ಜಿಲ್ಲೆಗಳು

ಮುಳ್ಳುಹಂದಿಯ ರೋಷಾವೇಶಕ್ಕೆ ಹೆದರಿ ಓಡಿ ಹೋದ ಚಿರತೆ

ಕೆಆರ್‌ಎಸ್‌ ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ, ಮುಳ್ಳುಹಂದಿ ಜತೆ ಮುಖಾಮುಖಿ

ಮೈಸೂರು: ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ಕೃಷ್ಣರಾಜಸಾಗರದ ವಿಶ್ವವಿಖ್ಯಾತ ಬೃಂದಾವನವನ್ನು ಕಳೆದ 15 ದಿನಗಳಿಂದ ಮುಚ್ಚಲಾಗಿದ್ದು ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಚಿರತೆ ಸೆರೆ ಹಿಡಿಯುವ ಅರಣ್ಯ ಇಲಾಖೆ ಕಾರ್ಯಾಚರಣೆ ಇದುವರೆಗೆ ಫಲ ನೀಡಿಲ್ಲ. ಆದರೆ ಈ ಚಿರತೆಯ ಚಲನವಲನ ಮತ್ತೆ ಸಿಸಿಟಿವಿಯಲ್ಲಿ ದಾಖಲಾಗಿದ್ದು ಮುಳ್ಳುಹಂದಿಯೊಂದನ್ನು ಬೇಟೆಯಾಡಲು ಹೋದ ಚಿರತೆ ಹೆದರಿ ವಾಪಸ್ಸಾಗುವ ದೃಶ್ಯ ಗಮನ ಸೆಳೆದಿದೆ.

ಪ್ರವಾಸಿಗರಿಗೆ ಬೇಸರ ತರಿಸಿರುವ ಚಿರತೆ ಮುಳ್ಳು ಹಂದಿಯ ರೋಷಾವೇಷಕ್ಕೆ ಹೆದರಿ ಓಡಿ ಹೋಗಿದೆ. ಮುಳ್ಳುಹಂದಿಯು ಚಿರತೆಯ ಹತ್ತಿರಕ್ಕೆ ಸಾಗಿ ಬಾಣದಂತಹ ತನ್ನ ಮುಳ್ಳುಗಳನ್ನು ಪ್ರಯೋಗಿಸಲು ಮುಂದಾಗಿದೆ.

ಇದರಿಂದ ತಪ್ಪಿಸಿಕೊಳ್ಳಲು ದೂರ ಸರಿಯುತ್ತಿರುವ ಚಿರತೆ ಬೇಟೆಯನ್ನು ಬಿಟ್ಟು ತೆರಳುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಚಿರತೆಯನ್ನು ಸೆರೆ ಹಿಡಿಯುವ ಉದ್ದೇಶದಿಂದ ಬೃಂದಾವನದ ಸುತ್ತಲೂ ಈಗ ಹೆಚ್ಚುವರಿಯಾಗಿ ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಅಲ್ಲಲ್ಲಿ ಬೋನುಗಳನ್ನುಇರಿಸಲಾಗಿದೆ. ಆದರೆ ಬೋನಿಗೆ ಬೀಳದ ಚಿರತೆ ಸಿಸಿಟಿವಿಯಲ್ಲಷ್ಟೇ ಕಾಣಿಸಿಕೊಳ್ಳುತ್ತಿದೆ.

ನವೆಂಬರ್‌ ಆರರಂದು ಚಿರತೆ ಕಾಣಿಸಿಕೊಂಡ ಬಳಿಕ ಬೃಂದಾವನವನ್ನು ಪ್ರವಾಸಿಗರಿಗೆ ಮುಚ್ಚಲಾಗಿದೆ. ಆಗಾಗ ಕಾಣಿಸಿಕೊಳ್ಳುವ ಚಿರತೆಯನ್ನು ಸೆರೆ ಹಿಡಿಯದ ಹೊರತು ಪ್ರವಾಸಿಗರ ಭೇಟಿಗೆ ಅವಕಾಶ ನೀಡುವುದು ಅಪಾಯಕಾರಿ ಎಂಬ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಚಿರತೆ ಬಲೆಗೆ ಬೀಳುವ ತನಕ ಬೃಂದಾವನವನ್ನು ಮುಚ್ಚಲು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ನಿರ್ಧರಿಸಿದ್ದಾರೆ.

