ಮಡಿಕೇರಿ: ಪೊಲೀಸ್ ಪೇದೆಯೊಬ್ಬ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಡಿಕೇರಿ ನಗರದಲ್ಲಿ ಗುರುವಾರ ನಡೆದಿದೆ.
ಸೋಮಶೇಖರ್ ಸಜ್ಜನ್ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮಾಂತರ ಠಾಣಾ ಸಿಬ್ಬಂದಿ. ಮಡಿಕೇರಿ ತಾಲೂಕಿನ ವ್ಯಕ್ತಿಯೊಬ್ಬರು ವಾಹನದಲ್ಲಿ ಮಣ್ಣು ಸಾಗಿಸುತ್ತಿದ್ದನ್ನು ನೆಪವಾಗಿಸಿಕೊಂಡಿದ್ದ ಪೊಲೀಸ್ ಸಿಬ್ಬಂದಿ, ಹಣಕ್ಕಾಗಿ ಬೆದರಿಕೆ ಹಾಕಿದ್ದರು. ಮರಳು ಸಾಗಟದ ಆರೋಪ ಹೊರಿಸಿ 30 ಸಾವಿರ ಬೇಡಿಕೆ ಇಟ್ಟಿದ್ದರು. ಹಣ ಹೊಂದಿಸಲಾಗದ ವ್ಯಕ್ತಿ ತನ್ನ ಬಳಿಯಿದ್ದ 4 ಸಾವಿರ ಹಾಗು ಸಾಲವಾಗಿ 3 ಸಾವಿರ ಹಣ ನೀಡಿದ್ದರು. ಉಳಿದ 3 ಸಾವಿರ ಹಣವನ್ನು ಗುರುವಾರ ಬೀಡ ಅಂಗಡಿಯಲ್ಲಿ ನೀಡುವಂತೆ ಪೊಲೀಸ್ ಸಿಬ್ಬಂದಿ ಸೂಚಿಸಿದರು.
ಪೊಲೀಸ್ ಸಿಬ್ಬಂದಿಯ ವರ್ತನೆಯಿಂದ ಬೇಸತ್ತಿದ್ದ ವ್ಯಕ್ತಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ನಂತರ ಗುರುವಾರ ಬೀಡ ಅಂಗಡಿಯಲ್ಲಿ ಹಣ ಪಡೆಯುವ ಸಂದರ್ಭ ಲೋಕಾಯುಕ್ತ ಅಧಿಕಾರಿಗಳಿಗೆ ಸಿಬ್ಬಂದಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಬೀಡ ಅಂಗಡಿಯ ಹಮೀದ್ನ ವೀಚಾರಣೆ ನಡೆಯುತ್ತಿದೆ.
ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಮಡಿಕೇರಿ ಇನ್ಸ್ಪೆಕ್ಟರ್ ಲೋಕೇಶ್, ಮೈಸೂರು ಇನ್ಸ್ಪೆಕ್ಟರ್ ಜಯರತ್ನ, ಹೆಡ್ ಕಾನ್ಸ್ಸ್ಟೇಬಲ್ ಮಂಜುನಾಥ್ ಸಿಬ್ಬಂದಿಗಳಿದ್ದರು.
ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…
ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…
ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…
ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…
ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…
ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…