ಜಿಲ್ಲೆಗಳು

ಮಗುವಿನ ಚಿಕಿತ್ಸೆಗೆ ನೆರವಾಗಲು ಮನವಿ

ಮಂಡ್ಯ: ತಲೆಸೀಮಿಯಾ ಕಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗಾಗಿ ಸಹಾಯ ಮಾಡುವಂತೆ ಪೋಷಕರು ಮನವಿ ಮಾಡಿಕೊಂಡಿದ್ದಾರೆ.

ಮದ್ದೂರು ತಾಲ್ಲೂಕು ಬಿದರಕೋಟೆಯ ಪ್ರಸನ್ನಕುಮಾರ್ ಹಾಗೂ ರಮ್ಯಾ ಅವರ 5 ವರ್ಷದ ಗಂಡು ಮಗು ಅಚ್ಚುತ್‌ಕುಮಾರ್ ಕಳೆದ ಒಂದೂವರೆ ವರ್ಷದಿಂದ ತಲೆಸೀಮಿಯಾ ಕಾಯಿಲೆಯಿಂದ ಬಳಲುತ್ತಿದ್ದಾನೆ. ಈಗಾಗಲೇ ಲಕ್ಷಾಂತರ ರೂ. ಚಿಕಿತ್ಸೆಗಾಗಿ ಖರ್ಚಾಗಿದೆ. ದಾನಿಗಳು ಮಗುವಿನ ಚಿಕಿತ್ಸೆಗೆ ಸಹಾಯ ಮಾಡಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಪೋಷಕರು ಮನವಿ ಮಾಡಿದರು.

ಅಚ್ಚುತ್ ಕುಮಾರ್ ಮೂರೂವರೆ ವರ್ಷದವನಿದ್ದಾಗ ಜ್ವರ ಬಂದಿತ್ತು. ಮಗುವನ್ನು ಆಸ್ಪತ್ರೆಗೆ ಕರೆದೊಯ್ಯವಾಗ ಅನಿಮಿಯಾ ಎಂದು ಹೇಳಿದ್ದರು. ನಂತರದ ದಿನಗಳಲ್ಲಿ ಮಗುವಿನ ಆರೋಗ್ಯ ಕ್ಷೀಣಿಸುತ್ತಾ ಬಂತು. ನಾವು ಬೇರೆ ಬೇರೆ ಆಸ್ಪತ್ರೆಗಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದೆವು. ಆದರೂ ಗುಣಮುಖವಾಗಲಿಲ್ಲ. ಬಳಿಕ ನಾರಾಯಣ ಆಸ್ಪತ್ರೆಯಲ್ಲಿ ತೋರಿಸಿದಾಗ ಮಗು ತಲೆಸೀಮಿಯಾ ಕಾಯಿಲೆಯಿಂದ ಬಳಲುತ್ತಿದೆ ಎಂದು ತಿಳಿದುಬಂತು. ಇದರಿಂದ ಗಾಬರಿಗೊಂಡ ನಾವು ಎಲ್ಲ ರೀತಿಯ ಚಿಕಿತ್ಸೆಯನ್ನೂ ಕೊಡಿಸಿದ್ದೆವು. ಆದರೂ ಗುಣವಾಗಲಿಲ್ಲ ಎಂದು ತಮ್ಮ ಅಳಲು ತೋಡಿಕೊಂಡರು.

ಶಸ್ತ್ರ ಚಿಕಿತ್ಸೆ ಮಾಡಿಸಲು ಸುಮಾರು 20 ಲಕ್ಷ ಹಾಗೂ ಒಂದು ವರ್ಷದ ಚಿಕಿತ್ಸೆ 10 ಲಕ್ಷ, ಒಟ್ಟಾರೆ 30 ಲಕ್ಷ ರೂ.ಗಳ ವೆಚ್ಚ ತಗುಲುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. ಇಷ್ಟು ದೊಡ್ಡ ಮೊತ್ತದ ಹಣ ನಮ್ಮಲ್ಲಿ ಇಲ್ಲ. ನಾವು ಇರುವ ತುಂಡು ಭೂಮಿಯಲ್ಲಿ ಕೃಷಿ ಚಟುವಟಿಕೆ ಮಾಡಿಕೊಂಡು ಬದುಕುತ್ತಿದ್ದೇವೆ. ಕೂಲಿ ನಾಲಿ ಮಾಡಿಕೊಂಡು ಜೀವನ ನಡೆಸುತ್ತಿದ್ದೇವೆ. ದಯವಿಟ್ಟು ದಾನಿಗಳು ಮಗುವಿನ ಚಿಕಿತ್ಸೆಗೆ ಸಹಾಯ ಮಾಡಬೇಕು ಎಂದು ಕೋರಿದರು.

ಮಗುವಿನ ಬ್ಯಾಂಕ್ ಆಫ್ ಬರೋಡಾ ಬಿದರಕೋಟೆ ಶಾಖೆಯಲ್ಲಿ ಖಾತೆ ತೆರೆಯಲಾಗಿದೆ. ಉಳಿತಾಯ ಖಾತೆ ಸಂಖ್ಯೆ  73540100002158 ಸಂಖ್ಯೆಗೆ ಹಣ ಕಳುಹಿಸಬಹುದು ಎಂದು ಅವರು ಹೇಳಿದರು. ಪತ್ನಿ ರಮ್ಯಾ ಹಾಗೂ ಮಗ ಅಚ್ಚುತ್ ಕುಮಾರ್ ಗೋಷ್ಠಿಯಲ್ಲಿದ್ದರು.

andolanait

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

4 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

10 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

10 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

10 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

10 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

11 hours ago