ಸ್ನೇಹಿತನಿಗೆ ಸಾಲ ಕೊಡಿಸಿ ಆತ ವಾಪಸ್ ಕೊಡದೇ ಸಾಲಗಾರರ ಕಿರುಕುಳ ಹೆಚ್ಚಾದ ಕಾರಣ ಮೈಸೂರಿನ ಯರಗನಹಳ್ಳಿ ನಿವಾಸಿಗಳಾದ ದಂಪತಿ ವಿಶ್ವ ( 34 ) ಹಾಗೂ ಸುಷ್ಮ ( 28 ) ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ವಿಶ್ವ ತರಕಾರಿ ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿದ್ದು ಶಿವು ಎಂಬ ಸ್ನೇಹಿತನಿಗೆ ಸಾಲಗಾರರಿಂದ 5 ಲಕ್ಷ ರೂಪಾಯಿ ಸಾಲ ಕೊಡಿಸಿದ್ದರು. ಆದರೆ ಶಿವು ಸಾಲದ ಹಣವನ್ನು ವಾಪಸ್ ಕೊಡದೇ ಹಣ ಹಿಂತಿರುಗಿಸಲು ಕೇಳಿದಾಗ ಕೆಟ್ಟ ಮಾತಿಗಳಿಂದ ನಿಂದಿಸಿ, ರೌಡಿ ಕರೆದುಕೊಂಡು ಬರುತ್ತೇನೆ ಎಂದು ಬೆದರಿಕೆ ಹಾಕಿದ್ದ ಎಂದು ಸ್ವತಃ ವಿಶ್ವ ಸಾಮಾಜಿಕ ಜಾಲತಾಣಕ್ಕೆ ಹರಿಬಿಟ್ಟಿರುವ ವಿಡಿಯೊದಲ್ಲಿ ಹೇಳಿಕೊಂಡಿದ್ದಾರೆ. ಅತ್ತ ಸಾಲ ಕೊಟ್ಟ ಸಾಲಗಾರರು ತನ್ನ ಮನೆ ಮುಂದೆ ಬಂದು ಹಣ ವಾಪಸ್ ಕೊಡುವಂತೆ ಕೇಳುತ್ತಿದ್ದಾರೆ, ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ವಿಶ್ವ ವಿಡಿಯೊದಲ್ಲಿ ತಿಳಿಸಿದ್ದಾರೆ.
ಅಲ್ಲದೇ ಚೋರನಹಳ್ಳಿಯ ರಾಜಣ್ಣ ಎಂಬಾತನಿಗೂ ಸಹ ತಾನು ಚಿನ್ನಾಭರಣವನ್ನು ನೀಡಿದ್ದೆ. ಅದನ್ನು ವಾಪಸ್ ಕೇಳಿದಾಗ ಹಿಂತಿರುಗಿಸದೇ ಸಹಾಯ ಮಾಡುತ್ತಿದ್ದಾನೆ ಎಂದು ಮತ್ತೊಂದು ಆರೋಪವನ್ನು ವಿಡಿಯೊದಲ್ಲಿ ಮಾಡಿರುವ ವಿಶ್ವ ಕೊನೆಯಲ್ಲಿ ಆ ಚಿನ್ನವನ್ನು ತನ್ನ ಮನೆಯವರಿಗೆ ಸಿಗುವ ಹಾಗೆ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಳ್ಳುವುದು ಎಲ್ಲಾ ಸಮಸ್ಯೆಗಳಿಗೂ ಪರಿಹಾರವಲ್ಲ. ಆತ್ಮಹತ್ಯೆ ಚಿಂತನೆ ತಲೆಗೆ ಬಂದಾಗ ಆಪ್ತರೊಡನೆ ಮಾತನಾಡಿ ಪರಿಹಾರ ಕಂಡುಕೊಳ್ಳಬೇಕು ಅಥವಾ ಈ ಸಹಾಯವಾಣಿಗೆ ಕರೆ ಮಾಡಬೇಕು.
Suicide prevention Helpline Number: 9152987821
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…