ಜಿಲ್ಲೆಗಳು

ಮಂಜಿನ ನಗರಿ ದಸರಾ ಉತ್ಸವಕ್ಕೆ ವೈಭವಪೂರ್ಣ ತೆರೆ

ಅದ್ಧೂರಿ ಶೋಭಾಯಾತ್ರೆಗೆ ಹರಿದುಬಂದ ಜನಸಾಗರ: ಶ್ರೀ ಕೋಟೆ ಗಣಪತಿ ದೇವಾಲಯ ಮಂಟಪಕ್ಕೆ ಪ್ರಥಮ ಸ್ಥಾನ

ಮಡಿಕೇರಿ: ನಗರದಲ್ಲಿ ಕಳೆದ ೯ ದಿನಗಳಿಂದ ನಡೆದ ದಸರಾ ಉತ್ಸವಕ್ಕೆ ವೈಭವಪೂರ್ಣ ತೆರೆ ಬಿದ್ದಿದೆ. ಬುಧವಾರ ರಾತ್ರಿ ದಶಮಂಟಪಗಳ ಆಕರ್ಷಕ ಶೋಭಾಯಾತ್ರೆಯ ಬಳಿಕ ಗುರುವಾರ ಮುಂಜಾನೆ ಬನ್ನಿಮಂಟಪದಲ್ಲಿ ಬನ್ನಿ ಕಡಿಯುವುದರೊಂದಿಗೆ ದಸರಾ ಜನೋತ್ಸವ ಸಂಪನ್ನಗೊಂಡಿತು.

ಮೂರು ವರ್ಷಗಳ ಬಳಿಕ ನಡೆದ ಅದ್ಧೂರಿ ದಶಮಂಟಪಗಳ ಶೋಭಾಯಾತ್ರೆ ನೋಡುಗರ ಕಣ್ಮನ ಸೆಳೆಯಿತು. ಮಂಟಪಗಳಲ್ಲಿ ಅಳವಡಿಸಲಾಗಿದ್ದ ಚಲನವಲನವನ್ನೊಳಗೊಂಡ ಕಲಾಕೃತಿಗಳ ಪೌರಾಣಿಕ ಕಥಾಹಂದರಗಳು ದೇವಲೋಕವೇ ಧರೆಗಿಳಿದಂತೆ ಭಾಸವಾಗುತ್ತಿತ್ತು. ಸಾವಿರಾರು ಸಂಖ್ಯೆಯಲ್ಲಿ ಜನರು ಮಂಟಪಗಳ ಎದುರು ಜಮಾಯಿಸಿ ಪ್ರದರ್ಶನವನ್ನು ಕಣ್ತುಂಬಿಕೊಂಡರು. ನಗರದ ಪ್ರಮುಖ ಬೀದಿಗಳಲ್ಲಿ ನೂಕುನುಗ್ಗಲು ಉಂಟಾಗಿ, ಮಹಿಳೆಯರು ಮಕ್ಕಳು ಸಮಸ್ಯೆ ಎದುರಿಸುವಂತಾಯಿತು.

ನಗರದ ಮುಖ್ಯ ಬೀದಿಗಳಲ್ಲಿ ಬುಧವಾರ ರಾತ್ರಿಯಿಂದ ಆರಂಭವಾದ ೧೦ ಮಂಟಪಗಳ ಮೆರವಣಿಗೆ ಹಾಗೂ ಪೌರಾಣಿಕ ಕಥಾ ಪ್ರಸಂಗ ಆಧಾರಿತ ಕಲಾಕೃತಿಗಳ ಶೋಭಾಯಾತ್ರೆ ಗುರುವಾರ ಮುಂಜಾನೆವರೆಗೆ ನಡೆಯಿತು. ಎಲ್ಲಾ ಮಂಟಪಗಳಲ್ಲಿ ೨ ಟ್ರ್ಯಾಕ್ಟರ್ ಬಳಸಿ ೧೫ಕ್ಕೂ ಹೆಚ್ಚಿನ ಕಲಾಕೃತಿಗಳಿಂದ ಕಥೆಗೆ ತಕ್ಕಂತೆ ಚಲನೆ ಮಾಡಲಾಯಿತು. ಕಥಾ ಸಾರಾಂಶ ಕಲಾಕೃತಿ, ಪ್ರಭಾವಳಿ ಸ್ಟುಡಿಯೋ, ಚಾಲನೆಗೆ ೨ ಟ್ರ್ಯಾಕ್ಟರ್ ಸೆಟ್ಟಿಂಗ್ಸ್, ಧ್ವನಿ ಮುದ್ರಣ – ಶುಚಿತ್ವ- ಸಮಯಪಾಲನೆ ಆಲಿಸಿ ನಗರ ದಸರಾ ಸಮಿತಿ ವತಿಯಿಂದ ವರ್ಷಂಪ್ರತಿಯಂತೆ ಈ ಬಾರಿಯೂ ಪ್ರಶಸ್ತಿ ನೀಡಲಾಯಿತು.

ಶೋಭಾಯಾತ್ರೆಯಲ್ಲಿ ಶ್ರೀ ಕೋಟೆ ಗಣಪತಿ ದೇವಾಲಯ ಮಂಟಪ ಪ್ರಥಮ ಸ್ಥಾನ ಪಡೆದರೆ, ಶ್ರೀ ದಂಡಿನ ಮಾರಿಯಮ್ಮ ದೇವಾಲಯ ಮಂಟಪ ದ್ವಿತೀಯ, ಕುಂದೂರುಮೊಟ್ಟೆ ಶ್ರೀ ಚೌಟಿಮಾರಿಯಮ್ಮ ಮತ್ತು ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಮಂಟಪಗಳು ತೃತೀಯ ಸ್ಥಾನವನ್ನು ಹಂಚಿಕೊಂಡವು.

andolana

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

12 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

12 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

12 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

12 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

13 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

13 hours ago