ಮಡಿಕೇರಿ: ಪೊಲೀಸ್ ಪೇದೆಯೊಬ್ಬ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಡಿಕೇರಿ ನಗರದಲ್ಲಿ ಗುರುವಾರ ನಡೆದಿದೆ.
ಸೋಮಶೇಖರ್ ಸಜ್ಜನ್ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮಾಂತರ ಠಾಣಾ ಸಿಬ್ಬಂದಿ. ಮಡಿಕೇರಿ ತಾಲೂಕಿನ ವ್ಯಕ್ತಿಯೊಬ್ಬರು ವಾಹನದಲ್ಲಿ ಮಣ್ಣು ಸಾಗಿಸುತ್ತಿದ್ದನ್ನು ನೆಪವಾಗಿಸಿಕೊಂಡಿದ್ದ ಪೊಲೀಸ್ ಸಿಬ್ಬಂದಿ, ಹಣಕ್ಕಾಗಿ ಬೆದರಿಕೆ ಹಾಕಿದ್ದರು. ಮರಳು ಸಾಗಟದ ಆರೋಪ ಹೊರಿಸಿ 30 ಸಾವಿರ ಬೇಡಿಕೆ ಇಟ್ಟಿದ್ದರು. ಹಣ ಹೊಂದಿಸಲಾಗದ ವ್ಯಕ್ತಿ ತನ್ನ ಬಳಿಯಿದ್ದ 4 ಸಾವಿರ ಹಾಗು ಸಾಲವಾಗಿ 3 ಸಾವಿರ ಹಣ ನೀಡಿದ್ದರು. ಉಳಿದ 3 ಸಾವಿರ ಹಣವನ್ನು ಗುರುವಾರ ಬೀಡ ಅಂಗಡಿಯಲ್ಲಿ ನೀಡುವಂತೆ ಪೊಲೀಸ್ ಸಿಬ್ಬಂದಿ ಸೂಚಿಸಿದರು.
ಪೊಲೀಸ್ ಸಿಬ್ಬಂದಿಯ ವರ್ತನೆಯಿಂದ ಬೇಸತ್ತಿದ್ದ ವ್ಯಕ್ತಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ನಂತರ ಗುರುವಾರ ಬೀಡ ಅಂಗಡಿಯಲ್ಲಿ ಹಣ ಪಡೆಯುವ ಸಂದರ್ಭ ಲೋಕಾಯುಕ್ತ ಅಧಿಕಾರಿಗಳಿಗೆ ಸಿಬ್ಬಂದಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಬೀಡ ಅಂಗಡಿಯ ಹಮೀದ್ನ ವೀಚಾರಣೆ ನಡೆಯುತ್ತಿದೆ.
ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಮಡಿಕೇರಿ ಇನ್ಸ್ಪೆಕ್ಟರ್ ಲೋಕೇಶ್, ಮೈಸೂರು ಇನ್ಸ್ಪೆಕ್ಟರ್ ಜಯರತ್ನ, ಹೆಡ್ ಕಾನ್ಸ್ಸ್ಟೇಬಲ್ ಮಂಜುನಾಥ್ ಸಿಬ್ಬಂದಿಗಳಿದ್ದರು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…