ಜಿಲ್ಲೆಗಳು

ಕೆ.ಆರ್.ಆಸ್ಪತ್ರೆಯಲ್ಲಿ ಪ್ರತ್ಯೇಕ ‘ಜ್ವರ ತಪಾಸಣಾ ಕೇಂದ್ರ’

ಮೈಸೂರು: ಕೊರೊನಾ ಸೋಂಕಿನ ನಾಲ್ಕನೇ ಅಲೆಯ ಮುಂಜಾಗ್ರತಾ ಕ್ರಮವಾಗಿ ಕೆ.ಆರ್.ಆಸ್ಪತ್ರೆಯ ಹಳೇ ಜಯದೇವ ಆಸ್ಪತ್ರೆ ಕಟ್ಟಡದಲ್ಲಿ ಜ್ವರ ತಪಾಸಣಾ ಕೇಂದ್ರವನ್ನು ತೆರೆಯಲಾಗಿದೆ.
ಸಾಧಾರಣ ಜ್ವರ, ನೆಗಡಿ, ಕೆಮ್ಮು ಖಾತರಿಯಾದಲ್ಲಿ ಔಷಧಿ-ಮಾತ್ರೆಗಳನ್ನು ಸೇವಿಸುವುದರ ಜತೆಗೆ ಮನೆಯಲ್ಲೇ ಕ್ವಾರಂಟೈನ್‌ನಲ್ಲಿರುವಂತೆ ಸೂಚಿಸಲಾಗುತ್ತಿದೆ. ಕೊರೊನಾ ಸೋಂಕಿನ ಲಕ್ಷಣಗಳಿರುವವರಿಗೆ ಪ್ರತ್ಯೇಕವಾಗಿ ಹೊರರೋಗಿ ಚೀಟಿ ನೀಡಿ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಕೇಂದ್ರದಲ್ಲಿ ಈಗಾಗಲೇ ೨೦ ಬೆಡ್‌ಗಳ ವ್ಯವಸ್ಥೆ ಕಲ್ಪಿಸಿ, ದಾಖಲಾದವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಪರಿಶೀಲನೆ: ಕೆ.ಆರ್.ಆಸ್ಪತ್ರೆಯ ಹಳೇ ಜುಂದೇವ ಕಟ್ಟಡದಲ್ಲಿ ತೆರೆದಿರುವ ‘ಜ್ವರದ ಕ್ಲಿನಿಕ್‌ಗೆ ಭೇಟಿ ನೀಡಿದ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕರಾದ ಡಾ.ಕೆ.ಆರ್.ದಾಕ್ಷಾಯಣಿ ಪರಿಶೀಲನೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ನೀಡಿರುವ ಮಾರ್ಗಸೂಚಿಗಳ ಅನ್ವಯ ಸಾರ್ವಜನಿಕರಲ್ಲಿ ಭಯ ಉಂಟು ಮಾಡದಂತೆ ಚಿಕಿತ್ಸೆ ನೀಡುವ ದೃಷ್ಟಿಯಿಂದ ಪ್ರತ್ಯೇಕವಾಗಿ ‘ಜ್ವರದ ಕ್ಲಿನಿಕ್’ ತೆರೆಯಲಾಗಿದೆ. ಇಲ್ಲಿ ಜ್ವರ, ನೆಗಡಿ, ಕೆಮ್ಮು, ಮೈ ಕೈ ನೋವು ಎಂದು ಬರುವ ರೋಗಿಗಳು ಬೇರೆ ರೋಗಿಗಳ ಜೊತೆ ಸೇರದಂತೆ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡುವ ವ್ಯವಸ್ಥೆ ವಾಡಿಕೊಳ್ಳಲಾಗಿದೆ. ಇಲ್ಲಿಯೇ ಒಪಿಡಿ ( ಹೊರರೋಗಿ ರಶೀದಿ ) ಚೀಟಿ ನೀಡಿ ತಪಾಸಣೆ ನಡೆಸಿ ಚಿಕಿತ್ಸೆ ನೀಡಲಾಗುವುದು. ಅಗತ್ಯವಿದ್ದರೆ ಮಾತ್ರ ದಾಖಲು ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಸೋಂಕು ದೃಢಪಟ್ಟಿಲ್ಲ : ಕೆ.ಆರ್.ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳಿಂದ ಪ್ರತಿದಿನ ಸರಾಸರಿ ೫೦-೬೦ ಮಂದಿಗೆ ಕೊರೊನಾ ತಪಾಸಣೆ ಮಾಡಲಾಗುತ್ತಿದ್ದು, ಇಲ್ಲಿಯವರೆಗೆ ಯಾರಿಗೂ ಕೋವಿಡ್ ಸೋಂಕು ದೃಢಪಟ್ಟಿಲ್ಲ. ಸೋಂಕಿನ ಲಕ್ಷಣಗಳಿದ್ದು, ದಾಖಲಾಗುವವರಿಗೆ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ಮಾಹಿತಿ ನೀಡಿದರು.
ಕೆ.ಆರ್.ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ನಂಜುಂಡ ಸ್ವಾಮಿ, ಆರ್‌ಎಂಒ ರಾಜೇಶ್, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಸಿಇ ರಕ್ಷಿತ್ ಮತ್ತಿತರರು ಹಾಜರಿದ್ದರು.

andolanait

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

24 mins ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

34 mins ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

44 mins ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

1 hour ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

1 hour ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

1 hour ago