ನಂಜನಗೂಡು: ಮಗ ಅಪಘಾತದಲ್ಲಿ ಸಾವಿಗೀಡಾಗಿ ಎರಡೂವರೆ ವರ್ಷ ಕಳೆದರೂ ಇದಕ್ಕೆ ಕಾರಣನಾದ ಆರೋಪಿಯನ್ನು ಬಂಧಿಸಿಲ್ಲ ಎಂದು ಆರೋಪಿಸಿದ ದಂಪತಿಗಳು ಈಗ ಪೊಲೀಸ್ ಠಾಣೆಯ ಬಾಗಿಲಲ್ಲಿ ಪ್ರತಿಭಟನೆಗೆ ಸಜ್ಜಾಗಿದ್ದಾರೆ.
ತಮ್ಮ ಪುತ್ರ ಎನ್.ಎಂ.ಪ್ರವೀಣ್ ರಸ್ತೆ ಅಪಘಾತದಲ್ಲಿ 2020ರ ಮೇ 18ರಂದು ಮೃತಪಟ್ಟಿದ್ದು, ಇದಕ್ಕೆ ಕಾರಣರಾದವರನ್ನು ಇನ್ನೂ ಬಂಧಿಸಿ ನಮಗೆ ನ್ಯಾಯ ನೀಡಿಲ್ಲ ಎಂದು ಆರೋಪಿಸಿ ಫೆ.1ರಿಂದ ನಂಜನಗೂಡು ಪೊಲೀಸ್ ಠಾಣೆ ಮುಂಭಾಗದಲ್ಲಿ ಆಮರಣಾಂತ ಉಪವಾಸ ಪ್ರತಿಭಟನೆ ಕೈಗೊಳ್ಳುತ್ತೇವೆ ಎಂದು ನಂಜನಗೂಡು ಪುರಸಭೆಯ ಮಾಜಿ ಸದಸ್ಯರುಗಳಾದ ಮಹೇಶ ಹಾಗೂ ಸುಧಾ ಮಹೇಶ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅವರ ಪ್ರಕಾರ ಅಂದು ಪಾನಮತ್ತನಾಗಿದ್ದ ವ್ಯಕ್ತಿ ವೇಗವಾಗಿ ಕಾರು ಚಲಾಯಿಸಿಕೊಂಡು ಹಿಂಬದಿಯಿಂದ ನಮ್ಮ ಪುತ್ರನ ಬೈಕ್ಗೆ ಗುದ್ದಿ ಕಾರನ್ನು ಅಲ್ಲೇ ನಿಲ್ಲಿಸಿ ಪರಾರಿಯಾಗಿದ್ದಾನೆ.
ಗಾಂಜಾ ಹಾಗೂ ಮದ್ಯದ ಬಾಟಲಿಗಳಿದ್ದ ಕಾರನ್ನು ಅಂದೇ ಪೊಲೀಸರು ವಶಪಡಿಸಿಕೊಂಡಿದ್ದು, ಆತನ ವಿಳಾಸ ನೀಡಿದ್ದರೂ ಈವರೆಗೂ ರಾಜಸ್ಥಾನ ಮೂಲದ ಆತನನ್ನು ಬಂಧಿಸದೇ ಇರಲು ಕಾರಣಗಳೇನು ಎಂದಿರುವ ಇವರು, ತಕ್ಷಣ ಆ ಆರೋಪಿಯನ್ನು ಬಂಧಿಸಿ ಮಗನ ಸಾವಿಗೆ ನ್ಯಾಯ ನೀಡಿ. ಇಲ್ಲವಾದಲ್ಲಿ ತಾವಿಬ್ಬರೂ ಪೊಲೀಸ್ ಠಾಣೆ ಮುಂಭಾಗ ಬುಧವಾರದಿಂದ ಆಮರಣಾಂತ ಉಪವಾಸ ಕೈಗೊಳ್ಳುವುದು ನಿಶ್ಚಿತ ಎಂದು ತಿಳಿಸಿದ್ದಾರೆ.
ಇಸ್ಲಾಮಾಬಾದ್: ಇರಾನ್, ಅಮೇರಿಕಾ-ಇಸ್ರೇಲ್ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.23ರಂದು…
ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…
ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…
ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ. ನಾಗರಹೊಳೆ…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ…
ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…