ಎರಡು ವರ್ಷಗಳ ನಂತರ ಅದ್ಧೂರಿ ಜಾತ್ರೆ; ಲಕ್ಷಾಂತರ ಜನರು ಭಾಗವಹಿಸುವ ನಿರೀಕ್ಷೆ
ನಂಜನಗೂಡು: ರಾಜ್ಯದ ಅತ್ಯಂತ ಜನಾಕರ್ಷಣೆಯ, ಅಕ್ಷರ ದಾಸೋಹ, ಜ್ಞಾನ ದಾಸೋಹದ ಜಾತ್ರೆ ಎಂದೇ ಬಿಂಬಿತವಾಗಿರುವ ಸುತ್ತೂರಿನ ಶ್ರೀ ಶಿವರಾತ್ರಿ ಶಿವಯೋಗಿಗಳ ಜಾತ್ರಾ ಮಹೋತ್ಸವಕ್ಕೆ ಸುತ್ತೂರಿನ ಅಂಗಳದಲ್ಲಿ ಈಗ ಭಾರೀ ಸಿದ್ಧತೆ ಆರಂಭವಾಗಿದೆ.
ಜ. 18ರ ಬುಧವಾರದಿಂದ ಜನವರಿ 23 ರವರೆಗೆ ನಡೆಯುವ ಈ ಜಾತ್ರೆಗೆ ಪ್ರತಿ ದಿನ ಲಕ್ಷಾಂತರ ಜನರು ಆಗಮಿಸುವ ನಿರೀಕ್ಷೆಯಿದ್ದು ಅವರಿಗೆ ಸಕಲ ವ್ಯವಸ್ಥೆ ಕಲ್ಪಿಸಲು ಸಿದ್ಧತೆ ನಡೆಸಲಾಗುತ್ತಿದೆ.
ಐದಾರು ಲಕ್ಷ ಜನ ಭಾಗವಹಿಸುವ ಈ ಜಾತ್ರೆಯಲ್ಲಿ ಜನರ ಸೇವೆಗೆ ಟೊಂಕ ಕಟ್ಟಿ ನಿಲ್ಲುವ ಸ್ವಯಂಸೇವಕರ ವಸತಿಗಾಗಿ ಅತ್ಯಾಧುನಿಕ, ತಾತ್ಕಾಲಿಕ ವಸತಿ ಗೃಹಗಳ ನಿರ್ಮಾಣವೀಗ ಸದ್ದಿಲ್ಲದೆ ಸುತ್ತೂರಿನ ಕಪಿಲಾ ತೀರದಲ್ಲಿ ಸದ್ದಿಲ್ಲದೆ ಆರಂಭವಾಗಿದೆ.
ಹಸಿರಿನ ಮರಗಳ ನೆರಳಲ್ಲಿ ಸಾಮೂಹಿಕ ದಾಸೋಹದ ವ್ಯವಸ್ಥೆಗಾಗಿ ಚಪ್ಪರದ ನಿರ್ಮಾಣ ಹಾಗೂ ಕಾಲ ಕಾಲಕ್ಕೆ ಸರಿಯಾಗಿ ಅಸಂಖ್ಯಾತ ಜನರ ಉದರ ತುಂಬಲು ವಿವಿಧ ಭಕ್ಷ್ಯ ಭೋಜನಗಳ ತಯಾರಿಕೆಗಾಗಿ ಒಲೆಗಳ ನಿರ್ಮಾಣವೂ ಭರದಿಂದ ಸಾಗುತ್ತಿದೆ. ಒಟ್ಟಾರೆ ಎರಡು ವರ್ಷಗಳ ನಂತರ ಅದ್ಧೂರಿಯಾಗಿ ನಡೆಯುವ ಶ್ರೀ ಶಿವರಾತ್ರಿ ಶಿವಯೋಗಿಗಳ ಜಾತ್ರೋತ್ಸವದ ಸಿದ್ಧತೆ ಭರದಿಂದ ನಡೆಯುತ್ತಿದೆ.
ಸಿರಿಧಾನ್ಯಗಳಿಗೆ ಒತ್ತು
ಈ ಬಾರಿಯ ಜಾತ್ರೆಯ ಕೃಷಿ ಮೇಳದಲ್ಲಿ ಸಿರಿಧಾನ್ಯಗಳು, ಅದರ ತಿಂಡಿ ತಿನುಸುಗಳ ತಯಾರಿಕೆ ಹಾಗೂ ಅದರ ಬಳಕೆಗೆ ಮತ್ತು ಅದರಿಂದಾಗುವ ಉಪಯೋಗಗಳ ಅರಿವು ಮೂಡಿಸಲೂ ಮಠ ಸಜ್ಜಾಗಿದ್ದು, ಕೃಷಿ ಮೇಳವನ್ನು ಸಿರಿಧಾನ್ಯದ ಮೇಳವಾಗಿಸಬಹುದಾದಾದ ಕಾರ್ಯವನ್ನೂ ಇಲ್ಲಿ ಕಾಣಬಹುದಾಗಿದೆ.
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…
ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…
ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…
ಕನ್ನಡದ ಖಾಸಗಿ ಚಾನೆಲ್ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…
ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…
ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…