ಅದ್ಧೂರಿ ಶೋಭಾಯಾತ್ರೆಗೆ ಹರಿದುಬಂದ ಜನಸಾಗರ: ಶ್ರೀ ಕೋಟೆ ಗಣಪತಿ ದೇವಾಲಯ ಮಂಟಪಕ್ಕೆ ಪ್ರಥಮ ಸ್ಥಾನ
ಮಡಿಕೇರಿ: ನಗರದಲ್ಲಿ ಕಳೆದ ೯ ದಿನಗಳಿಂದ ನಡೆದ ದಸರಾ ಉತ್ಸವಕ್ಕೆ ವೈಭವಪೂರ್ಣ ತೆರೆ ಬಿದ್ದಿದೆ. ಬುಧವಾರ ರಾತ್ರಿ ದಶಮಂಟಪಗಳ ಆಕರ್ಷಕ ಶೋಭಾಯಾತ್ರೆಯ ಬಳಿಕ ಗುರುವಾರ ಮುಂಜಾನೆ ಬನ್ನಿಮಂಟಪದಲ್ಲಿ ಬನ್ನಿ ಕಡಿಯುವುದರೊಂದಿಗೆ ದಸರಾ ಜನೋತ್ಸವ ಸಂಪನ್ನಗೊಂಡಿತು.
ಮೂರು ವರ್ಷಗಳ ಬಳಿಕ ನಡೆದ ಅದ್ಧೂರಿ ದಶಮಂಟಪಗಳ ಶೋಭಾಯಾತ್ರೆ ನೋಡುಗರ ಕಣ್ಮನ ಸೆಳೆಯಿತು. ಮಂಟಪಗಳಲ್ಲಿ ಅಳವಡಿಸಲಾಗಿದ್ದ ಚಲನವಲನವನ್ನೊಳಗೊಂಡ ಕಲಾಕೃತಿಗಳ ಪೌರಾಣಿಕ ಕಥಾಹಂದರಗಳು ದೇವಲೋಕವೇ ಧರೆಗಿಳಿದಂತೆ ಭಾಸವಾಗುತ್ತಿತ್ತು. ಸಾವಿರಾರು ಸಂಖ್ಯೆಯಲ್ಲಿ ಜನರು ಮಂಟಪಗಳ ಎದುರು ಜಮಾಯಿಸಿ ಪ್ರದರ್ಶನವನ್ನು ಕಣ್ತುಂಬಿಕೊಂಡರು. ನಗರದ ಪ್ರಮುಖ ಬೀದಿಗಳಲ್ಲಿ ನೂಕುನುಗ್ಗಲು ಉಂಟಾಗಿ, ಮಹಿಳೆಯರು ಮಕ್ಕಳು ಸಮಸ್ಯೆ ಎದುರಿಸುವಂತಾಯಿತು.
ನಗರದ ಮುಖ್ಯ ಬೀದಿಗಳಲ್ಲಿ ಬುಧವಾರ ರಾತ್ರಿಯಿಂದ ಆರಂಭವಾದ ೧೦ ಮಂಟಪಗಳ ಮೆರವಣಿಗೆ ಹಾಗೂ ಪೌರಾಣಿಕ ಕಥಾ ಪ್ರಸಂಗ ಆಧಾರಿತ ಕಲಾಕೃತಿಗಳ ಶೋಭಾಯಾತ್ರೆ ಗುರುವಾರ ಮುಂಜಾನೆವರೆಗೆ ನಡೆಯಿತು. ಎಲ್ಲಾ ಮಂಟಪಗಳಲ್ಲಿ ೨ ಟ್ರ್ಯಾಕ್ಟರ್ ಬಳಸಿ ೧೫ಕ್ಕೂ ಹೆಚ್ಚಿನ ಕಲಾಕೃತಿಗಳಿಂದ ಕಥೆಗೆ ತಕ್ಕಂತೆ ಚಲನೆ ಮಾಡಲಾಯಿತು. ಕಥಾ ಸಾರಾಂಶ ಕಲಾಕೃತಿ, ಪ್ರಭಾವಳಿ ಸ್ಟುಡಿಯೋ, ಚಾಲನೆಗೆ ೨ ಟ್ರ್ಯಾಕ್ಟರ್ ಸೆಟ್ಟಿಂಗ್ಸ್, ಧ್ವನಿ ಮುದ್ರಣ – ಶುಚಿತ್ವ- ಸಮಯಪಾಲನೆ ಆಲಿಸಿ ನಗರ ದಸರಾ ಸಮಿತಿ ವತಿಯಿಂದ ವರ್ಷಂಪ್ರತಿಯಂತೆ ಈ ಬಾರಿಯೂ ಪ್ರಶಸ್ತಿ ನೀಡಲಾಯಿತು.
ಶೋಭಾಯಾತ್ರೆಯಲ್ಲಿ ಶ್ರೀ ಕೋಟೆ ಗಣಪತಿ ದೇವಾಲಯ ಮಂಟಪ ಪ್ರಥಮ ಸ್ಥಾನ ಪಡೆದರೆ, ಶ್ರೀ ದಂಡಿನ ಮಾರಿಯಮ್ಮ ದೇವಾಲಯ ಮಂಟಪ ದ್ವಿತೀಯ, ಕುಂದೂರುಮೊಟ್ಟೆ ಶ್ರೀ ಚೌಟಿಮಾರಿಯಮ್ಮ ಮತ್ತು ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಮಂಟಪಗಳು ತೃತೀಯ ಸ್ಥಾನವನ್ನು ಹಂಚಿಕೊಂಡವು.
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…
ಮೈಸೂರು : ಮೈಸೂರಿನ ರೇಸ್ಕ್ಲಬ್ನ ಪ್ರದೇಶದ ಸುತ್ತಲಿನ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಕುದುರೆ, ಕತ್ತೆ, ಹೇಸರಗತ್ತೆ ಪ್ರಾಣಿಗಳ ಚಲನವಲನ, ಕುದುರೆಗಳನ್ನು…
ಮೈಸೂರು : ಪ್ರತಿ ಜೀವ ಅಮೂಲ್ಯ, ರಸ್ತೆ ಅಪಘಾತಗಳ ಸಂಖ್ಯೆ ಶೂನ್ಯವಾಗುವುದು ಗುರಿಯಾಗಬೇಕು ಎಂದು ಸುಪ್ರೀಂ ಕೋಟ್೯ನ ನಿ.ನ್ಯಾಯಮೂರ್ತಿಯೂ ಆದ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಯೋಗ್ಯ ಸೂಕ್ತ ಬಟ್ಟೆ ಧರಿಸಿಕೊಂಡು ಬರದಿದ್ದರೆ ಸೂಕ್ತ ಕ್ರಮ ಎದುರಿಸಬೇಕಾಗುತ್ತದೆ…
ಮೈಸೂರು : ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣವನ್ನು ಸೃಷ್ಟಿಸುವ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಿಕೆ ಹಾಗೂ ವಿ.ವಿ ಕ್ಯಾಂಪಸ್ಗೆ ಅನಧಿಕೃತ…
ಬೆಂಗಳೂರು : ವಿಶೇಷ ಚೇತನರ ಬಗ್ಗೆ ಯಾರೂ ಕನಿಷ್ಠ ಭಾವನೆ ಹೊಂದಬೇಕಾಗಿಲ್ಲ. ಅವರಿಗೆ ದೇವರು ವಿಶೇಷವಾದ ಶಕ್ತಿಯನ್ನು ಕೊಟ್ಟಿರುತ್ತಾನೆ. ಹೀಗಾಗಿ…