ಜಿಲ್ಲೆಗಳು

‘ಭಾರತೀಯತೆ’ ಶೀರ್ಷಿಕೆಯಡಿಯಲ್ಲಿ ಬಹುರೂಪಿ ರಾಷ್ಟ್ರೀಯ ರಂಗೋತ್ಸವ

ಮೈಸೂರು : ‘ಭಾರತೀಯತೆ’ ಶೀರ್ಷಿಕೆಯಡಿಯಲ್ಲಿ ಡಿ.೮ ರಿಂದ ೧೫ರವೆಗೆ ರಂಗಾಯಣದ ವತಿಯಿಂದ ಹಮ್ಮಿಕೊಂಡಿರುವ ಬಹುರೂಪಿ ರಾಷ್ಟ್ರೀಯ ರಂಗೋತ್ಸವವನ್ನು ಡಿ.೧೦ರಂದು ಸಂಜೆ ೫.೩೦ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದು, ಡಿ.೮ರಂದು ಜಾನಪದೋತ್ಸವಕ್ಕೆ ಚಾಲನೆ ನೀಡಲಾಗುವುದು.

ಇನ್ನು ಬಾರಿಯ ರಂಗೋತ್ಸವದಲ್ಲಿ ಒಟ್ಟು ೨೦ ನಾಟಕಗಳು ಪ್ರದರ್ಶನವಾಗಲಿದ್ದು, ೧೨ ಕನ್ನಡ, ೧ ತುಳು, ಸಂಸ್ಕೃತ, ಮಲೆಯಾಳಂ, ತೆಲುಗು, ಹಿಂದಿ ಸೇರಿದಂತೆ ೭ನಾಟಕಗಳಲ್ಲಿ ವಿವಿಧ ರಾಜ್ಯ ಕಲಾವಿದರು ಅಭಿನಯಿಸುವರು.

ಬಜೆಟ್ ಕೊರತೆಯಿಂದಾಗಿ ಈ ಬಾರಿ ೭ ದಿನ ಮಾತ್ರ ರಂಗೋತ್ಸವವನ್ನು ಆಯೋಜಿಸಿದ್ದರೂ, ಡಿ.೩ರಂದೇ ಬಹುರೂಪಿ ರಾಷ್ಟ್ರೀಯ ರಂಗೋತ್ಸದ ಅಂಗವಾಗಿ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಶನಿವಾರದಂದು (ಡಿ.೩)ಬಿ.ವಿ.ಕಾರಂತರ ರಂಗ ಚಾವಡಿಯಲ್ಲಿ ಚಿತ್ರಕಲಾ ಶಿಬಿರವನ್ನು ಆರಂಭಿಸುತ್ತಿದ್ದು, ಬೆ.೧೦.೩೦ಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಚಾಲನೆ ನೀಡುವರು. ಹಿರಿಯ ಶಿಲ್ಪಿ ಎಲ್.ಶಿವಲಿಂಗಪ್ಪ, ಕಾವಾ ಡೀನ್ ದೇವರಾಜ್ ಇರಲಿದ್ದಾರೆ. ಈ ಶಿಬಿರದಲ್ಲಿ ವಿವಿಧ ಭಾಗಗಳಿಂದ ಸುಮಾರು ೨೦ ಕಲಾವಿದರು ಭಾಗವಹಿಸುವರು.

ಡಿ.೫ರಿಂದ ಪ್ರಚಾರಾಂದೋಲನ : ಇನ್ನು ರಂಗೋತ್ಸವದತ್ತ ಜನರನ್ನು ಸೆಳೆಯು ಉದ್ದೇಶದಿಂದ ಡಿ.೫ರಿಂದ ಗಾರುಡಿ ಗೊಂಬೆಗಳೊಂದಿಗೆ ‘ಮನೆ-ಮನೆಗೆ ರಂಗಾಯಣ- ಮನ ಮನಕೆ ಬಹುರೂಪಿ’ ಪರಿಕಲ್ಪನೆಯಲ್ಲಿ ಪ್ರಚಾರಾಂದೋಲನವನ್ನು ಮೈಸೂರು ನಗರ ಪಾಲಿಕೆ ಮಹಾಪೌರರಾದ ಶಿವಕುಮಾರ್ ಅವರ ಮನೆಯಿಂದ ಆರಂಭಿಸಲಾಗುತ್ತದೆ.

