ಜಿಲ್ಲೆಗಳು

ಮಗುವಿನ ಚಿಕಿತ್ಸೆಗೆ ನೆರವಾಗಲು ಮನವಿ

ಮಂಡ್ಯ: ತಲೆಸೀಮಿಯಾ ಕಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗಾಗಿ ಸಹಾಯ ಮಾಡುವಂತೆ ಪೋಷಕರು ಮನವಿ ಮಾಡಿಕೊಂಡಿದ್ದಾರೆ.

ಮದ್ದೂರು ತಾಲ್ಲೂಕು ಬಿದರಕೋಟೆಯ ಪ್ರಸನ್ನಕುಮಾರ್ ಹಾಗೂ ರಮ್ಯಾ ಅವರ 5 ವರ್ಷದ ಗಂಡು ಮಗು ಅಚ್ಚುತ್‌ಕುಮಾರ್ ಕಳೆದ ಒಂದೂವರೆ ವರ್ಷದಿಂದ ತಲೆಸೀಮಿಯಾ ಕಾಯಿಲೆಯಿಂದ ಬಳಲುತ್ತಿದ್ದಾನೆ. ಈಗಾಗಲೇ ಲಕ್ಷಾಂತರ ರೂ. ಚಿಕಿತ್ಸೆಗಾಗಿ ಖರ್ಚಾಗಿದೆ. ದಾನಿಗಳು ಮಗುವಿನ ಚಿಕಿತ್ಸೆಗೆ ಸಹಾಯ ಮಾಡಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಪೋಷಕರು ಮನವಿ ಮಾಡಿದರು.

ಅಚ್ಚುತ್ ಕುಮಾರ್ ಮೂರೂವರೆ ವರ್ಷದವನಿದ್ದಾಗ ಜ್ವರ ಬಂದಿತ್ತು. ಮಗುವನ್ನು ಆಸ್ಪತ್ರೆಗೆ ಕರೆದೊಯ್ಯವಾಗ ಅನಿಮಿಯಾ ಎಂದು ಹೇಳಿದ್ದರು. ನಂತರದ ದಿನಗಳಲ್ಲಿ ಮಗುವಿನ ಆರೋಗ್ಯ ಕ್ಷೀಣಿಸುತ್ತಾ ಬಂತು. ನಾವು ಬೇರೆ ಬೇರೆ ಆಸ್ಪತ್ರೆಗಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದೆವು. ಆದರೂ ಗುಣಮುಖವಾಗಲಿಲ್ಲ. ಬಳಿಕ ನಾರಾಯಣ ಆಸ್ಪತ್ರೆಯಲ್ಲಿ ತೋರಿಸಿದಾಗ ಮಗು ತಲೆಸೀಮಿಯಾ ಕಾಯಿಲೆಯಿಂದ ಬಳಲುತ್ತಿದೆ ಎಂದು ತಿಳಿದುಬಂತು. ಇದರಿಂದ ಗಾಬರಿಗೊಂಡ ನಾವು ಎಲ್ಲ ರೀತಿಯ ಚಿಕಿತ್ಸೆಯನ್ನೂ ಕೊಡಿಸಿದ್ದೆವು. ಆದರೂ ಗುಣವಾಗಲಿಲ್ಲ ಎಂದು ತಮ್ಮ ಅಳಲು ತೋಡಿಕೊಂಡರು.

ಶಸ್ತ್ರ ಚಿಕಿತ್ಸೆ ಮಾಡಿಸಲು ಸುಮಾರು 20 ಲಕ್ಷ ಹಾಗೂ ಒಂದು ವರ್ಷದ ಚಿಕಿತ್ಸೆ 10 ಲಕ್ಷ, ಒಟ್ಟಾರೆ 30 ಲಕ್ಷ ರೂ.ಗಳ ವೆಚ್ಚ ತಗುಲುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. ಇಷ್ಟು ದೊಡ್ಡ ಮೊತ್ತದ ಹಣ ನಮ್ಮಲ್ಲಿ ಇಲ್ಲ. ನಾವು ಇರುವ ತುಂಡು ಭೂಮಿಯಲ್ಲಿ ಕೃಷಿ ಚಟುವಟಿಕೆ ಮಾಡಿಕೊಂಡು ಬದುಕುತ್ತಿದ್ದೇವೆ. ಕೂಲಿ ನಾಲಿ ಮಾಡಿಕೊಂಡು ಜೀವನ ನಡೆಸುತ್ತಿದ್ದೇವೆ. ದಯವಿಟ್ಟು ದಾನಿಗಳು ಮಗುವಿನ ಚಿಕಿತ್ಸೆಗೆ ಸಹಾಯ ಮಾಡಬೇಕು ಎಂದು ಕೋರಿದರು.

