ಅದ್ಧೂರಿ ಶೋಭಾಯಾತ್ರೆಗೆ ಹರಿದುಬಂದ ಜನಸಾಗರ: ಶ್ರೀ ಕೋಟೆ ಗಣಪತಿ ದೇವಾಲಯ ಮಂಟಪಕ್ಕೆ ಪ್ರಥಮ ಸ್ಥಾನ
ಮಡಿಕೇರಿ: ನಗರದಲ್ಲಿ ಕಳೆದ ೯ ದಿನಗಳಿಂದ ನಡೆದ ದಸರಾ ಉತ್ಸವಕ್ಕೆ ವೈಭವಪೂರ್ಣ ತೆರೆ ಬಿದ್ದಿದೆ. ಬುಧವಾರ ರಾತ್ರಿ ದಶಮಂಟಪಗಳ ಆಕರ್ಷಕ ಶೋಭಾಯಾತ್ರೆಯ ಬಳಿಕ ಗುರುವಾರ ಮುಂಜಾನೆ ಬನ್ನಿಮಂಟಪದಲ್ಲಿ ಬನ್ನಿ ಕಡಿಯುವುದರೊಂದಿಗೆ ದಸರಾ ಜನೋತ್ಸವ ಸಂಪನ್ನಗೊಂಡಿತು.
ಮೂರು ವರ್ಷಗಳ ಬಳಿಕ ನಡೆದ ಅದ್ಧೂರಿ ದಶಮಂಟಪಗಳ ಶೋಭಾಯಾತ್ರೆ ನೋಡುಗರ ಕಣ್ಮನ ಸೆಳೆಯಿತು. ಮಂಟಪಗಳಲ್ಲಿ ಅಳವಡಿಸಲಾಗಿದ್ದ ಚಲನವಲನವನ್ನೊಳಗೊಂಡ ಕಲಾಕೃತಿಗಳ ಪೌರಾಣಿಕ ಕಥಾಹಂದರಗಳು ದೇವಲೋಕವೇ ಧರೆಗಿಳಿದಂತೆ ಭಾಸವಾಗುತ್ತಿತ್ತು. ಸಾವಿರಾರು ಸಂಖ್ಯೆಯಲ್ಲಿ ಜನರು ಮಂಟಪಗಳ ಎದುರು ಜಮಾಯಿಸಿ ಪ್ರದರ್ಶನವನ್ನು ಕಣ್ತುಂಬಿಕೊಂಡರು. ನಗರದ ಪ್ರಮುಖ ಬೀದಿಗಳಲ್ಲಿ ನೂಕುನುಗ್ಗಲು ಉಂಟಾಗಿ, ಮಹಿಳೆಯರು ಮಕ್ಕಳು ಸಮಸ್ಯೆ ಎದುರಿಸುವಂತಾಯಿತು.
ನಗರದ ಮುಖ್ಯ ಬೀದಿಗಳಲ್ಲಿ ಬುಧವಾರ ರಾತ್ರಿಯಿಂದ ಆರಂಭವಾದ ೧೦ ಮಂಟಪಗಳ ಮೆರವಣಿಗೆ ಹಾಗೂ ಪೌರಾಣಿಕ ಕಥಾ ಪ್ರಸಂಗ ಆಧಾರಿತ ಕಲಾಕೃತಿಗಳ ಶೋಭಾಯಾತ್ರೆ ಗುರುವಾರ ಮುಂಜಾನೆವರೆಗೆ ನಡೆಯಿತು. ಎಲ್ಲಾ ಮಂಟಪಗಳಲ್ಲಿ ೨ ಟ್ರ್ಯಾಕ್ಟರ್ ಬಳಸಿ ೧೫ಕ್ಕೂ ಹೆಚ್ಚಿನ ಕಲಾಕೃತಿಗಳಿಂದ ಕಥೆಗೆ ತಕ್ಕಂತೆ ಚಲನೆ ಮಾಡಲಾಯಿತು. ಕಥಾ ಸಾರಾಂಶ ಕಲಾಕೃತಿ, ಪ್ರಭಾವಳಿ ಸ್ಟುಡಿಯೋ, ಚಾಲನೆಗೆ ೨ ಟ್ರ್ಯಾಕ್ಟರ್ ಸೆಟ್ಟಿಂಗ್ಸ್, ಧ್ವನಿ ಮುದ್ರಣ – ಶುಚಿತ್ವ- ಸಮಯಪಾಲನೆ ಆಲಿಸಿ ನಗರ ದಸರಾ ಸಮಿತಿ ವತಿಯಿಂದ ವರ್ಷಂಪ್ರತಿಯಂತೆ ಈ ಬಾರಿಯೂ ಪ್ರಶಸ್ತಿ ನೀಡಲಾಯಿತು.
ಶೋಭಾಯಾತ್ರೆಯಲ್ಲಿ ಶ್ರೀ ಕೋಟೆ ಗಣಪತಿ ದೇವಾಲಯ ಮಂಟಪ ಪ್ರಥಮ ಸ್ಥಾನ ಪಡೆದರೆ, ಶ್ರೀ ದಂಡಿನ ಮಾರಿಯಮ್ಮ ದೇವಾಲಯ ಮಂಟಪ ದ್ವಿತೀಯ, ಕುಂದೂರುಮೊಟ್ಟೆ ಶ್ರೀ ಚೌಟಿಮಾರಿಯಮ್ಮ ಮತ್ತು ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಮಂಟಪಗಳು ತೃತೀಯ ಸ್ಥಾನವನ್ನು ಹಂಚಿಕೊಂಡವು.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…