ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದ ಈ ಬಾರಿಯ ವಸ್ತು ಪ್ರದರ್ಶನವು ಸೆ.26ರಿಂದ ಪ್ರಾರಂಭವಾಗಲಿದೆ ಎಂದು ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ ಅವರು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಬಾರಿ ವಿಶೇಷ ಕಾರ್ಯಕ್ರಮಗಳೊಂದಿಗೆ 90 ದಿನಗಳ ಕಾಲ ವಸ್ತುಪ್ರದರ್ಶನ ಆಯೋಜನೆಗೊಳಿಸಲಾಗಿದೆ. ವಸ್ತುಪ್ರದರ್ಶನದಲ್ಲಿ ಪುನೀತ್ ರಾಜ್ ಕುಮಾರ್ ನೆನಪಿಗಾಗಿ 7 ಸ್ಯಾಂಡ್ ಮ್ಯೂಸಿಯಂ,
ಯೋಗ 3ಡಿ ವಿಡಿಯೋ ಮ್ಯಾಪಿಂಗ್ ಸೇರಿದಂತೆ ಕಾವೇರಿ ಬಹುಮಾಧ್ಯಮ ಕಲಾ ಗ್ಯಾಲರಿ ಉದ್ಘಾಟನೆ ಮಾಡಲಾಗುವುದು ಎಂದರು.
ಪ್ರತ್ಯೇಕ ಆವರಣಗಳಲ್ಲಿ ವೆಜ್ ಅಂಡ್ ನಾನ್ ವೆಜ್ ಸ್ಟಾಲ್ ಗಳಿಗೆ ವ್ಯವಸ್ಥೆ ಮಾಡಲಾಗಿದೆ ಎಂದರು. ಇದರ ಜೊತೆಗೆ 6 ಮಂದಿ ಸ್ವಾತಂತ್ರ್ಯ ಹೋರಾಟಗಾರರ ಮರಳು ಕೃತಿಯನ್ನು ರಚಿಸಲಾಗುವುದು. ಆ 6ಮಂದಿ ಸ್ವಾತಂತ್ರ್ಯ ಹೋರಾಟಗಾರರು ಯಾರು ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದರು.
ವಸ್ತುಪ್ರದರ್ಶನದ ಅವರಣವನ್ನ ಪ್ಲಾಸ್ಟಿಕ್ ಮುಕ್ತ ವಲಯ ಎಂದು ಘೋಷಣೆ ಹಿನ್ನೆಲೆ ಪ್ಲಾಸ್ಟಿಕ್ ಬಳಸುವಂತಿಲ್ಲ,
ಪ್ಲಾಸ್ಟಿಕ್ ಬಳಕೆ ತಡೆಗಟ್ಟಲು ಪ್ರಾಧಿಕಾರದ ವತಿಯಿಂದಲೇ ಆರ್ ಓ ಪ್ಲಾಂಟ್ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತದೆ. ಎರಡು ವರ್ಷಗಳ ಕೋವಿಡ್ ಬಳಿಕ ನಡೆಯುತ್ತಿರುವ ಅದ್ದೂರಿ ವಸ್ತು ಪ್ರದರ್ಶನ ಇದಾಗಿದೆ, ಹೀಗಾಗಿ
ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು, ನಗರದ ಜನತೆ ಆಗಮಿಸುವಂತೆ ಮಿರ್ಲೆ ಶ್ರೀನಿವಾಸ್ ಗೌಡ ಮನವಿ ಮಾಡಿದರು.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…