ಮಗುವಿನ ಬ್ಯಾಂಕ್ ಆಫ್ ಬರೋಡಾ ಬಿದರಕೋಟೆ ಶಾಖೆಯಲ್ಲಿ ಖಾತೆ ತೆರೆಯಲಾಗಿದೆ. ಉಳಿತಾಯ ಖಾತೆ ಸಂಖ್ಯೆ  73540100002158 ಸಂಖ್ಯೆಗೆ ಹಣ ಕಳುಹಿಸಬಹುದು ಎಂದು ಅವರು ಹೇಳಿದರು. ಪತ್ನಿ ರಮ್ಯಾ ಹಾಗೂ ಮಗ ಅಚ್ಚುತ್ ಕುಮಾರ್ ಗೋಷ್ಠಿಯಲ್ಲಿದ್ದರು.

andolanait

Recent Posts

ಚಿತ್ರದುರ್ಗದಲ್ಲಿ ಭೀಕರ ಬಸ್‌ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಬಳಿ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10ಕ್ಕೂ…

23 mins ago

ಭೀಕರ ರಸ್ತೆ ದುರಂತ: ಬಸ್‌ಗೆ ಬೆಂಕಿ ತಗುಲಿ 10ಕ್ಕೂ ಹೆಚ್ಚು ಮಂದಿ ಸಾವು

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಕ್ರಾಸ್‌ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಸಜೀವ…

32 mins ago

ಓದುಗರ ಪತ್ರ:  ಮರ್ಯಾದಾ ಹತ್ಯೆಯಲ್ಲಿ ಜಾತಿ ಜೀವಂತಿಕೆ

ಜಾತಿ ವ್ಯವಸ್ಥೆಯು ಅಸಮಾನತೆಯನ್ನು ಸೃಷ್ಟಿ ಮಾಡಿದೆ. ಈ ಜಾತಿ ವ್ಯವಸ್ಥೆ ಈಗಲೂ ಜೀವಂತ ವಾಗಿದೆ ಎನ್ನುವುದಕ್ಕೆ ಬೇರೆ ಜಾತಿಯ ಹುಡುಗನನ್ನು…

46 mins ago

ಓದುಗರ ಪತ್ರ:  ಚಲನಚಿತ್ರ ರಂಗದಲ್ಲಿ ಏನಿದು ಗದ್ದಲ?

೬೦ರ ದಶಕದ ಸಿನಿಮಾರಂಗ ಯಾವ ಗಲಾಟೆ ಇಲ್ಲದೆ ಸಾಗಿತ್ತು. ರಾಜಕುಮಾರ್ ಅವರ ಸಮಕಾಲಿನ ನಟರಾದ ಕಲ್ಯಾಣ್ ಕುಮಾರ್, ಶ್ರೀನಾಥ್, ನರಸಿಂಹರಾಜು,…

47 mins ago

ಓದುಗರ ಪತ್ರ: ಚಾಮುಂಡಿಬೆಟ್ಟ ಯಥಾಸ್ಥಿತಿಯಲ್ಲೇ ಇರಲಿ

ನಾಡದೇವತೆಯಾದ ಶ್ರೀ ಚಾಮುಂಡೇಶ್ವರಿ ನೆಲೆಸಿರುವ ಬೆಟ್ಟವನ್ನು ಯಥಾಸ್ಥಿತಿಯಲ್ಲಿ ಇರುವಂತೆ ಉಳಿಸಿಕೊಳ್ಳುವುದು ಮೈಸೂರಿಗರ ಆದ್ಯ ಕರ್ತವ್ಯವಾಗಿದೆ. ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ…

50 mins ago

ಓದುಗರ ಪತ್ರ: ಪುಸ್ತಕ ಉಡುಗೊರೆ ಸಂಸ್ಕೃತಿ ಬೆಳೆಸಿ

ಚಿತ್ರದುರ್ಗದ ಪೇಟೆ ಬೀದಿಯ ಉಡುಗೊರೆ (ಗಿಫ್ಟ್) ಮಾರಾಟ ಮಳಿಗೆ ಮಕ್ಕಳು ಮತ್ತು ಪೋಷಕರಿಂದ ತುಂಬಿ ಹೋಗಿತ್ತು. ಅಲ್ಲಿದ್ದ ಹುಡುಗರನ್ನು ಏಕೆ…

1 hour ago