ಮೈಸೂರು: ಕೆಲ ದಿನಗಳ ಹಿಂದೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ವಿದ್ಯಾರ್ಥಿಗಳನ್ನು ಬೆಂಬಲಿಸಿ ನಟ ಚೇತನ್ ಅಹಿಂಸಾ ಪೋಸ್ಟ್ ಹಾಕಿದ್ದರು. ಇದರ ವಿರುದ್ದ ಮೈಸೂರಿನ ರಾಷ್ಟ್ರೀಯ ಹಿಂದೂ ಸಮಿತಿಯಿಂದ, ಅಗ್ರಹಾರದ ಪ್ರಮುಖ ರಸ್ತೆ ಅಂಗಡಿಗೆ ತೆರಳಿ ಪೇ ಚೇತನ್ ಪೋಟೋ ಹಿಡಿದು ದೇಣಿಗೆ ಸಂಗ್ರಹ ಮಾಡುತ್ತಿದ್ದಾರೆ. ಚೇತನ್ ನಮ್ಮ ದೇಶದಲ್ಲಿ ಇರಲು ಯೋಗ್ಯನಲ್ಲ ಆತನನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು ಎನ್ನುವ ಅಭಿಯಾನವನ್ನು ಶುರು ಮಾಡಿದ್ದಾರೆ.
ನಟ ಚೇತನ್ ಅಹಿಂಸಾ ತಮ್ಮ ವಿವಾದಾತ್ಮಕ ಹೇಳಿಕೆಗಳನ್ನು ನೀಡುವುದರ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಇತ್ತೀಚೆಗೆ ಕಾಂತಾರ ಸಿನಿಮಾದ ಬಗ್ಗೆ ಮಾತನಾಡಿ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದರು. ಇದೀಗ 5 ದಿನಗಳ ಹಿಂದೆ(ನ.17) ಬೆಂಗಳೂರಿನ ನ್ಯೂ ಹೊರೈಜನ್ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು ಅವರನ್ನು ಬೆಂಬಲಿಸುವ ಮೂಲಕ ಮತ್ತೆ ವಿವಾದವನ್ನು ತಮ್ಮ ಮೇಲೆ ಎಳೆದುಕೊಂಡಿದ್ದಾರೆ.
ಚೇತನ್ ಅಹಿಂಸಾ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ‘ಕಾಲೇಜ್ ಫೆಸ್ಟ್ನಲ್ಲಿ ಬೆಂಗಳೂರಿನ 3 ವಿದ್ಯಾರ್ಥಿಗಳು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ. ಇದನ್ನು ಅವರು ವಿನೋದಕ್ಕಾಗಿ ಮಾಡಲಾಗಿದೆ. ಈ ಕಾರಣಕ್ಕೆ ಆರ್ಯನ್, ರಿಯಾ ಮತ್ತು ದಿನಕರ್ ಅವರನ್ನು ಥಳಿಸಿ ಬೆದರಸಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಇದು ಅಸಮಬದ್ಧ ಮತ್ತು ಅಪಾಯಕಾರಿ. ಪಾಕಿಸ್ತಾನದ ಜನರು ನಮ್ಮ ಸಹೋದರಿಯರು ಮತ್ತು ಸಹೋದರರಂತೆ ಅವರು ನಮ್ಮ ಶತ್ರುಗಳಲ್ಲ. ವಾಕ್ ಸ್ವಾತಂತ್ರ್ಯವನ್ನು ನಾವು ಎತ್ತಿ ಹಿಡಿಯಬೇಕು’ ಎಂದು ಬರೆದುಕೊಳ್ಳುವ ಮೂಲಕ ಸಾಕಷ್ಟು ಟೀಕೆಗಳಿಗೆ ಒಳಗಾಗುತ್ತಿದ್ದಾರೆ.
ಇನ್ನು ವಿದ್ಯಾರ್ಥಿಗಳ ವಿರುದ್ಧ ಮಾರತ್ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಶಕ್ಕೆ ಪಡೆದುಕೊಂಡ ಪೊಲೀಸರು ತನಿಖೆ ನಡೆಸಿದಾಗ ತಮಾಷೆ ಮಾಡಲು ಹೀಗೆ ಮಾಡಿದ್ದೇವೆ ಎಂದಿದ್ದಾರೆ. ಆದರೂ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ತಗೆದುಕೊಂಡು ತನಿಖೆ ನಡೆಸಿದ್ದಾರೆ.
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…
ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…
ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…
ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…