ಚಲನಚಿತ್ರೋತ್ಸವ: ರಂಗಾಯಣದ ಆವರಣದಲ್ಲಿರುವ ಡಾ.ಪುನೀತ ರಾಜ್ ಕುಮಾರ್ ಚಿತ್ರಮಂದಿರದಲ್ಲಿ ಡಿ.೯ರಂದು ರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಆಯೋಜಿಸಲಾಗುತ್ತಿದ್ದು, ಅಂದು ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾದ ಅಶೋಕ ಕಶ್ಯಪ್ ಅವರು ಚಾಲನೆ ನೀಡುವರು. ಚಿತ್ರನಟ ದೊಡ್ಡಣ್ಣ ಅವರು ಭಾಗವಹಿಸುವರು. ನಾನಾ ಭಾಷೆಯ ಸುಮಾರು ೨೮ ಚಲನಚಿತ್ರಗಳು ಪ್ರದರ್ಶನವಾಗಲಿವೆ.

ರಂಗಾಯಣದ ಬಿ.ವಿ.ಕಾರಂತ ರಂಗಚಾವಡಿಯಲ್ಲಿ ರಂಗಾಭಿಮಾನಿಗೆ ಟಿಕೆಟ್ ವಿತರಿಸಲಾಯಿತು.

ರಾಷ್ಟ್ರೀಯ ವಿಚಾರ ಸಂಕಿರಣ: ಡಿ.೧೦ ಮತ್ತು ೧೧ರಂದು ನಡೆಯುವ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ‘ಸನಾತನ ಧರ್ಮ ಮತ್ತು ಭಾರತೀಯತೆ’ ಹಾಗೂ ‘ಭವಿಷ್ಯದಲ್ಲಿ ಭಾರತೀಯ ಸಂಸ್ಕೃತಿ’ ಎಂಬ ವಿಚಾರಗಳ ಮೇಲೆ ಚರ್ಚೆ ನಡೆಯಲಿದೆ. ವಿಚಾರ ಸಂಕಿರಣದಲ್ಲಿ ಲೇಖಕರಾದ ಡಾ.ಎಸ್.ಆರ್.ಲೀಲಾ, ಎಸ್.ಎನ್.ಸೇತುರಾಮ್, ಚಿಂತಕರಾದ ಡಾ.ಬಿ.ವಿ.ಆರತಿ, ರಮಾನಂದ ಐನಕೈ, ಸಾಹಿತಿ ಬಾಬು ಕೃಷ್ಣಮೂರ್ತಿ, ಸಂಸ್ಕೃತಿ ಚಿಂತಕ ಸು.ರಾಮಣ್ಣ ಭಾಗವಹಿಸಿ ವಿಚಾರ ಮಂಡನೆ ಮಾಡುವರು.

ಡಿ.೧೧ರಂದು‘ವೈವಿಧ್ಯತೆಯಲ್ಲಿ ಭಾರತೀಯತೆ’ ಎಂಬ ವಿಷಯದ ಮೇಲೆ ಭಾಷಣ ಸ್ಪರ್ಧೆಯನ್ನು ಆಯೋಜಿಸಿದ್ದು, ಈ ಸ್ಪರ್ಧೆಯಲ್ಲಿ ಪದವಿ ವಿದ್ಯಾರ್ಥಿಗಳು ಮಾತ್ರ ಭಾಗವಹಿಸಬಹುದು. ಪ್ರಥಮ ಬಹುಮಾನವಾಗಿ ೧೫ ಸಾವಿರ ರೂ, ದ್ವಿತೀಯ ಬಹುಮಾನ ೧೦ ಸಾವಿರ ರೂ. ಮತ್ತು ತೃತೀಯ ಬಹುಮಾನ ೫ ಸಾವಿರ ರೂ. ಇರಲಿದೆ.

