ಜಿಲ್ಲೆಗಳು

ಕೆ.ಆರ್.ಆಸ್ಪತ್ರೆಯಲ್ಲಿ ಪ್ರತ್ಯೇಕ ‘ಜ್ವರ ತಪಾಸಣಾ ಕೇಂದ್ರ’

ಮೈಸೂರು: ಕೊರೊನಾ ಸೋಂಕಿನ ನಾಲ್ಕನೇ ಅಲೆಯ ಮುಂಜಾಗ್ರತಾ ಕ್ರಮವಾಗಿ ಕೆ.ಆರ್.ಆಸ್ಪತ್ರೆಯ ಹಳೇ ಜಯದೇವ ಆಸ್ಪತ್ರೆ ಕಟ್ಟಡದಲ್ಲಿ ಜ್ವರ ತಪಾಸಣಾ ಕೇಂದ್ರವನ್ನು ತೆರೆಯಲಾಗಿದೆ.
ಸಾಧಾರಣ ಜ್ವರ, ನೆಗಡಿ, ಕೆಮ್ಮು ಖಾತರಿಯಾದಲ್ಲಿ ಔಷಧಿ-ಮಾತ್ರೆಗಳನ್ನು ಸೇವಿಸುವುದರ ಜತೆಗೆ ಮನೆಯಲ್ಲೇ ಕ್ವಾರಂಟೈನ್‌ನಲ್ಲಿರುವಂತೆ ಸೂಚಿಸಲಾಗುತ್ತಿದೆ. ಕೊರೊನಾ ಸೋಂಕಿನ ಲಕ್ಷಣಗಳಿರುವವರಿಗೆ ಪ್ರತ್ಯೇಕವಾಗಿ ಹೊರರೋಗಿ ಚೀಟಿ ನೀಡಿ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಕೇಂದ್ರದಲ್ಲಿ ಈಗಾಗಲೇ ೨೦ ಬೆಡ್‌ಗಳ ವ್ಯವಸ್ಥೆ ಕಲ್ಪಿಸಿ, ದಾಖಲಾದವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಪರಿಶೀಲನೆ: ಕೆ.ಆರ್.ಆಸ್ಪತ್ರೆಯ ಹಳೇ ಜುಂದೇವ ಕಟ್ಟಡದಲ್ಲಿ ತೆರೆದಿರುವ ‘ಜ್ವರದ ಕ್ಲಿನಿಕ್‌ಗೆ ಭೇಟಿ ನೀಡಿದ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕರಾದ ಡಾ.ಕೆ.ಆರ್.ದಾಕ್ಷಾಯಣಿ ಪರಿಶೀಲನೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ನೀಡಿರುವ ಮಾರ್ಗಸೂಚಿಗಳ ಅನ್ವಯ ಸಾರ್ವಜನಿಕರಲ್ಲಿ ಭಯ ಉಂಟು ಮಾಡದಂತೆ ಚಿಕಿತ್ಸೆ ನೀಡುವ ದೃಷ್ಟಿಯಿಂದ ಪ್ರತ್ಯೇಕವಾಗಿ ‘ಜ್ವರದ ಕ್ಲಿನಿಕ್’ ತೆರೆಯಲಾಗಿದೆ. ಇಲ್ಲಿ ಜ್ವರ, ನೆಗಡಿ, ಕೆಮ್ಮು, ಮೈ ಕೈ ನೋವು ಎಂದು ಬರುವ ರೋಗಿಗಳು ಬೇರೆ ರೋಗಿಗಳ ಜೊತೆ ಸೇರದಂತೆ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡುವ ವ್ಯವಸ್ಥೆ ವಾಡಿಕೊಳ್ಳಲಾಗಿದೆ. ಇಲ್ಲಿಯೇ ಒಪಿಡಿ ( ಹೊರರೋಗಿ ರಶೀದಿ ) ಚೀಟಿ ನೀಡಿ ತಪಾಸಣೆ ನಡೆಸಿ ಚಿಕಿತ್ಸೆ ನೀಡಲಾಗುವುದು. ಅಗತ್ಯವಿದ್ದರೆ ಮಾತ್ರ ದಾಖಲು ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಸೋಂಕು ದೃಢಪಟ್ಟಿಲ್ಲ : ಕೆ.ಆರ್.ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳಿಂದ ಪ್ರತಿದಿನ ಸರಾಸರಿ ೫೦-೬೦ ಮಂದಿಗೆ ಕೊರೊನಾ ತಪಾಸಣೆ ಮಾಡಲಾಗುತ್ತಿದ್ದು, ಇಲ್ಲಿಯವರೆಗೆ ಯಾರಿಗೂ ಕೋವಿಡ್ ಸೋಂಕು ದೃಢಪಟ್ಟಿಲ್ಲ. ಸೋಂಕಿನ ಲಕ್ಷಣಗಳಿದ್ದು, ದಾಖಲಾಗುವವರಿಗೆ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ಮಾಹಿತಿ ನೀಡಿದರು.
ಕೆ.ಆರ್.ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ನಂಜುಂಡ ಸ್ವಾಮಿ, ಆರ್‌ಎಂಒ ರಾಜೇಶ್, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಸಿಇ ರಕ್ಷಿತ್ ಮತ್ತಿತರರು ಹಾಜರಿದ್ದರು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago