ನಂಜನಗೂಡು: ಮಗ ಅಪಘಾತದಲ್ಲಿ ಸಾವಿಗೀಡಾಗಿ ಎರಡೂವರೆ ವರ್ಷ ಕಳೆದರೂ ಇದಕ್ಕೆ ಕಾರಣನಾದ ಆರೋಪಿಯನ್ನು ಬಂಧಿಸಿಲ್ಲ ಎಂದು ಆರೋಪಿಸಿದ ದಂಪತಿಗಳು ಈಗ ಪೊಲೀಸ್ ಠಾಣೆಯ ಬಾಗಿಲಲ್ಲಿ ಪ್ರತಿಭಟನೆಗೆ ಸಜ್ಜಾಗಿದ್ದಾರೆ.
ತಮ್ಮ ಪುತ್ರ ಎನ್.ಎಂ.ಪ್ರವೀಣ್ ರಸ್ತೆ ಅಪಘಾತದಲ್ಲಿ 2020ರ ಮೇ 18ರಂದು ಮೃತಪಟ್ಟಿದ್ದು, ಇದಕ್ಕೆ ಕಾರಣರಾದವರನ್ನು ಇನ್ನೂ ಬಂಧಿಸಿ ನಮಗೆ ನ್ಯಾಯ ನೀಡಿಲ್ಲ ಎಂದು ಆರೋಪಿಸಿ ಫೆ.1ರಿಂದ ನಂಜನಗೂಡು ಪೊಲೀಸ್ ಠಾಣೆ ಮುಂಭಾಗದಲ್ಲಿ ಆಮರಣಾಂತ ಉಪವಾಸ ಪ್ರತಿಭಟನೆ ಕೈಗೊಳ್ಳುತ್ತೇವೆ ಎಂದು ನಂಜನಗೂಡು ಪುರಸಭೆಯ ಮಾಜಿ ಸದಸ್ಯರುಗಳಾದ ಮಹೇಶ ಹಾಗೂ ಸುಧಾ ಮಹೇಶ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅವರ ಪ್ರಕಾರ ಅಂದು ಪಾನಮತ್ತನಾಗಿದ್ದ ವ್ಯಕ್ತಿ ವೇಗವಾಗಿ ಕಾರು ಚಲಾಯಿಸಿಕೊಂಡು ಹಿಂಬದಿಯಿಂದ ನಮ್ಮ ಪುತ್ರನ ಬೈಕ್ಗೆ ಗುದ್ದಿ ಕಾರನ್ನು ಅಲ್ಲೇ ನಿಲ್ಲಿಸಿ ಪರಾರಿಯಾಗಿದ್ದಾನೆ.
ಗಾಂಜಾ ಹಾಗೂ ಮದ್ಯದ ಬಾಟಲಿಗಳಿದ್ದ ಕಾರನ್ನು ಅಂದೇ ಪೊಲೀಸರು ವಶಪಡಿಸಿಕೊಂಡಿದ್ದು, ಆತನ ವಿಳಾಸ ನೀಡಿದ್ದರೂ ಈವರೆಗೂ ರಾಜಸ್ಥಾನ ಮೂಲದ ಆತನನ್ನು ಬಂಧಿಸದೇ ಇರಲು ಕಾರಣಗಳೇನು ಎಂದಿರುವ ಇವರು, ತಕ್ಷಣ ಆ ಆರೋಪಿಯನ್ನು ಬಂಧಿಸಿ ಮಗನ ಸಾವಿಗೆ ನ್ಯಾಯ ನೀಡಿ. ಇಲ್ಲವಾದಲ್ಲಿ ತಾವಿಬ್ಬರೂ ಪೊಲೀಸ್ ಠಾಣೆ ಮುಂಭಾಗ ಬುಧವಾರದಿಂದ ಆಮರಣಾಂತ ಉಪವಾಸ ಕೈಗೊಳ್ಳುವುದು ನಿಶ್ಚಿತ ಎಂದು ತಿಳಿಸಿದ್ದಾರೆ.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…