ಮಡಿಕೇರಿ: ಪೊಲೀಸ್ ಪೇದೆಯೊಬ್ಬ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಡಿಕೇರಿ ನಗರದಲ್ಲಿ ಗುರುವಾರ ನಡೆದಿದೆ.
ಸೋಮಶೇಖರ್ ಸಜ್ಜನ್ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮಾಂತರ ಠಾಣಾ ಸಿಬ್ಬಂದಿ. ಮಡಿಕೇರಿ ತಾಲೂಕಿನ ವ್ಯಕ್ತಿಯೊಬ್ಬರು ವಾಹನದಲ್ಲಿ ಮಣ್ಣು ಸಾಗಿಸುತ್ತಿದ್ದನ್ನು ನೆಪವಾಗಿಸಿಕೊಂಡಿದ್ದ ಪೊಲೀಸ್ ಸಿಬ್ಬಂದಿ, ಹಣಕ್ಕಾಗಿ ಬೆದರಿಕೆ ಹಾಕಿದ್ದರು. ಮರಳು ಸಾಗಟದ ಆರೋಪ ಹೊರಿಸಿ 30 ಸಾವಿರ ಬೇಡಿಕೆ ಇಟ್ಟಿದ್ದರು. ಹಣ ಹೊಂದಿಸಲಾಗದ ವ್ಯಕ್ತಿ ತನ್ನ ಬಳಿಯಿದ್ದ 4 ಸಾವಿರ ಹಾಗು ಸಾಲವಾಗಿ 3 ಸಾವಿರ ಹಣ ನೀಡಿದ್ದರು. ಉಳಿದ 3 ಸಾವಿರ ಹಣವನ್ನು ಗುರುವಾರ ಬೀಡ ಅಂಗಡಿಯಲ್ಲಿ ನೀಡುವಂತೆ ಪೊಲೀಸ್ ಸಿಬ್ಬಂದಿ ಸೂಚಿಸಿದರು.
ಪೊಲೀಸ್ ಸಿಬ್ಬಂದಿಯ ವರ್ತನೆಯಿಂದ ಬೇಸತ್ತಿದ್ದ ವ್ಯಕ್ತಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ನಂತರ ಗುರುವಾರ ಬೀಡ ಅಂಗಡಿಯಲ್ಲಿ ಹಣ ಪಡೆಯುವ ಸಂದರ್ಭ ಲೋಕಾಯುಕ್ತ ಅಧಿಕಾರಿಗಳಿಗೆ ಸಿಬ್ಬಂದಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಬೀಡ ಅಂಗಡಿಯ ಹಮೀದ್ನ ವೀಚಾರಣೆ ನಡೆಯುತ್ತಿದೆ.
ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಮಡಿಕೇರಿ ಇನ್ಸ್ಪೆಕ್ಟರ್ ಲೋಕೇಶ್, ಮೈಸೂರು ಇನ್ಸ್ಪೆಕ್ಟರ್ ಜಯರತ್ನ, ಹೆಡ್ ಕಾನ್ಸ್ಸ್ಟೇಬಲ್ ಮಂಜುನಾಥ್ ಸಿಬ್ಬಂದಿಗಳಿದ್ದರು.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…