ಮೈಸೂರು: ಕೆಲ ದಿನಗಳ ಹಿಂದೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ವಿದ್ಯಾರ್ಥಿಗಳನ್ನು ಬೆಂಬಲಿಸಿ ನಟ ಚೇತನ್ ಅಹಿಂಸಾ ಪೋಸ್ಟ್ ಹಾಕಿದ್ದರು. ಇದರ ವಿರುದ್ದ ಮೈಸೂರಿನ ರಾಷ್ಟ್ರೀಯ ಹಿಂದೂ ಸಮಿತಿಯಿಂದ, ಅಗ್ರಹಾರದ ಪ್ರಮುಖ ರಸ್ತೆ ಅಂಗಡಿಗೆ ತೆರಳಿ ಪೇ ಚೇತನ್ ಪೋಟೋ ಹಿಡಿದು ದೇಣಿಗೆ ಸಂಗ್ರಹ ಮಾಡುತ್ತಿದ್ದಾರೆ. ಚೇತನ್ ನಮ್ಮ ದೇಶದಲ್ಲಿ ಇರಲು ಯೋಗ್ಯನಲ್ಲ ಆತನನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು ಎನ್ನುವ ಅಭಿಯಾನವನ್ನು ಶುರು ಮಾಡಿದ್ದಾರೆ.
ನಟ ಚೇತನ್ ಅಹಿಂಸಾ ತಮ್ಮ ವಿವಾದಾತ್ಮಕ ಹೇಳಿಕೆಗಳನ್ನು ನೀಡುವುದರ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಇತ್ತೀಚೆಗೆ ಕಾಂತಾರ ಸಿನಿಮಾದ ಬಗ್ಗೆ ಮಾತನಾಡಿ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದರು. ಇದೀಗ 5 ದಿನಗಳ ಹಿಂದೆ(ನ.17) ಬೆಂಗಳೂರಿನ ನ್ಯೂ ಹೊರೈಜನ್ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು ಅವರನ್ನು ಬೆಂಬಲಿಸುವ ಮೂಲಕ ಮತ್ತೆ ವಿವಾದವನ್ನು ತಮ್ಮ ಮೇಲೆ ಎಳೆದುಕೊಂಡಿದ್ದಾರೆ.
ಚೇತನ್ ಅಹಿಂಸಾ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ‘ಕಾಲೇಜ್ ಫೆಸ್ಟ್ನಲ್ಲಿ ಬೆಂಗಳೂರಿನ 3 ವಿದ್ಯಾರ್ಥಿಗಳು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ. ಇದನ್ನು ಅವರು ವಿನೋದಕ್ಕಾಗಿ ಮಾಡಲಾಗಿದೆ. ಈ ಕಾರಣಕ್ಕೆ ಆರ್ಯನ್, ರಿಯಾ ಮತ್ತು ದಿನಕರ್ ಅವರನ್ನು ಥಳಿಸಿ ಬೆದರಸಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಇದು ಅಸಮಬದ್ಧ ಮತ್ತು ಅಪಾಯಕಾರಿ. ಪಾಕಿಸ್ತಾನದ ಜನರು ನಮ್ಮ ಸಹೋದರಿಯರು ಮತ್ತು ಸಹೋದರರಂತೆ ಅವರು ನಮ್ಮ ಶತ್ರುಗಳಲ್ಲ. ವಾಕ್ ಸ್ವಾತಂತ್ರ್ಯವನ್ನು ನಾವು ಎತ್ತಿ ಹಿಡಿಯಬೇಕು’ ಎಂದು ಬರೆದುಕೊಳ್ಳುವ ಮೂಲಕ ಸಾಕಷ್ಟು ಟೀಕೆಗಳಿಗೆ ಒಳಗಾಗುತ್ತಿದ್ದಾರೆ.
ಇನ್ನು ವಿದ್ಯಾರ್ಥಿಗಳ ವಿರುದ್ಧ ಮಾರತ್ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಶಕ್ಕೆ ಪಡೆದುಕೊಂಡ ಪೊಲೀಸರು ತನಿಖೆ ನಡೆಸಿದಾಗ ತಮಾಷೆ ಮಾಡಲು ಹೀಗೆ ಮಾಡಿದ್ದೇವೆ ಎಂದಿದ್ದಾರೆ. ಆದರೂ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ತಗೆದುಕೊಂಡು ತನಿಖೆ ನಡೆಸಿದ್ದಾರೆ.
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…