Mysore
23
overcast clouds

Social Media

ಶನಿವಾರ, 13 ಜೂನ್ 2026
Light
Dark

ಮಗುವಿನ ಚಿಕಿತ್ಸೆಗೆ ನೆರವಾಗಲು ಮನವಿ

ಮಂಡ್ಯ: ತಲೆಸೀಮಿಯಾ ಕಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗಾಗಿ ಸಹಾಯ ಮಾಡುವಂತೆ ಪೋಷಕರು ಮನವಿ ಮಾಡಿಕೊಂಡಿದ್ದಾರೆ.

ಮದ್ದೂರು ತಾಲ್ಲೂಕು ಬಿದರಕೋಟೆಯ ಪ್ರಸನ್ನಕುಮಾರ್ ಹಾಗೂ ರಮ್ಯಾ ಅವರ 5 ವರ್ಷದ ಗಂಡು ಮಗು ಅಚ್ಚುತ್‌ಕುಮಾರ್ ಕಳೆದ ಒಂದೂವರೆ ವರ್ಷದಿಂದ ತಲೆಸೀಮಿಯಾ ಕಾಯಿಲೆಯಿಂದ ಬಳಲುತ್ತಿದ್ದಾನೆ. ಈಗಾಗಲೇ ಲಕ್ಷಾಂತರ ರೂ. ಚಿಕಿತ್ಸೆಗಾಗಿ ಖರ್ಚಾಗಿದೆ. ದಾನಿಗಳು ಮಗುವಿನ ಚಿಕಿತ್ಸೆಗೆ ಸಹಾಯ ಮಾಡಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಪೋಷಕರು ಮನವಿ ಮಾಡಿದರು.

ಅಚ್ಚುತ್ ಕುಮಾರ್ ಮೂರೂವರೆ ವರ್ಷದವನಿದ್ದಾಗ ಜ್ವರ ಬಂದಿತ್ತು. ಮಗುವನ್ನು ಆಸ್ಪತ್ರೆಗೆ ಕರೆದೊಯ್ಯವಾಗ ಅನಿಮಿಯಾ ಎಂದು ಹೇಳಿದ್ದರು. ನಂತರದ ದಿನಗಳಲ್ಲಿ ಮಗುವಿನ ಆರೋಗ್ಯ ಕ್ಷೀಣಿಸುತ್ತಾ ಬಂತು. ನಾವು ಬೇರೆ ಬೇರೆ ಆಸ್ಪತ್ರೆಗಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದೆವು. ಆದರೂ ಗುಣಮುಖವಾಗಲಿಲ್ಲ. ಬಳಿಕ ನಾರಾಯಣ ಆಸ್ಪತ್ರೆಯಲ್ಲಿ ತೋರಿಸಿದಾಗ ಮಗು ತಲೆಸೀಮಿಯಾ ಕಾಯಿಲೆಯಿಂದ ಬಳಲುತ್ತಿದೆ ಎಂದು ತಿಳಿದುಬಂತು. ಇದರಿಂದ ಗಾಬರಿಗೊಂಡ ನಾವು ಎಲ್ಲ ರೀತಿಯ ಚಿಕಿತ್ಸೆಯನ್ನೂ ಕೊಡಿಸಿದ್ದೆವು. ಆದರೂ ಗುಣವಾಗಲಿಲ್ಲ ಎಂದು ತಮ್ಮ ಅಳಲು ತೋಡಿಕೊಂಡರು.

ಶಸ್ತ್ರ ಚಿಕಿತ್ಸೆ ಮಾಡಿಸಲು ಸುಮಾರು 20 ಲಕ್ಷ ಹಾಗೂ ಒಂದು ವರ್ಷದ ಚಿಕಿತ್ಸೆ 10 ಲಕ್ಷ, ಒಟ್ಟಾರೆ 30 ಲಕ್ಷ ರೂ.ಗಳ ವೆಚ್ಚ ತಗುಲುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. ಇಷ್ಟು ದೊಡ್ಡ ಮೊತ್ತದ ಹಣ ನಮ್ಮಲ್ಲಿ ಇಲ್ಲ. ನಾವು ಇರುವ ತುಂಡು ಭೂಮಿಯಲ್ಲಿ ಕೃಷಿ ಚಟುವಟಿಕೆ ಮಾಡಿಕೊಂಡು ಬದುಕುತ್ತಿದ್ದೇವೆ. ಕೂಲಿ ನಾಲಿ ಮಾಡಿಕೊಂಡು ಜೀವನ ನಡೆಸುತ್ತಿದ್ದೇವೆ. ದಯವಿಟ್ಟು ದಾನಿಗಳು ಮಗುವಿನ ಚಿಕಿತ್ಸೆಗೆ ಸಹಾಯ ಮಾಡಬೇಕು ಎಂದು ಕೋರಿದರು.

ಮಗುವಿನ ಬ್ಯಾಂಕ್ ಆಫ್ ಬರೋಡಾ ಬಿದರಕೋಟೆ ಶಾಖೆಯಲ್ಲಿ ಖಾತೆ ತೆರೆಯಲಾಗಿದೆ. ಉಳಿತಾಯ ಖಾತೆ ಸಂಖ್ಯೆ  73540100002158 ಸಂಖ್ಯೆಗೆ ಹಣ ಕಳುಹಿಸಬಹುದು ಎಂದು ಅವರು ಹೇಳಿದರು. ಪತ್ನಿ ರಮ್ಯಾ ಹಾಗೂ ಮಗ ಅಚ್ಚುತ್ ಕುಮಾರ್ ಗೋಷ್ಠಿಯಲ್ಲಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!