ಅಕ್ಟೋಬರ್‌ 22ರಂದು ಚಿರತೆ ಮೊದಲ ಬಾರಿ ಬೃಂದಾವನದ ಸಿಸಿಟಿವಿಯಲ್ಲಿ ಪ್ರತ್ಯಕ್ಷವಾಗಿತ್ತು. ಒಂದೆರಡು ದಿನ ಉದ್ಯಾನವನವನ್ನು ಬಂದ್‌ ಮಾಡಿ ಅರಣ್ಯಇಲಾಖೆ ಅಧಿಕಾರಿಗಳ ಸಲಹೆ ಮೇರೆಗೆ ಪ್ರವಾಸಿಗರ ಪ್ರವೇಶಕ್ಕೆ ಮತ್ತೆ ಅವಕಾಶ ಕಲ್ಪಿಸಲಾಗಿತ್ತು. ಬಳಿಕ ಅಕ್ಟೋಬರ್‌ 28ರಂದು ಚಿರತೆ ಮತ್ತೆ ಕಾಣಸಿಕೊಂಡಿತ್ತು. ನವೆಂಬರ್‌ ಆರರಂದು ಕಾಣಿಸಿಕೊಂಡ ಚಿರತೆ ಈಗ ಮತ್ತೆ ಸಿಸಿಟಿವಿಯಲ್ಲಿ ತನ್ನ ಇರುವನ್ನು ದಾಖಲಿಸಿದೆ.

ಬೃಂದಾವನದ ಬಂದ್‌ ಆಗಿರುವ ಮಾಹಿತಿ ತಿಳಿಯದೆ ಬರುತ್ತಿರುವ ಪ್ರವಾಸಿಗರು ನಿರಾಶರಾಗಿ ಹಿಂತಿರುಗುತ್ತಿದ್ದಾರೆ. ಕರ್ನಾಟಕ ಕೈಗಾರಿಕಾ ಭದ್ರತೆ ಪಡೆಯ 75ಕ್ಕೂ ಹೆಚ್ಚು ಸಶಸ್ತ್ರ ಸಿಬ್ಬಂದಿ ಮತ್ತು ನೂರಕ್ಕೂ ಹೆಚ್ಚು ಸಿಸಿಟಿವಿ ಕಣ್ಗಾವಲು ಇದ್ದರೂ ಈ ಚಿರತೆ ಕನ್ನಂಬಾಡಿ ಕಟ್ಟೆಯಲ್ಲಿ ತನ್ನ ಅಧಿಪತ್ಯ ಸ್ಥಾಪಿಸಿದೆ.

ದಿನವೊಂದಕ್ಕೆ ಸಾವಿರಾರು ಜನರು ಭೇಟಿ ಕೊಡುವ ಪ್ರವಾಸಿ ತಾಣ ಬಂದ್ ಆಗಿರುವುದರಿಂದ ಇದರ ಒಡೆತನ ಹೊಂದಿರುವ ಕಾವೇರಿ ನೀರಾವರಿ ನಿಗಮದ ಬೊಕ್ಕಸಕ್ಕೂ ಲಕ್ಷಾಂತರ ರೂ. ನಷ್ಟ ಸಂಭವಿಸುತ್ತಿದೆ.

andolana

Recent Posts

ಅಂಡಮಾನ್‌ ಸಮುದ್ರದಲ್ಲಿ ಮುಳುಗಿದ ವಲಸಿಗರಿದ್ದ ದೋಣಿ: 250 ಜನ ಕಣ್ಮರೆ

ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್‌ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…

27 mins ago

ಹನೂರು| ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ: ರೈತ ಮುಖಂಡರ ಆಕ್ರೋಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…

41 mins ago

ಹನೂರು| ಕುಡಿಯುವ ನೀರಿಗೆ ಹಾಹಾಕಾರ: ಖಾಲಿ ಬಿಂದಿಗೆ ಹಿಡಿದು ಮಹಿಳೆಯರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…

48 mins ago

ಛತ್ತೀಸ್‌ಗಢ ವಿದ್ಯುತ್‌ ಸ್ಥಾವರ ಸ್ಫೋಟ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್‌ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…

2 hours ago

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

5 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

5 hours ago