ಜಿಲ್ಲೆಗಳು

ಮೈಸೂರು: ಸಾಮಾಜಿಕ‌ ಜಾಲತಾಣದಲ್ಲಿ ವಿಡಿಯೊ ಮಾಡಿ ಆತ್ಮಹತ್ಯೆಗೆ ಶರಣಾದ ದಂಪತಿ

ಸ್ನೇಹಿತನಿಗೆ ಸಾಲ ಕೊಡಿಸಿ ಆತ ವಾಪಸ್ ಕೊಡದೇ ಸಾಲಗಾರರ ಕಿರುಕುಳ ಹೆಚ್ಚಾದ ಕಾರಣ ಮೈಸೂರಿನ ಯರಗನಹಳ್ಳಿ ನಿವಾಸಿಗಳಾದ ದಂಪತಿ ವಿಶ್ವ ( 34 ) ಹಾಗೂ ಸುಷ್ಮ ( 28 ) ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 

ವಿಶ್ವ ತರಕಾರಿ ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿದ್ದು ಶಿವು ಎಂಬ ಸ್ನೇಹಿತನಿಗೆ ಸಾಲಗಾರರಿಂದ 5 ಲಕ್ಷ ರೂಪಾಯಿ ಸಾಲ ಕೊಡಿಸಿದ್ದರು. ಆದರೆ ಶಿವು ಸಾಲದ ಹಣವನ್ನು ವಾಪಸ್ ಕೊಡದೇ ಹಣ ಹಿಂತಿರುಗಿಸಲು ಕೇಳಿದಾಗ ಕೆಟ್ಟ ಮಾತಿಗಳಿಂದ ನಿಂದಿಸಿ, ರೌಡಿ ಕರೆದುಕೊಂಡು ಬರುತ್ತೇನೆ ಎಂದು ಬೆದರಿಕೆ ಹಾಕಿದ್ದ ಎಂದು ಸ್ವತಃ ವಿಶ್ವ ಸಾಮಾಜಿಕ ಜಾಲತಾಣಕ್ಕೆ ಹರಿಬಿಟ್ಟಿರುವ ವಿಡಿಯೊದಲ್ಲಿ ಹೇಳಿಕೊಂಡಿದ್ದಾರೆ. ಅತ್ತ ಸಾಲ ಕೊಟ್ಟ ಸಾಲಗಾರರು ತನ್ನ ಮನೆ ಮುಂದೆ ಬಂದು ಹಣ ವಾಪಸ್ ಕೊಡುವಂತೆ ಕೇಳುತ್ತಿದ್ದಾರೆ, ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ವಿಶ್ವ ವಿಡಿಯೊದಲ್ಲಿ ತಿಳಿಸಿದ್ದಾರೆ‌.

ಅಲ್ಲದೇ ಚೋರನಹಳ್ಳಿಯ ರಾಜಣ್ಣ ಎಂಬಾತನಿಗೂ ಸಹ ತಾನು ಚಿನ್ನಾಭರಣವನ್ನು ನೀಡಿದ್ದೆ‌. ಅದನ್ನು ವಾಪಸ್ ಕೇಳಿದಾಗ ಹಿಂತಿರುಗಿಸದೇ ಸಹಾಯ ಮಾಡುತ್ತಿದ್ದಾನೆ ಎಂದು ಮತ್ತೊಂದು ಆರೋಪವನ್ನು ವಿಡಿಯೊದಲ್ಲಿ ಮಾಡಿರುವ ವಿಶ್ವ ಕೊನೆಯಲ್ಲಿ ಆ ಚಿನ್ನವನ್ನು ತನ್ನ ಮನೆಯವರಿಗೆ ಸಿಗುವ ಹಾಗೆ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ. 

 

ಆತ್ಮಹತ್ಯೆ ಮಾಡಿಕೊಳ್ಳುವುದು ಎಲ್ಲಾ ಸಮಸ್ಯೆಗಳಿಗೂ ಪರಿಹಾರವಲ್ಲ. ಆತ್ಮಹತ್ಯೆ ಚಿಂತನೆ ತಲೆಗೆ ಬಂದಾಗ ಆಪ್ತರೊಡನೆ ಮಾತನಾಡಿ ಪರಿಹಾರ ಕಂಡುಕೊಳ್ಳಬೇಕು ಅಥವಾ ಈ ಸಹಾಯವಾಣಿಗೆ ಕರೆ ಮಾಡಬೇಕು. 

Suicide prevention Helpline Number: 9152987821

andolana

Recent Posts

ಕೊಡಗು‌ ಸಿದ್ದಾಪುರ ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

2 hours ago

ಚಿರತೆ ಮರಿ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…

2 hours ago

ಹುಣಸೂರಿನಲ್ಲಿ ಹಾಡಹಗಲೇ ಚಿನ್ನಭರಣ ದರೋಡೆ : ಐಜಿಪಿ ಬೋರಲಿಂಗಯ್ಯ ಹೇಳಿದ್ದೇನು?

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌…

3 hours ago

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…

4 hours ago

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…

4 hours ago

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

4 hours ago