ಎರಡು ವರ್ಷಗಳ ನಂತರ ಅದ್ಧೂರಿ ಜಾತ್ರೆ; ಲಕ್ಷಾಂತರ ಜನರು ಭಾಗವಹಿಸುವ ನಿರೀಕ್ಷೆ
ನಂಜನಗೂಡು: ರಾಜ್ಯದ ಅತ್ಯಂತ ಜನಾಕರ್ಷಣೆಯ, ಅಕ್ಷರ ದಾಸೋಹ, ಜ್ಞಾನ ದಾಸೋಹದ ಜಾತ್ರೆ ಎಂದೇ ಬಿಂಬಿತವಾಗಿರುವ ಸುತ್ತೂರಿನ ಶ್ರೀ ಶಿವರಾತ್ರಿ ಶಿವಯೋಗಿಗಳ ಜಾತ್ರಾ ಮಹೋತ್ಸವಕ್ಕೆ ಸುತ್ತೂರಿನ ಅಂಗಳದಲ್ಲಿ ಈಗ ಭಾರೀ ಸಿದ್ಧತೆ ಆರಂಭವಾಗಿದೆ.
ಜ. 18ರ ಬುಧವಾರದಿಂದ ಜನವರಿ 23 ರವರೆಗೆ ನಡೆಯುವ ಈ ಜಾತ್ರೆಗೆ ಪ್ರತಿ ದಿನ ಲಕ್ಷಾಂತರ ಜನರು ಆಗಮಿಸುವ ನಿರೀಕ್ಷೆಯಿದ್ದು ಅವರಿಗೆ ಸಕಲ ವ್ಯವಸ್ಥೆ ಕಲ್ಪಿಸಲು ಸಿದ್ಧತೆ ನಡೆಸಲಾಗುತ್ತಿದೆ.
ಐದಾರು ಲಕ್ಷ ಜನ ಭಾಗವಹಿಸುವ ಈ ಜಾತ್ರೆಯಲ್ಲಿ ಜನರ ಸೇವೆಗೆ ಟೊಂಕ ಕಟ್ಟಿ ನಿಲ್ಲುವ ಸ್ವಯಂಸೇವಕರ ವಸತಿಗಾಗಿ ಅತ್ಯಾಧುನಿಕ, ತಾತ್ಕಾಲಿಕ ವಸತಿ ಗೃಹಗಳ ನಿರ್ಮಾಣವೀಗ ಸದ್ದಿಲ್ಲದೆ ಸುತ್ತೂರಿನ ಕಪಿಲಾ ತೀರದಲ್ಲಿ ಸದ್ದಿಲ್ಲದೆ ಆರಂಭವಾಗಿದೆ.
ಹಸಿರಿನ ಮರಗಳ ನೆರಳಲ್ಲಿ ಸಾಮೂಹಿಕ ದಾಸೋಹದ ವ್ಯವಸ್ಥೆಗಾಗಿ ಚಪ್ಪರದ ನಿರ್ಮಾಣ ಹಾಗೂ ಕಾಲ ಕಾಲಕ್ಕೆ ಸರಿಯಾಗಿ ಅಸಂಖ್ಯಾತ ಜನರ ಉದರ ತುಂಬಲು ವಿವಿಧ ಭಕ್ಷ್ಯ ಭೋಜನಗಳ ತಯಾರಿಕೆಗಾಗಿ ಒಲೆಗಳ ನಿರ್ಮಾಣವೂ ಭರದಿಂದ ಸಾಗುತ್ತಿದೆ. ಒಟ್ಟಾರೆ ಎರಡು ವರ್ಷಗಳ ನಂತರ ಅದ್ಧೂರಿಯಾಗಿ ನಡೆಯುವ ಶ್ರೀ ಶಿವರಾತ್ರಿ ಶಿವಯೋಗಿಗಳ ಜಾತ್ರೋತ್ಸವದ ಸಿದ್ಧತೆ ಭರದಿಂದ ನಡೆಯುತ್ತಿದೆ.
ಸಿರಿಧಾನ್ಯಗಳಿಗೆ ಒತ್ತು
ಈ ಬಾರಿಯ ಜಾತ್ರೆಯ ಕೃಷಿ ಮೇಳದಲ್ಲಿ ಸಿರಿಧಾನ್ಯಗಳು, ಅದರ ತಿಂಡಿ ತಿನುಸುಗಳ ತಯಾರಿಕೆ ಹಾಗೂ ಅದರ ಬಳಕೆಗೆ ಮತ್ತು ಅದರಿಂದಾಗುವ ಉಪಯೋಗಗಳ ಅರಿವು ಮೂಡಿಸಲೂ ಮಠ ಸಜ್ಜಾಗಿದ್ದು, ಕೃಷಿ ಮೇಳವನ್ನು ಸಿರಿಧಾನ್ಯದ ಮೇಳವಾಗಿಸಬಹುದಾದಾದ ಕಾರ್ಯವನ್ನೂ ಇಲ್ಲಿ ಕಾಣಬಹುದಾಗಿದೆ.
ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…
ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…