ಗುಂಡ್ಲುಪೇಟೆ: ಪಟ್ಟಣದ ಡಿ. ದೇವರಾಜ ಅರಸು ಕ್ರೀಡಾಂಗಣದಲ್ಲಿ ಕನಕ ಜಯಂತಿ ಕಾರ್ಯಕ್ರಮ ಆಯೋಜನೆಯಾಗಿತ್ತು.
ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಭಾಷಣ ಮಾಡುವ ವೇಳೆ ರಂಜಿತ್ ಎಂಬಾತ ಅವಾಚ್ಯ ಶಬ್ದಗಳಿಂದ ನಿಂದಿಸಿ ಪರಾರಿಯಾಗಿದ್ದ. ಯತೀಂದ್ರ ಸಿದ್ದರಾಮಯ್ಯ ರಾಮಮಂದಿರ ಹಾಗೂ ನರೇಂದ್ರ ಮೋದಿ ಕುರಿತು ಮಾತನಾಡುವಾಗ ಈ ಘಟನೆ ನಡೆದಿದೆ.
ಸಚಿವ ಬೈರತಿ ಸುರೇಶ್ ಗುಂಡ್ಲುಪೇಟೆ ಪಿಐ ಹಾಗೂ ಪಿಎಸ್ಐ ಜತೆ ಮಾತನಾಡಿ ಕೂಡಲೇ ಕಿಡಿಗೇಡಿಯನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಿ, ಯಾವುದೇ ಕಾರಣಕ್ಕೂ ಜಾಮೀನು ಕೊಡಬೇಡಿ ಎಂದು ಸೂಚಿಸಿದರು.
ಅರ್ಧ ಗಂಟೆ ಬಳಿಕ ಯತೀಂದ್ರ ಸಿದ್ದರಾಮಯ್ಯ ಅವರನ್ನು ನಿಂದಿಸಿದ್ದ ರಂಜಿತ್ ಮತ್ತೆ ಸಮಾರಂಭ ನಡೆದಿದ್ದ ಕ್ರೀಡಾಂಗಣಕ್ಕೆ ಬಂದಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಸಮಾರಂಭಕ್ಕೆ ಆಗಮಿಸಿದ್ದ ಜನರು ರಂಜಿತ್ ಮೇಲೆ ಹಲ್ಲೆಗೆ ಮುಂದಾಗಿದ್ದು, ಪರಿಸ್ಥಿತಿ ಅರಿತ ಪೊಲೀಸರು ಆತನನ್ನು ಠಾಣೆಗೆ ಎಳೆದೊಯ್ದಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…