ಜಿಲ್ಲೆಗಳು

ನ್ಯಾಯಕ್ಕೆ ಆಗ್ರಹಿಸಿ ಪೊಲೀಸ್ ಠಾಣೆಯ ಬಾಗಿಲಲ್ಲಿ ಪ್ರತಿಭಟನೆಗೆ ಸಜ್ಜಾದ ದಂಪತಿ

ನಂಜನಗೂಡು: ಮಗ ಅಪಘಾತದಲ್ಲಿ ಸಾವಿಗೀಡಾಗಿ ಎರಡೂವರೆ ವರ್ಷ ಕಳೆದರೂ ಇದಕ್ಕೆ ಕಾರಣನಾದ ಆರೋಪಿಯನ್ನು ಬಂಧಿಸಿಲ್ಲ ಎಂದು ಆರೋಪಿಸಿದ ದಂಪತಿಗಳು ಈಗ ಪೊಲೀಸ್ ಠಾಣೆಯ ಬಾಗಿಲಲ್ಲಿ ಪ್ರತಿಭಟನೆಗೆ ಸಜ್ಜಾಗಿದ್ದಾರೆ.
ತಮ್ಮ ಪುತ್ರ ಎನ್.ಎಂ.ಪ್ರವೀಣ್ ರಸ್ತೆ ಅಪಘಾತದಲ್ಲಿ 2020ರ ಮೇ 18ರಂದು ಮೃತಪಟ್ಟಿದ್ದು, ಇದಕ್ಕೆ ಕಾರಣರಾದವರನ್ನು ಇನ್ನೂ ಬಂಧಿಸಿ ನಮಗೆ ನ್ಯಾಯ ನೀಡಿಲ್ಲ ಎಂದು ಆರೋಪಿಸಿ ಫೆ.1ರಿಂದ ನಂಜನಗೂಡು ಪೊಲೀಸ್ ಠಾಣೆ ಮುಂಭಾಗದಲ್ಲಿ ಆಮರಣಾಂತ ಉಪವಾಸ ಪ್ರತಿಭಟನೆ ಕೈಗೊಳ್ಳುತ್ತೇವೆ ಎಂದು ನಂಜನಗೂಡು ಪುರಸಭೆಯ ಮಾಜಿ ಸದಸ್ಯರುಗಳಾದ ಮಹೇಶ ಹಾಗೂ ಸುಧಾ ಮಹೇಶ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅವರ ಪ್ರಕಾರ ಅಂದು ಪಾನಮತ್ತನಾಗಿದ್ದ ವ್ಯಕ್ತಿ ವೇಗವಾಗಿ ಕಾರು ಚಲಾಯಿಸಿಕೊಂಡು ಹಿಂಬದಿಯಿಂದ ನಮ್ಮ ಪುತ್ರನ ಬೈಕ್‌ಗೆ ಗುದ್ದಿ ಕಾರನ್ನು ಅಲ್ಲೇ ನಿಲ್ಲಿಸಿ ಪರಾರಿಯಾಗಿದ್ದಾನೆ.
ಗಾಂಜಾ ಹಾಗೂ ಮದ್ಯದ ಬಾಟಲಿಗಳಿದ್ದ ಕಾರನ್ನು ಅಂದೇ ಪೊಲೀಸರು ವಶಪಡಿಸಿಕೊಂಡಿದ್ದು, ಆತನ ವಿಳಾಸ ನೀಡಿದ್ದರೂ ಈವರೆಗೂ ರಾಜಸ್ಥಾನ ಮೂಲದ ಆತನನ್ನು ಬಂಧಿಸದೇ ಇರಲು ಕಾರಣಗಳೇನು ಎಂದಿರುವ ಇವರು, ತಕ್ಷಣ ಆ ಆರೋಪಿಯನ್ನು ಬಂಧಿಸಿ ಮಗನ ಸಾವಿಗೆ ನ್ಯಾಯ ನೀಡಿ. ಇಲ್ಲವಾದಲ್ಲಿ ತಾವಿಬ್ಬರೂ ಪೊಲೀಸ್ ಠಾಣೆ ಮುಂಭಾಗ ಬುಧವಾರದಿಂದ ಆಮರಣಾಂತ ಉಪವಾಸ ಕೈಗೊಳ್ಳುವುದು ನಿಶ್ಚಿತ ಎಂದು ತಿಳಿಸಿದ್ದಾರೆ.

andolanait

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

4 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

5 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

5 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

6 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

6 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

7 hours ago