಕೃತಿಯನ್ನು ರಚಿಸಲಾಗುವುದು. ಆ 6ಮಂದಿ ಸ್ವಾತಂತ್ರ್ಯ ಹೋರಾಟಗಾರರು ಯಾರು ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದರು.

ವಸ್ತುಪ್ರದರ್ಶನದ ಅವರಣವನ್ನ ಪ್ಲಾಸ್ಟಿಕ್ ಮುಕ್ತ ವಲಯ ಎಂದು ಘೋಷಣೆ ಹಿನ್ನೆಲೆ ಪ್ಲಾಸ್ಟಿಕ್ ಬಳಸುವಂತಿಲ್ಲ,
ಪ್ಲಾಸ್ಟಿಕ್ ಬಳಕೆ ತಡೆಗಟ್ಟಲು ಪ್ರಾಧಿಕಾರದ ವತಿಯಿಂದಲೇ ಆರ್ ಓ ಪ್ಲಾಂಟ್ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತದೆ.  ಎರಡು ವರ್ಷಗಳ ಕೋವಿಡ್ ಬಳಿಕ ನಡೆಯುತ್ತಿರುವ ಅದ್ದೂರಿ ವಸ್ತು ಪ್ರದರ್ಶನ ಇದಾಗಿದೆ, ಹೀಗಾಗಿ
ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು, ನಗರದ ಜನತೆ ಆಗಮಿಸುವಂತೆ ಮಿರ್ಲೆ ಶ್ರೀನಿವಾಸ್ ಗೌಡ ಮನವಿ ಮಾಡಿದರು.

andolanait

Recent Posts

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ವಜಾ

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…

3 mins ago

HPCLನಲ್ಲಿ 608 ಅಪ್ರೆಂಟಿಸ್ ಟ್ರೈನಿ ನೇಮಕಾತಿ

ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…

8 mins ago

ಬಾಯಿ ಮುಚ್ಚಿಕೊಂಡಿದ್ದರೆ ಒಳ್ಳೆದು ; ಮೂವರು ಶಾಸಕರಿಗೆ ಡಿಸಿಎಂ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…

21 mins ago

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

2 hours ago

ಸಿಎಸ್‌ ಹೆಸರು ಪ್ರಸ್ತಾಪಿಸಿದ್ದಕ್ಕೆ ಕ್ಷಮೆ : ಸ್ನೇಹಮಯಿ ಕೃಷ್ಣ ಸ್ಪಷ್ಟನೆ

ಮೈಸೂರು : ಮುಡಾ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ನಾನು ಕ್ಷಮೆ ಕೋರಿಲ್ಲ.…

3 hours ago

ಶಿಕ್ಷಕರ ನೇಮಕಾತಿ ಶೀಘ್ರ : ಸಿಎಂ ಭರವಸೆ

ಬೆಂಗಳೂರು : ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದ ಸವಾಲುಗಳ ಬಗ್ಗೆ…

3 hours ago