ಜಿಲ್ಲೆಗಳು

ನ್ಯಾಯಕ್ಕೆ ಆಗ್ರಹಿಸಿ ಪೊಲೀಸ್ ಠಾಣೆಯ ಬಾಗಿಲಲ್ಲಿ ಪ್ರತಿಭಟನೆಗೆ ಸಜ್ಜಾದ ದಂಪತಿ

ನಂಜನಗೂಡು: ಮಗ ಅಪಘಾತದಲ್ಲಿ ಸಾವಿಗೀಡಾಗಿ ಎರಡೂವರೆ ವರ್ಷ ಕಳೆದರೂ ಇದಕ್ಕೆ ಕಾರಣನಾದ ಆರೋಪಿಯನ್ನು ಬಂಧಿಸಿಲ್ಲ ಎಂದು ಆರೋಪಿಸಿದ ದಂಪತಿಗಳು ಈಗ ಪೊಲೀಸ್ ಠಾಣೆಯ ಬಾಗಿಲಲ್ಲಿ ಪ್ರತಿಭಟನೆಗೆ ಸಜ್ಜಾಗಿದ್ದಾರೆ.
ತಮ್ಮ ಪುತ್ರ ಎನ್.ಎಂ.ಪ್ರವೀಣ್ ರಸ್ತೆ ಅಪಘಾತದಲ್ಲಿ 2020ರ ಮೇ 18ರಂದು ಮೃತಪಟ್ಟಿದ್ದು, ಇದಕ್ಕೆ ಕಾರಣರಾದವರನ್ನು ಇನ್ನೂ ಬಂಧಿಸಿ ನಮಗೆ ನ್ಯಾಯ ನೀಡಿಲ್ಲ ಎಂದು ಆರೋಪಿಸಿ ಫೆ.1ರಿಂದ ನಂಜನಗೂಡು ಪೊಲೀಸ್ ಠಾಣೆ ಮುಂಭಾಗದಲ್ಲಿ ಆಮರಣಾಂತ ಉಪವಾಸ ಪ್ರತಿಭಟನೆ ಕೈಗೊಳ್ಳುತ್ತೇವೆ ಎಂದು ನಂಜನಗೂಡು ಪುರಸಭೆಯ ಮಾಜಿ ಸದಸ್ಯರುಗಳಾದ ಮಹೇಶ ಹಾಗೂ ಸುಧಾ ಮಹೇಶ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅವರ ಪ್ರಕಾರ ಅಂದು ಪಾನಮತ್ತನಾಗಿದ್ದ ವ್ಯಕ್ತಿ ವೇಗವಾಗಿ ಕಾರು ಚಲಾಯಿಸಿಕೊಂಡು ಹಿಂಬದಿಯಿಂದ ನಮ್ಮ ಪುತ್ರನ ಬೈಕ್‌ಗೆ ಗುದ್ದಿ ಕಾರನ್ನು ಅಲ್ಲೇ ನಿಲ್ಲಿಸಿ ಪರಾರಿಯಾಗಿದ್ದಾನೆ.
ಗಾಂಜಾ ಹಾಗೂ ಮದ್ಯದ ಬಾಟಲಿಗಳಿದ್ದ ಕಾರನ್ನು ಅಂದೇ ಪೊಲೀಸರು ವಶಪಡಿಸಿಕೊಂಡಿದ್ದು, ಆತನ ವಿಳಾಸ ನೀಡಿದ್ದರೂ ಈವರೆಗೂ ರಾಜಸ್ಥಾನ ಮೂಲದ ಆತನನ್ನು ಬಂಧಿಸದೇ ಇರಲು ಕಾರಣಗಳೇನು ಎಂದಿರುವ ಇವರು, ತಕ್ಷಣ ಆ ಆರೋಪಿಯನ್ನು ಬಂಧಿಸಿ ಮಗನ ಸಾವಿಗೆ ನ್ಯಾಯ ನೀಡಿ. ಇಲ್ಲವಾದಲ್ಲಿ ತಾವಿಬ್ಬರೂ ಪೊಲೀಸ್ ಠಾಣೆ ಮುಂಭಾಗ ಬುಧವಾರದಿಂದ ಆಮರಣಾಂತ ಉಪವಾಸ ಕೈಗೊಳ್ಳುವುದು ನಿಶ್ಚಿತ ಎಂದು ತಿಳಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಎಸ್‌ಐಆರ್: ಶಿಕ್ಷಣ ಸಂಸ್ಥೆಗಳಿಗೆ ಸೂಕ್ತ ಮಾರ್ಗದರ್ಶನ ಅಗತ್ಯ

ಎಸ್‌ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್‌ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ…

1 hour ago

ಓದುಗರ ಪತ್ರ: ದಸರಾದಲ್ಲಿ ಕಂಬಳ ಬೇಕೇ?

ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ನಾಡಹಬ್ಬ ದಸರಾ ೧೬೧೦ ರಲ್ಲಿ ಪ್ರಾರಂಭವಾಗಿ, ಇಲ್ಲಿನ ಸಂಸ್ಕೃತಿಗಳನ್ನು ಅಳವಡಿಸಿಕೊಂಡು ಆಚರಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ.ಇತ್ತೀಚಿನ…

1 hour ago

ಉಪನಗರ ಯೋಜನೆ ಖಂಡಿತ ಅಭಿವೃದ್ಧಿಯಲ್ಲ

ಆರ್.ಪಿ.ವೆಂಕಟೇಶಮೂರ್ತಿ ಬೆಂಗಳೂರು ಮತ್ತು ಸುತ್ತಮುತ್ತಲಿನ ದುಃಸ್ಥಿತಿಗೆ ಎಲ್ಲ ರಾಜಕೀಯ ಪಕ್ಷಗಳ ಕೊಡುಗೆ ಇದೆ, ರಾಜಕೀಯ ನಾಯಕರು ದಯಮಾಡಿ ಆತ್ಮಾವಲೋಕನ ಮಾಡಿಕೊಳ್ಳಬೇಕು.…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಗೆದಷ್ಟು ಬಹಿರಂಗ; ರಾಮಮಂದಿರ ಕಾಣಿಕೆ ಲೂಟಿ

ಹಲವು ದಶಕಗಳ ಹೋರಾಟದಿಂದ ಎರಡೂವರೆ ವರ್ಷಗಳ ಹಿಂದೆ ನನಸಾದ ಹಿಂದುಗಳ ಧಾರ್ಮಿಕ ಶ್ರದ್ಧಾ ಕೇಂದ್ರವಾದ ಶ್ರೀರಾಮ ಮಂದಿರದಗಿರುವ ಭಕ್ತರ ಕಾಣಿಕೆಯ…

2 hours ago

ಎಸ್‌ಐಆರ್: ಮಿಶ್ರ ಪ್ರತಿಕ್ರಿಯೆ

ಕೆ.ಎಸ್.ಚಂದ್ರಶೇಖರ ಮೂರ್ತಿ ‘ಸಂವಿಧಾನಬದ್ಧ ಪ್ರಕ್ರಿಯೆ; ಕಾರ್ಯವಿಧಾನದ ಬಗ್ಗೆ ಅಸಮಾಧಾನ’ ಸಾಹಿತಿಗಳು, ಗಣ್ಯರು, ಮುಖಂಡರ ಅಭಿಪ್ರಾಯ ಮೈಸೂರು: ಭಾರತೀಯ ಚುನಾವಣಾ ಆಯೋಗದ…

2 hours ago