ಅದ್ಧೂರಿ ಶೋಭಾಯಾತ್ರೆಗೆ ಹರಿದುಬಂದ ಜನಸಾಗರ: ಶ್ರೀ ಕೋಟೆ ಗಣಪತಿ ದೇವಾಲಯ ಮಂಟಪಕ್ಕೆ ಪ್ರಥಮ ಸ್ಥಾನ
ಮಡಿಕೇರಿ: ನಗರದಲ್ಲಿ ಕಳೆದ ೯ ದಿನಗಳಿಂದ ನಡೆದ ದಸರಾ ಉತ್ಸವಕ್ಕೆ ವೈಭವಪೂರ್ಣ ತೆರೆ ಬಿದ್ದಿದೆ. ಬುಧವಾರ ರಾತ್ರಿ ದಶಮಂಟಪಗಳ ಆಕರ್ಷಕ ಶೋಭಾಯಾತ್ರೆಯ ಬಳಿಕ ಗುರುವಾರ ಮುಂಜಾನೆ ಬನ್ನಿಮಂಟಪದಲ್ಲಿ ಬನ್ನಿ ಕಡಿಯುವುದರೊಂದಿಗೆ ದಸರಾ ಜನೋತ್ಸವ ಸಂಪನ್ನಗೊಂಡಿತು.
ಮೂರು ವರ್ಷಗಳ ಬಳಿಕ ನಡೆದ ಅದ್ಧೂರಿ ದಶಮಂಟಪಗಳ ಶೋಭಾಯಾತ್ರೆ ನೋಡುಗರ ಕಣ್ಮನ ಸೆಳೆಯಿತು. ಮಂಟಪಗಳಲ್ಲಿ ಅಳವಡಿಸಲಾಗಿದ್ದ ಚಲನವಲನವನ್ನೊಳಗೊಂಡ ಕಲಾಕೃತಿಗಳ ಪೌರಾಣಿಕ ಕಥಾಹಂದರಗಳು ದೇವಲೋಕವೇ ಧರೆಗಿಳಿದಂತೆ ಭಾಸವಾಗುತ್ತಿತ್ತು. ಸಾವಿರಾರು ಸಂಖ್ಯೆಯಲ್ಲಿ ಜನರು ಮಂಟಪಗಳ ಎದುರು ಜಮಾಯಿಸಿ ಪ್ರದರ್ಶನವನ್ನು ಕಣ್ತುಂಬಿಕೊಂಡರು. ನಗರದ ಪ್ರಮುಖ ಬೀದಿಗಳಲ್ಲಿ ನೂಕುನುಗ್ಗಲು ಉಂಟಾಗಿ, ಮಹಿಳೆಯರು ಮಕ್ಕಳು ಸಮಸ್ಯೆ ಎದುರಿಸುವಂತಾಯಿತು.
ನಗರದ ಮುಖ್ಯ ಬೀದಿಗಳಲ್ಲಿ ಬುಧವಾರ ರಾತ್ರಿಯಿಂದ ಆರಂಭವಾದ ೧೦ ಮಂಟಪಗಳ ಮೆರವಣಿಗೆ ಹಾಗೂ ಪೌರಾಣಿಕ ಕಥಾ ಪ್ರಸಂಗ ಆಧಾರಿತ ಕಲಾಕೃತಿಗಳ ಶೋಭಾಯಾತ್ರೆ ಗುರುವಾರ ಮುಂಜಾನೆವರೆಗೆ ನಡೆಯಿತು. ಎಲ್ಲಾ ಮಂಟಪಗಳಲ್ಲಿ ೨ ಟ್ರ್ಯಾಕ್ಟರ್ ಬಳಸಿ ೧೫ಕ್ಕೂ ಹೆಚ್ಚಿನ ಕಲಾಕೃತಿಗಳಿಂದ ಕಥೆಗೆ ತಕ್ಕಂತೆ ಚಲನೆ ಮಾಡಲಾಯಿತು. ಕಥಾ ಸಾರಾಂಶ ಕಲಾಕೃತಿ, ಪ್ರಭಾವಳಿ ಸ್ಟುಡಿಯೋ, ಚಾಲನೆಗೆ ೨ ಟ್ರ್ಯಾಕ್ಟರ್ ಸೆಟ್ಟಿಂಗ್ಸ್, ಧ್ವನಿ ಮುದ್ರಣ – ಶುಚಿತ್ವ- ಸಮಯಪಾಲನೆ ಆಲಿಸಿ ನಗರ ದಸರಾ ಸಮಿತಿ ವತಿಯಿಂದ ವರ್ಷಂಪ್ರತಿಯಂತೆ ಈ ಬಾರಿಯೂ ಪ್ರಶಸ್ತಿ ನೀಡಲಾಯಿತು.
ಶೋಭಾಯಾತ್ರೆಯಲ್ಲಿ ಶ್ರೀ ಕೋಟೆ ಗಣಪತಿ ದೇವಾಲಯ ಮಂಟಪ ಪ್ರಥಮ ಸ್ಥಾನ ಪಡೆದರೆ, ಶ್ರೀ ದಂಡಿನ ಮಾರಿಯಮ್ಮ ದೇವಾಲಯ ಮಂಟಪ ದ್ವಿತೀಯ, ಕುಂದೂರುಮೊಟ್ಟೆ ಶ್ರೀ ಚೌಟಿಮಾರಿಯಮ್ಮ ಮತ್ತು ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಮಂಟಪಗಳು ತೃತೀಯ ಸ್ಥಾನವನ್ನು ಹಂಚಿಕೊಂಡವು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…