ಉದ್ಘಾಟನೆ: ಡಿ.೧೦ರಂದು ಸಂಜೆ ೫.೩೦ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸುವ ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ನಾಟಕ ಶಾಲೆಯ ಅಧ್ಯಕ್ಷ ಪರೇಶ್ ರಾವಲ್, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನೀಲ್ ಕುಮಾರ್, ಮಹಾಪೌರರಾದ ಶಿವಕುಮಾರ್, ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್.ನಾಗೇಂದ್ರ ಉಪಸ್ಥಿತರಿರುವರು.

ಈ ಸಂಬಂಧ ಬಿ.ವಿ.ಕಾರಂತರ ರಂಗಚಾವಡಿಯಲ್ಲಿ ಶುಕ್ರವಾರ ಸುದ್ಧಿಗೋಷ್ಠಿಯಲ್ಲಿ ಆಯೋಜಿಸಿ ಮಾತನಾಡಿದ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರು, ಭಾರತವೆಂದರೆ ಅದು ಕೇವಲ ನೆಲವೊಂದೇ ಅಲ್ಲ. ನಾವು ಇದನ್ನು ಮಾತೆ ಎಂದು ಪೂಜಿಸುತ್ತೇವೆ. ಹಾಗಾಗಿ, ಅತ್ಯಂತ ಗಂಭೀರವಾಗಿ ಚರ್ಚಿಸಿ ‘ಭಾರತೀಯತೆ’ ಶೀರ್ಷಿಕೆ ಇಡಲಾಗಿದೆ ಎಂದರು.

ಈ ಬಾರಿ ಬಜೆಟ್ ಅನ್ನು ಕಡಿಮೆ ನೀಡಲಾಗಿದ್ದು, ೨೫ ಲಕ್ಷ ರೂ.ನೀಡಲಾಗಿದೆ. ಆದರೂ, ವಿಭಿನ್ನ ಮತ್ತು ವಿಶಿಷ್ಟವಾಗಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇನ್ನು ಕೆಲವು ಕಾರ್ಯಕ್ರಮಗಳಿಗೆ ಅತಿಥಿಗಳನ್ನು ಸೇರ್ಪಡೆ ಮಾಡಬೇಕಿದೆ ಈಗಾಗಲೇ ನಾಟಕದ ಟಿಕೆಟ್ ದೊರೆಲಿದೆ. ಪ್ರತಿ ನಾಟಕಕ್ಕೆ ೧೦೦ ರೂ.ಪ್ರವೇಶ ಶುಲ್ಕವಿರಲಿದೆ ಎಂದರು.

ಇದೇ ಸಮಯದಲ್ಲಿ ರಂಗಾಭಿಮಾನಿಗೆ ಟಿಕೆಟ್ ವಿತರಿಸಲಾಯಿತು. ಬಹುರೂಪಿ ರಾಷ್ಟ್ರೀಯ ರಂಗೋತ್ಸವದ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಯಿತು.

ಸುದ್ದಿಗೋಷ್ಠಿಯಲ್ಲಿ ರಂಗಾಯಣದ ಉಪನಿರ್ದೇಶಕರಾದ ನಿರ್ಮಲ ಮಠಪತಿ, ಸಂಚಾಲಕರಾದ ಜಗದೀಶ್ ಬನವಾಸೆ ಇದ್ದರು.

 

 

 

andolana

Recent Posts

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

19 mins ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

1 hour ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

6 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

8 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

9 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

10 hours ago